AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭಾಗ್ಯ ಪಡೆಯಲು ಅಕ್ಕನನ್ನೇ ಮದುವೆಯಾದ… ಆಮೇಲೆ ಏನಾಯ್ತು?

Mass Wedding : ಯುವತಿಯೊಬ್ಬಳು ತನ್ನ ಸಹೋದರನೊಂದಿಗೆ ಯೋಜನೆಯಿಂದ ಹಣ ಮತ್ತು ಉಡುಗೊರೆಗಳನ್ನು ಸಂಗ್ರಹಿಸಿ ನಂತರ ಏಳು ಹೆಜ್ಜೆ ಇಟ್ಟಿದ್ದಾಳೆ. ಗಮನಾರ್ಹವೆಂದರೆ ಅವಳು ಒಂದು ವರ್ಷದ ಹಿಂದೆ ಮದುವೆಯಾಗಿದ್ದಳು. ಸದ್ಯ ಆಕೆಯ ಪತಿ ಜೀವನೋಪಾಯಕ್ಕಾಗಿ ಬೇರೆ ಪ್ರದೇಶದಲ್ಲಿ ನೆಲೆಸಿದ್ದಾರೆ. 

ಸರ್ಕಾರಿ ಭಾಗ್ಯ ಪಡೆಯಲು ಅಕ್ಕನನ್ನೇ ಮದುವೆಯಾದ... ಆಮೇಲೆ ಏನಾಯ್ತು?
ಸರ್ಕಾರಿ ಭಾಗ್ಯ ಪಡೆಯಲು ಅಕ್ಕನನ್ನೇ ಮದುವೆಯಾದ... ಆಮೇಲೆ ಏನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 19, 2024 | 10:17 AM

Share

ಮಹಾರಾಜಗಂಜ್, ಮಾರ್ಚ್ 19: ಉತ್ತರ ಪ್ರದೇಶ ಸರ್ಕಾರ ತಂದಿರುವ ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆ ಪುಣ್ಯವೋ ಎಂಬಂತೆ ಪ್ರತಿದಿನ ಅಲ್ಲಿ ಒಂದಿಲ್ಲೊಂದು ವಿಚಿತ್ರ ಘಟನೆ ನಡೆಯುತ್ತಲೇ ಇರುತ್ತದೆ. ಈ ಯೋಜನೆಯ ಲಾಭ ಪಡೆಯಲು ಅಣ್ಣಾ ತಂಗಿಯರು ಒಟ್ಟಿಗೆ ಮದುವೆಯಾಗಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿವರಗಳಿಗೆ ಹೋಗುವುದಾದರೆ..

ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆಯಡಿ ಯೋಗಿ ಆದಿತ್ಯನಾಥ್ ಸರ್ಕಾರ ವತಿಯಿಂದ ಮಾರ್ಚ್ 5 ರಂದು ಮಹಾರಾಜ್‌ಗಂಜ್ ಜಿಲ್ಲೆಯ ಲಕ್ಷ್ಮೀಪುರ ಬ್ಲಾಕ್‌ನಲ್ಲಿ 38 ಹಿಂದುಳಿದ ಕುಟುಂಬಗಳ ಜೋಡಿಗಳನ್ನು ವಿಧ್ಯುಕ್ತವಾಗಿ ವಿವಾಹವಾದರು. ಈ ಯೋಜನೆಯಡಿ ನವದಂಪತಿಗಳಿಗೆ ಗೃಹೋಪಯೋಗಿ ವಸ್ತುಗಳು ಹಾಗೂ ರೂ. 35 ಸಾವಿರ ನಗದು ನೀಡಲಾಗುವುದು. ಈ ಯೋಜನೆಯ ಲಾಭ ಪಡೆಯಲು ಕೆಲವು ಮಧ್ಯವರ್ತಿಗಳು ಆಗಾಗ್ಗೆ ಹಗರಣಗಳನ್ನು ಎಬ್ಬಿಸುತ್ತಿರುತ್ತಾರೆ.

ಇತ್ತೀಚೆಗೆ, ಯುವತಿಯೊಬ್ಬಳು ತನ್ನ ಸಹೋದರನೊಂದಿಗೆ ಯೋಜನೆಯಿಂದ ಹಣ ಮತ್ತು ಉಡುಗೊರೆಗಳನ್ನು ಸಂಗ್ರಹಿಸಿ ನಂತರ ಏಳು ಹೆಜ್ಜೆ ಇಟ್ಟಿದ್ದಾಳೆ. ಗಮನಾರ್ಹವೆಂದರೆ ಅವಳು ಒಂದು ವರ್ಷದ ಹಿಂದೆ ಮದುವೆಯಾಗಿದ್ದಳು. ಸದ್ಯ ಆಕೆಯ ಪತಿ ಜೀವನೋಪಾಯಕ್ಕಾಗಿ ಬೇರೆ ಪ್ರದೇಶದಲ್ಲಿ ನೆಲೆಸಿದ್ದಾರೆ.

ಇದರೊಂದಿಗೆ ಮಧ್ಯವರ್ತಿಗಳು ಸ್ಕೀಮ್‌ ಪ್ರಯೋಜನ ಪಡೆಯಲು ಮತ್ತೆ ಮದುವೆಯಾಗುವಂತೆ ಮನವೊಲಿಸಿದರು. ಮದುವೆಯ ದಿನ ಸಾಮೂಹಿಕ ವಿವಾಹಗಳು ನಡೆಯುತ್ತಿದ್ದ ಫಂಕ್ಷನ್ ಹಾಲ್ ಗೆ ಪೂರ್ವ ನಿಯೋಜಿತವಾಗಿ ವರಮಹಾಶಯ ಬಂದಿರಲಿಲ್ಲ.

ಮಧ್ಯವರ್ತಿಗಳು ವಧುವಿನ ಸ್ವಂತ ಸಹೋದರನನ್ನು ವರನ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ಮನವೊಲಿಸಿದರು. ಸಂಪ್ರದಾಯದ ಪ್ರಕಾರವೇ ಅಕ್ಕತಮ್ಮನಿಗೆ ಮದುವೆ ನಡೆಯಿತು. ಆದರೆ ಮಾಹಿತಿ ಸಿಕ್ಕ ಕೂಡಲೇ ಅಧಿಕಾರಿಗಳು ಎಚ್ಚೆತ್ತರು. ಮಹಾರಾಜಗಂಜ್‌ನ ಪ್ರದೇಶಾಭಿವೃದ್ಧಿ ಅಧಿಕಾರಿಗಳು (ಬಿಡಿಒ) ದಂಪತಿಗೆ ನಿಗದಿಪಡಿಸಿದ ಪೀಠೋಪಕರಣಗಳು ಮತ್ತು ಹಣವನ್ನು ಹಿಂಪಡೆದಿದ್ದಾರೆ.

ಈ ಘಟನೆ ಜಿಲ್ಲಾಡಳಿತದ ಗಮನಕ್ಕೆ ಬಂದಾಗ ಈ ನಕಲಿ ಮದುವೆ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುನಯ್ ಝಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!