AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸರ್ಕಾರಿ ನೌಕರರಿಗೆ ತಮಿಳುನಾಡು ಸರ್ಕಾರದ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ

ತಮಿಳುನಾಡು ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮೂರನೇ ಮಗುವಿನ ಜನನಕ್ಕೂ ಒಂದು ವರ್ಷ (365 ದಿನಗಳು) ವೇತನ ಸಹಿತ ಹೆರಿಗೆ ರಜೆ ಲಭ್ಯವಿರುತ್ತದೆ. ಈ ಮೊದಲು ಮೂರನೇ ಮಗುವಿಗೆ ಕೇವಲ 12 ವಾರಗಳ ರಜೆ ಮಾತ್ರ ಇತ್ತು. ಮಹಿಳಾ ಸಬಲೀಕರಣ ಹಾಗೂ ನೌಕರರ ಕಲ್ಯಾಣದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದು ಸಾವಿರಾರು ಮಹಿಳಾ ಉದ್ಯೋಗಿಗಳಿಗೆ ದೊಡ್ಡ ನೆರವಾಗಲಿದೆ.

ಮಹಿಳಾ ಸರ್ಕಾರಿ ನೌಕರರಿಗೆ ತಮಿಳುನಾಡು ಸರ್ಕಾರದ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ
ವಿಜಯ್
ನಯನಾ ರಾಜೀವ್
|

Updated on: Aug 19, 2026 | 7:16 AM

Share

ಚೆನ್ನೈ, ಆಗಸ್ಟ್​ 19: ತಮಿಳುನಾಡು(Tamil Nadu) ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಮಹಿಳಾ ನೌಕರರು ತಮ್ಮ ಮೂರನೇ ಮಗುವಿನ ಜನನದ ಸಂದರ್ಭದಲ್ಲೂ ಪೂರ್ಣ 1 ವರ್ಷ ವೇತನ ಸಹಿತ ಹೆರಿಗೆ ರಜೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಮೂರನೇ ಮಗುವಿಗೆ ಕೇವಲ 12 ವಾರಗಳ ರಜೆ ಮಾತ್ರ ಇತ್ತು. ಈಗ ಅದನ್ನು ಮೊದಲ ಎರಡು ಮಕ್ಕಳಂತೆ 365 ದಿನಗಳಿಗೆ ಹೆಚ್ಚಿಸಲಾಗಿದೆ.

ಸಚಿವರ ಪ್ರಕಟಣೆ: ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ಡಿ. ಶರತ್‌ಕುಮಾರ್ ಅವರು ವಿಧಾನಸಭೆಯಲ್ಲಿ ಇಲಾಖೆಯ ಅನುದಾನ ಬೇಡಿಕೆ ಮಂಡಿಸುವ ವೇಳೆ ಈ ಐತಿಹಾಸಿಕ ತೀರ್ಮಾನವನ್ನು ಪ್ರಕಟಿಸಿದರು. ಸರ್ಕಾರವು ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಸದಾ ಆದ್ಯತೆ ನೀಡುತ್ತಿದ್ದು, ನೌಕರರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಹೊಸ ನಿಯಮವನ್ನು ಜಾರಿಗೆ ತರಲು ಶೀಘ್ರದಲ್ಲೇ ಅಧಿಕೃತ ಸರ್ಕಾರಿ ಆದೇಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಹೆರಿಗೆ ರಜೆಯ ಇತಿಹಾಸ 2011: ಹೆರಿಗೆ ರಜೆಯನ್ನು 90 ದಿನಗಳಿಂದ 6 ತಿಂಗಳಿಗೆ ಹೆಚ್ಚಿಸಲಾಯಿತು.

2016: ರಜೆಯ ಅವಧಿಯನ್ನು 6 ತಿಂಗಳಿಂದ 9 ತಿಂಗಳಿಗೆ ವಿಸ್ತರಿಸಲಾಯಿತು.

2021: ಮೊದಲ ಎರಡು ಮಕ್ಕಳಿಗೆ ಹೆರಿಗೆ ರಜೆಯನ್ನು ಪೂರ್ಣ 1 ವರ್ಷಕ್ಕೆ (365 ದಿನಗಳು) ಹೆಚ್ಚಿಸಲಾಯಿತು. ಈಗ 3ನೇ ಮಗುವಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗಿದೆ.

ಮತ್ತಷ್ಟು ಓದಿ: ಬಿಜೆಪಿ ತೊರೆಯಲು ನಿಜವಾದ ಕಾರಣ ಬಿಚ್ಚಿಟ್ಟ ಅಣ್ಣಾಮಲೈ; ಗುಜರಾತ್ ಕೇಂದ್ರಿತ, ದೆಹಲಿ ಕೇಂದ್ರಿತ ರಾಜಕೀಯ ಧೋರಣೆಗೆ ಟೀಕೆ

‘ತಮಿಳ್ ತಾಯ್ ವಳ್ತು’ ಹಾಡು ಕಡ್ಡಾಯ

ರಾಜ್ಯಗೀತೆಗೆ ಮೊದಲ ಆದ್ಯತೆ: ತಮಿಳುನಾಡು ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು, ಕಚೇರಿಗಳು, ಶಾಲೆ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಸಮಾರಂಭಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ‘ತಮಿಳ್ ತಾಯ್ ವಳ್ತು’ ಹಾಡುವುದನ್ನು ಕಡ್ಡಾಯಗೊಳಿಸಿದೆ. ಇತ್ತೀಚೆಗೆ ವಿಧಾನಸಭೆಯಲ್ಲಿ ಈ ಕುರಿತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ ಬೆನ್ನಲ್ಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ