AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

Mamata Banerjee ಮುಖ್ಯಮಂತ್ರಿಯಾಗಿ ಉಳಿಯಲು ಬ್ಯಾನರ್ಜಿ ಇಲ್ಲಿ ಗೆಲ್ಲಬೇಕಾಗಿರುವುದರಿಂದ ಎಲ್ಲರ ಕಣ್ಣುಗಳು ಭವಾನಿಪುರ ಉಪಚುನಾವಣೆಯ ಮೇಲೆ ಇವೆ. ಪೂರ್ಬ ಮೇದಿನೀಪುರದ ನಂದಿಗ್ರಾಮದಿಂದ ವಿಧಾನಸಭಾ ಚುನಾವಣೆಯಲ್ಲಿ ಮಮತಾ 1,956 ಮತಗಳಿಂದ ಸೋತಿದ್ದರು.

Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ
ಮಮತಾ ಬ್ಯಾನರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 06, 2021 | 11:25 AM

Share

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ((TMC) ಭಾನುವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)  ಅವರು ಸೆಪ್ಟೆಂಬರ್ 30 ರಂದು ಭವಾನಿಪುರ (Bhabanipur) ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ. ಅದೇ ವೇಳೆ  ಬಿಜೆಪಿ ತನ್ನ ರಾಜ್ಯ ನಾಯಕತ್ವದ ಸಭೆಯನ್ನು ಮಂಗಳವಾರ ಆಯೋಜಿಸಿ ಮೂರು ಅಭ್ಯರ್ಥಿಗಳಿಗೆ ಅಂತಿಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವುದಾಗಿ ಹೇಳಿದೆ. ಮೂಲಗಳು ಹೇಳುವಂತೆ ಭವಾನಿಪುರ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಕಷ್ಟಕರವಾದ ಕೆಲಸವಾಗಿದೆ. ಟಿಎಂಸಿ ಜಕೀರ್ ಹೊಸೈನ್ ಮತ್ತು ಅಮಿರುಲ್ ಇಸ್ಲಾಂ ಅವರನ್ನು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಿಂದ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯಾಗಿ ಉಳಿಯಲು ಬ್ಯಾನರ್ಜಿ ಇಲ್ಲಿ ಗೆಲ್ಲಬೇಕಾಗಿರುವುದರಿಂದ ಎಲ್ಲರ ಕಣ್ಣುಗಳು ಭವಾನಿಪುರ ಉಪಚುನಾವಣೆಯ ಮೇಲೆ ಇವೆ. ಪೂರ್ಬ ಮೇದಿನೀಪುರದ ನಂದಿಗ್ರಾಮದಿಂದ ವಿಧಾನಸಭಾ ಚುನಾವಣೆಯಲ್ಲಿ ಮಮತಾ 1,956 ಮತಗಳಿಂದ ಸೋತಿದ್ದರು.

ಮೇ 2 ರಂದು ಫಲಿತಾಂಶಗಳನ್ನು ಘೋಷಿಸಿದ ಕೆಲವು ವಾರಗಳ ನಂತರ ಭವಾನಿಪುರದ ಶಾಸಕರು ಮತ್ತು ರಾಜ್ಯ ಸಚಿವ ಸೋವಂದೇಬ್ ಚಟ್ಟೋಪಾಧ್ಯಾಯ ಅವರು ಬ್ಯಾನರ್ಜಿಯವರು ವಿಧಾನಸಭೆಗೆ ಚುನಾಯಿತರಾಗಲು ಮತ್ತು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ತಮ್ಮ ಚುನಾವಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಚುನಾವಣಾ ಆಯೋಗ (EC) ಶನಿವಾರ ಉಪಚುನಾವಣೆಯನ್ನು ಘೋಷಿಸಿದ ಸ್ವಲ್ಪ ಸಮಯದ ನಂತರ, ಆಡಳಿತ ಪಕ್ಷವು ಬ್ಯಾನರ್ಜಿ ಪರ ಪ್ರಚಾರ ಆರಂಭಿಸಿತು. ಟಿಎಂಸಿ ಅಧ್ಯಕ್ಷೆಯನ್ನು ಭವಾನಿಪುರದ ಮಗಳೆಂದು ಘೋಷಿಸುವ ಬ್ಯಾನರ್‌ಗಳು ಮತ್ತು ಗೋಡೆ ಬರಹಗಳು ವಿಧಾನಸಭಾ ಕ್ಷೇತ್ರದಲ್ಲಿ ರಾರಾಜಿಸಿವೆ. ಭಾನುವಾರ ಡುರಾಂಡ್ ಕಪ್  ಉದ್ಘಾಟಿಸಲು ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ಹೋಗುತ್ತಿದ್ದಾಗ ಮಮತಾ ಪಕ್ಷದ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದರು.

ಭವಾನಿಪುರ ಉಪಚುನಾವಣೆಗೆ ಚುನಾವಣಾ ಆಯೋಗದ ಅಧಿಸೂಚನೆಯನ್ನು ಸೆಪ್ಟೆಂಬರ್ 6 ರಂದು ನೀಡಲಾಗುವುದು ಮತ್ತು ಸೆಪ್ಟೆಂಬರ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳ ಪತ್ರಿಕೆಗಳನ್ನು ಸೆಪ್ಟೆಂಬರ್ 14 ರಂದು ಪರಿಶೀಲಿಸಲಾಗುವುದು. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ ಸೆಪ್ಟೆಂಬರ್ 16. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಏತನ್ಮಧ್ಯೆ,ಮಂಗಳವಾರ ಪಕ್ಷದ ಸಭೆಯ ಬಗ್ಗೆ ಕೇಳಿದಾಗ, ಬಿಜೆಪಿ ವಕ್ತಾರ ಸಮೀಕ್ ಭಟ್ಟಾಚಾರ್ಯ ಅಂತಿಮ ನಿರ್ಧಾರ ಕೇಂದ್ರ ನಾಯಕತ್ವದ್ದಾಗಿದೆ ಎಂದು ಹೇಳಿದರು. “ಮಮತಾ ಬ್ಯಾನರ್ಜಿ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎಂದು ಹೇಳಲು ನಾನು ಸರಿಯಾದ ವ್ಯಕ್ತಿಯಲ್ಲ. ಈ ಕುರಿತು ಚರ್ಚಿಸಲು ನಾವು ಮಂಗಳವಾರ ಸಭೆ ಕರೆದಿದ್ದೇವೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ನಾವು ಉತ್ಸಾಹದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ನಾನು ಹೇಳಬಲ್ಲೆ ಎಂದು ಅವರು ಹೇಳಿದರು.

ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನದ (ಎಸ್‌ಪಿಎಂಆರ್‌ಎಫ್) ನಿರ್ದೇಶಕ ಅನಿರ್ಬನ್ ಗಂಗೂಲಿ (ಬೋಲ್‌ಪುರದಲ್ಲಿ ಬಿಜೆಪಿ ಟಿಕೆಟ್ ನಲ್ಲಿ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಹೆಸರುಗಳನ್ನು ಬಿಜೆಪಿ ಪರಿಗಣಿಸಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

“ಪಕ್ಷವು ಭವಾನಿಪುರದ ಅಭ್ಯರ್ಥಿಯ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ ಮತ್ತು ಸದ್ಯಕ್ಕೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಕೆಲವು ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಮಂಗಳವಾರದ ನಮ್ಮ ಸಭೆಯಲ್ಲಿ ಚರ್ಚೆಗಳನ್ನು ನಡೆಸಲಾಗುವುದು ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದರು. ಬಿಜೆಪಿಯ ಇನ್ನೊಂದು ಮೂಲದ ಪ್ರಕಾರ ಭವಾನಿಪುರದಲ್ಲಿ ಸೋಲುವುದು ಖಚಿತ ಎಂದು ಕೆಲವು ನಾಯಕರು ಭವಾನಿಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ಮೊದಲ ಬಾರಿಗೆ ಸಯಾಮಿ ಅವಳಿ ಬಾಲಕಿಯರು, ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಮುಖಾಮುಖಿಯಾದರು!

(TMC Sunday announced Mamata Banerjee to contest Bhabanipur bypoll BJP convene a meeting on nominee tomorrow)

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ