AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಮಗಳಿಗೆ ಸೂಕ್ತ ವರನನ್ನು ಹುಡುಕಲು ಆರೋಪಿ ತಂದೆಯೊಬ್ಬರಿಗೆ ಸುಪ್ರೀಂಕೋರ್ಟ್​ 45 ದಿನಗಳ ಮಧ್ಯಂತರ ಜಾಮೀನು ನೀಡಿದೆ. ತನ್ನ ಮಗಳಿಗೆ ಮದುವೆ ವಯಸ್ಸಾಗಿರುವುದರಿಂದ ಆಕೆಗೆ ಸೂಕ್ತ ವರನನ್ನು ಹುಡುಕಬೇಕು ಎಂದು ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಅರ್ಜಿದಾರರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಪತ್ನಿ ಎರಡು ವರನನ್ನು ಹುಡುಕಿದ್ದು, ಅವರಲ್ಲಿ ಒಬ್ಬರನ್ನು ಮದುವೆಗೆ ಅಂತಿಮಗೊಳಿಸಬೇಕಿದೆ ಎಂದು ಕೋರ್ಟ್​ಗೆ ತಿಳಿಸಿದ್ದಾರೆ.

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​
ಜೈಲು Image Credit source: Harvard Gazette
ನಯನಾ ರಾಜೀವ್
|

Updated on: Feb 09, 2024 | 10:23 AM

Share

ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಯೊಬ್ಬನಿಗೆ ಸುಪ್ರೀಂಕೋರ್ಟ್​ 45 ದಿನಗಳ ಮಧ್ಯಂತರ ಜಾಮೀನು(Interim Bail) ನೀಡಿರುವ ಘಟನೆ ನಡೆದಿದೆ. ಇಂತಹ ಪ್ರಕರಣಗಳಲ್ಲಿ ಸಹ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಿರುವುದನ್ನು ಪರಿಗಣಿಸಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ವಾಸ್ತವವಾಗಿ ಈ ಕೈದಿ ತನ್ನ 20 ವರ್ಷದ ಮಗಳ ಮದುವೆಗೆ ವರ ಹುಡುಕಬೇಕು ಎಂದು ಜಾಮೀನು ಕೋರಿದ್ದ. ಮಾಹಿತಿಯ ಪ್ರಕಾರ, ನ್ಯಾಯಮೂರ್ತಿ ಎಂಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಕೆಲಸಕ್ಕಾಗಿ ವ್ಯಕ್ತಿಗೆ 45 ದಿನಗಳ ಜಾಮೀನು ನೀಡಿದೆ.

ಕೊಲೆ, ಗಲಭೆ, ನೋವುಂಟುಮಾಡುವುದು, ಕಿಡಿಗೇಡಿತನ, ಅತಿಕ್ರಮಣ ಮುಂತಾದ ಅಪರಾಧಗಳಿಗಾಗಿ ಈ ವ್ಯಕ್ತಿಯನ್ನು ದೆಹಲಿ ಹೈಕೋರ್ಟ್ ದೋಷಿ ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿರುವ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮತ್ತು ಜಾಮೀನು ಮಂಜೂರು ಮಾಡುವಂತೆ ಅವರು ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

ಈ ವ್ಯಕ್ತಿಯ ಮೇಲ್ಮನವಿ ದೀರ್ಘಕಾಲದಿಂದ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಇತರ ಆರೋಪಿಗಳಿಗೂ ಜಾಮೀನು ಸಿಕ್ಕಿರುವ ಅಂಶವನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ವೇಳೆ ಜಾಮೀನು ಅರ್ಜಿ ಸಲ್ಲಿಸಿರುವ ವ್ಯಕ್ತಿಯ ಮಗಳನ್ನು ಮದುವೆಯಾಗಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದಕ್ಕಾಗಿ ವರನನ್ನು ಹುಡುಕಬೇಕು.

ಮತ್ತಷ್ಟು ಓದಿ: ವರನ ಅಜ್ಜಿಯನ್ನು ಕುರ್ಚಿಯಿಂದ ಎಬ್ಬಿಸಿದ್ದಕ್ಕೆ ಗಲಾಟೆ; 5 ಗಂಟೆಯಲ್ಲೇ ಮುರಿದು ಬಿತ್ತು ಮದುವೆ

ವ್ಯಕ್ತಿಯ ಪತ್ನಿ ಇಬ್ಬರು ಸಂಭಾವ್ಯ ವರಗಳನ್ನು ನೋಡಿದ್ದು, ಅವರಲ್ಲಿ ಒಬ್ಬರೊಂದಿಗೆ ತನ್ನ ಮಗಳ ಮದುವೆ ಗೊತ್ತುಪಡಿಸಬೇಕಿದೆ ಎಂದು ಕೈದಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಜಾಮೀನು ಕೋರಿ ಕೈದಿಗಳಿಗೆ ಈ ಹಿಂದೆ ಹಲವು ಸಂದರ್ಭಗಳಲ್ಲಿ ಮಧ್ಯಂತರ ಜಾಮೀನು ನೀಡಲಾಗಿತ್ತು ಮತ್ತು ಅದನ್ನು ಅವರು ಎಂದಿಗೂ ದುರುಪಯೋಗಪಡಿಸಿಕೊಂಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಇದಾದ ನಂತರ ನ್ಯಾಯಾಲಯವು ವ್ಯಕ್ತಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಈ ಜಾಮೀನು ವಿಚಾರಣಾ ನ್ಯಾಯಾಲಯ ವಿಧಿಸಬಹುದಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.

ಜಾಮೀನು ಎಂದರೇನು? ಸಂಕ್ಷಿಪ್ತವಾಗಿ ಹೇಳುವುದಾದರೆ, ಜಾಮೀನು ಆರೋಪಿಯ ಷರತ್ತುಬದ್ಧ ಬಿಡುಗಡೆಯಾಗಿದೆ ಮತ್ತು  ನ್ಯಾಯಾಲಯಕ್ಕೆ ಕೋರ್ಟ್​ ಹೇಳಿರುವ ದಿನ ಹಾಜರಾಗುವ ಭರವಸೆಯೊಂದಿಗೆ ಬಿಡುಗಡೆಮಾಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?