AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ?

ಟಿಎಂಸಿ ಬಂಡಾಯ ಸಂಸದರು 'ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ' (NCPI) ಸೇರಲು ಮುಂದಾಗಿದ್ದು, ಜ್ಯೋತಿಪ್ರಕಾಶ್ ಚಟರ್ಜಿ ಹೊಸ ಅಧ್ಯಕ್ಷರಾಗಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ವಿಲೀನ ಅರ್ಜಿ ಪರಿಶೀಲಿಸಿ, ಕಾನೂನು ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದು ಎನ್​ಡಿಎ ಮೈತ್ರಿಕೂಟದ ಸಮೀಕರಣ ಬದಲಿಸಿ, ಎನ್​ಸಿಪಿಐ ಎರಡನೇ ಅತಿ ದೊಡ್ಡ ಪಕ್ಷವಾಗುವ ಸಾಧ್ಯತೆ ಇದೆ. ಆದರೆ, ಎನ್​ಸಿಪಿಐ ಪಕ್ಷದೊಳಗೇ ಗೊಂದಲಗಳಿವೆ.

ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ?
ಬಂಡಾಯ ಸಂಸದರುImage Credit source: The Siasat Daily
ನಯನಾ ರಾಜೀವ್
|

Updated on: Jun 17, 2026 | 8:07 AM

Share

ಕೋಲ್ಕತ್ತಾ, ಜೂನ್ 17: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಬಂಡಾಯ ಸಂಸದರು ವಿಲೀನಗೊಳ್ಳಲು ಬಯಸಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷಕ್ಕೆ ಜ್ಯೋತಿಪ್ರಕಾಶ್ ಚಟರ್ಜಿ ಅವರನ್ನು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತ, ಟಿಎಂಸಿಯ ಮೂರನೇ ಎರಡರಷ್ಟು ಸಂಸದರೊಂದಿಗೆ ಬಂಡಾಯ ಎದ್ದಿರುವ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವಿಲೀನದ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರ ಮುಂದಿನ ನಡೆ ಏನು? ಮೂಲಗಳ ಪ್ರಕಾರ, ಬಂಡಾಯ ಸಂಸದರ ಮನವಿಯನ್ನು ಸ್ವೀಕರಿಸಿರುವ ಸ್ಪೀಕರ್ ಓಂ ಬಿರ್ಲಾ ಅವರು ತಕ್ಷಣವೇ ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಅವರು ಬಂಡಾಯ ಬಣದ ವಾದವನ್ನು ಕೇಳುವುದರ ಜೊತೆಗೆ, ಮಮತಾ ಬ್ಯಾನರ್ಜಿ ನೇತೃತ್ವದ ಅಧಿಕೃತ ಟಿಎಂಸಿ ನಾಯಕರ ಅಭಿಪ್ರಾಯವನ್ನೂ ಪಡೆಯಲಿದ್ದಾರೆ.

ಜುಲೈ ಮೂರನೇ ವಾರದಲ್ಲಿ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಈ ಬಗ್ಗೆ ಅಂತಿಮ ತೀರ್ಮಾನ ಹೊರಬರಲಿದೆ. ಭವಿಷ್ಯದಲ್ಲಿ ಈ ವಿಷಯವು ನ್ಯಾಯಾಲಯದ ಮೆಟ್ಟಿಲೇರಿದರೆ ಯಾವುದೇ ಕಾನೂನು ತೊಡಕು ಎದುರಾಗಬಾರದು ಎಂಬ ಕಾರಣಕ್ಕೆ, ಸ್ಪೀಕರ್ ಅವರು ಕೇಂದ್ರ ಕಾನೂನು ಸಚಿವಾಲಯದಿಂದ ಲಿಖಿತ ಕಾನೂನು ಅಭಿಪ್ರಾಯವನ್ನು ಪಡೆಯಲಿದ್ದಾರೆ.

ಮತ್ತಷ್ಟು ಓದಿ: ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ಎನ್‌ಡಿಎ (NDA) ಮೈತ್ರಿಕೂಟದಲ್ಲಿ ಬದಲಾಗಲಿದೆ ಸಮೀಕರಣ ಬಂಡಾಯ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಅವರ ಪ್ರಕಾರ, ಸದ್ಯಕ್ಕೆ ಅವರ ಬಣದಲ್ಲಿ 20 ಸಂಸದರಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಈ ಸಂಖ್ಯೆ 22 ಕ್ಕೆ ಏರಲಿದೆ. ಈ ಎಲ್ಲಾ ಬಂಡಾಯ ಸಂಸದರನ್ನು ಸೇರಿಸಿಕೊಳ್ಳಲು ಎನ್‌ಸಿಪಿಐ ಒಪ್ಪಿಕೊಂಡಿದೆ.

ಒಂದು ವೇಳೆ ಲೋಕಸಭಾ ಸ್ಪೀಕರ್ ಈ ಬಂಡಾಯ ಗುಂಪನ್ನು ಎನ್‌ಸಿಪಿಐ ಪಕ್ಷದ ಸಂಸದರೆಂದು ಅಧಿಕೃತವಾಗಿ ಗುರುತಿಸಿದರೆ, ಕೇಂದ್ರದಲ್ಲಿರುವ ಎನ್‌ಡಿಎ (NDA) ಮೈತ್ರಿಕೂಟದ ಸಮೀಕರಣವೇ ಬದಲಾಗಲಿದೆ. ಏಕೆಂದರೆ, ಪ್ರಸ್ತುತ ಎನ್‌ಡಿಎ ಮೈತ್ರಿಕೂಟದಲ್ಲಿ ಟಿಡಿಪಿ (16 ಸಂಸದರು) ಮತ್ತು ಜೆಡಿಯು (12 ಸಂಸದರು) ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಹೊಂದುವ ಮೂಲಕ ಎನ್‌ಸಿಪಿಐ ಒಕ್ಕೂಟದ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.

ಎನ್‌ಸಿಪಿಐ ಪಕ್ಷದೊಳಗೇ ಗೊಂದಲ ಎನ್‌ಸಿಪಿಐ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶಾಂತನು ಡೇ ಅವರು ಈ ಬೆಳವಣಿಗೆಗಳ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ (PTI) ಜೊತೆ ಹೇಳಿದ್ದಾರೆ. ಹೊಸ ಅಧ್ಯಕ್ಷರಾಗಿದ್ದಾರೆ ಎನ್ನಲಾದ ಜ್ಯೋತಿಪ್ರಕಾಶ್ ಚಟರ್ಜಿ ಯಾರೆಂದೇ ನನಗೆ ಗೊತ್ತಿಲ್ಲ. ದೊಡ್ಡ ನಾಯಕರು ನಮ್ಮ ಪಕ್ಷಕ್ಕೆ ಬರುತ್ತಿರುವುದು ಸಂತೋಷವೇ, ಆದರೆ ನಮ್ಮನ್ನು ಕತ್ತಲೆಯಲ್ಲಿ ಇಟ್ಟಿರುವುದು ನಿರಾಶೆ ಮೂಡಿಸಿದೆ ಎಂದು ಡೇ ಹೇಳಿದ್ದಾರೆ.

ಎನ್‌ಸಿಪಿಐ (NCPI) ಪಕ್ಷವನ್ನು 2023 ರಲ್ಲಿ ಸ್ಥಾಪಿಸಲಾಗಿದ್ದು, ಪಶ್ಚಿಮ ಬಂಗಾಳದ ಹೌರಾದಲ್ಲಿ ಇದರ ಪ್ರಧಾನ ಕಚೇರಿ ಇದೆ. ಈ ಪಕ್ಷವು ಈ ಹಿಂದೆ ತ್ರಿಪುರ ವಿಧಾನಸಭಾ ಚುನಾವಣೆಯ ಕೆಲವು ಸ್ಥಾನಗಳಲ್ಲೂ ಸ್ಪರ್ಧಿಸಿತ್ತು. ಸದ್ಯ ಈ ಪಕ್ಷದ ಹೆಸರಿನಲ್ಲೇ ಸಂಸತ್ತಿನಲ್ಲಿ ಪ್ರತ್ಯೇಕ ಮಾನ್ಯತೆ ಪಡೆಯಲು ಬಂಡಾಯ ಸಂಸದರು ಹೋರಾಟ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ