AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆಯುಟ್ಟು, ಸನ್​​​ ಗ್ಲಾಸ್​​ ಧರಿಸಿ ಫುಟ್‌ಬಾಲ್​​ ಆಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ನೆಟ್ಟಿಗರಿಂದ ಮೆಚ್ಚುಗೆ

ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‌ನ ಮೋಜಿನ ಕ್ಷಣಗಳು. ಹೌದು, ನಾನು ಸೀರೆಯಲ್ಲಿ ಆಡುತ್ತೇನೆ" ಎಂದು ಮಹುವಾ ಟ್ವೀಟ್ ಮಾಡಿದ್ದಾರೆ.

ಸೀರೆಯುಟ್ಟು, ಸನ್​​​ ಗ್ಲಾಸ್​​ ಧರಿಸಿ ಫುಟ್‌ಬಾಲ್​​ ಆಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ನೆಟ್ಟಿಗರಿಂದ ಮೆಚ್ಚುಗೆ
ಮಹುವಾ ಮೊಯಿತ್ರಾ
TV9 Web
| Edited By: |

Updated on:Sep 19, 2022 | 5:40 PM

Share

ದೆಹಲಿ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಇಂದು ಕೃಷ್ಣಾನಗರ ಎಂಪಿ ಕಪ್ ಟೂರ್ನಮೆಂಟ್‌ನಲ್ಲಿ ಸೀರೆಯುಟ್ಟು ಫುಟ್‌ಬಾಲ್ (Football) ಆಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.ಮೊಯಿತ್ರಾ ಅವರು ಟ್ವಿಟರ್​​​ ನಲ್ಲಿ ಅಪ್‌ಲೋಡ್ ಮಾಡಿದ ಚಿತ್ರಗಳಲ್ಲಿ, ಅವರು ಕೆಂಪು-ಕಿತ್ತಳೆ ಬಣ್ಣದ ಸೀರೆಯುಟ್ಟಿದ್ದು ಸ್ಫೋರ್ಟ್ಸ್ ಶೂ ಧರಿಸಿದ್ದಾರೆ. ಕಣ್ಣಿಗೆ ಸನ್‌ಗ್ಲಾಸ್‌ಗಳನ್ನು ಧರಿಸಿದ್ದಾರೆ. ಮೊದಲ ಚಿತ್ರದಲ್ಲಿ ಅವರು ಚೆಂಡನ್ನು ಕಿಕ್ ಮಾಡುತ್ತಿದ್ದು, ಇನ್ನೊಂದು ಚಿತ್ರದಲ್ಲಿ ಅವರು ಗೋಲ್ ಕೀಪರ್ ಆಗಿ ಚೆಂಡು ಗೋಲ್ ಪೋಸ್ಟ್ ಗೆ ಹೋಗದಂತೆ ತಡೆಯುತ್ತಿರುವುದನ್ನು ಕಾಣಬಹುದು.  “ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‌ನ ಮೋಜಿನ ಕ್ಷಣಗಳು. ಹೌದು, ನಾನು ಸೀರೆಯಲ್ಲಿ ಆಡುತ್ತೇನೆ” ಎಂದು ಮಹುವಾ ಟ್ವೀಟ್ ಮಾಡಿದ್ದಾರೆ. ಸಂಸದೆ ಸೀರೆ ಉಟ್ಟುಕೊಂಡು ಆಟವಾಡುತ್ತಿರುವುದನ್ನು ನೋಡಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜಕಾರಣಿ ಮತ್ತು ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ, ಮಹುವಾ ಟ್ವೀಟ್ ಗೆ ಕಾಮೆಂಟ್ ಮಾಡಿದ್ದು ಕೂಲ್, ಲವ್ ದಿ ಶಾಟ್ ಎಂದು  ಹೇಳಿದ್ದಾರೆ

ಇದು ಅದ್ಭುತವಾಗಿದೆ, ನೀವು ತುಂಬಾ ಪ್ರಶಂಸನೀಯರು ಎಂದು ಮತ್ತೊಬ್ಬ ಬಳಕೆದಾರರು ಹೇಳಿದ್ದಾರೆ.

ಸಂಸದೆ ಮಹುವಾ ಮೊಯಿತ್ರಾ ಅವರು ಫುಟ್‌ಬಾಲ್ ಮೈದಾನದಲ್ಲಿ ಸೀರೆಯುಟ್ಟು ಆಡಿದ್ದು ಇದೇ ಮೊದಲಲ್ಲ. ತೃಣಮೂಲ ಕಾಂಗ್ರೆಸ್ ಖೇಲಾ ಹೋಬ್ ದಿಬಸ್ ಅನ್ನು ಆಚರಿಸಿದಾಗ ಮತ್ತು ಕ್ರೀಡೆಗಳನ್ನು ಉತ್ತೇಜಿಸಲು ಪಶ್ಚಿಮ ಬಂಗಾಳದಾದ್ಯಂತ ಪಂದ್ಯಗಳನ್ನು ಆಯೋಜಿಸಿದಾಗ ಅವರು ಈ ಹಿಂದೆ ಫುಟ್ಬಾಲ್ ಆಡುವ ಚಿತ್ರಗಳನ್ನು ಹಂಚಿಕೊಂಡಿದ್ದರು.

Published On - 4:57 pm, Mon, 19 September 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ