AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು

ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ ಮಾಡಿಸಿದರೆ ಮಳೆ ದೇವರು ವರುಣ ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ...

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು
ಬಿಜೆಪಿ ಶಾಸಕನಿಗೆ ಕೆಸರು ಸ್ನಾನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 14, 2022 | 2:52 PM

ಗೋರಖ್​​ಪುರ್ :ಉತ್ತರ ಪ್ರದೇಶದ (Uttar Pradesh) ಮಹಾರಾಜ್​​ಗಂಜ್ (Maharajganj )ಜಿಲ್ಲೆಯಲ್ಲಿ ಮಹಿಳೆಯರ ಗುಂಪೊಂದು ಸ್ಥಳೀಯ ಶಾಸಕ ಮತ್ತು ನಗರ ಪಾಲಿಕೆ ಅಧ್ಯಕ್ಷರ ಮೇಲೆ ಕೆಸರು ಸುರಿದು ಮಳೆಗಾಗಿ ಇಂದ್ರನಲ್ಲಿ ಪ್ರಾರ್ಥಿಸಿದೆ. ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ (Mud Bath) ಮಾಡಿಸಿದರೆ ಮಳೆ ದೇವರು  ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ ಜೈಮಂಗಲ್ ಕನೊಜಿಯಾ ಮತ್ತು ನಗರ ಪಾಲಿಕೆ ಅಧ್ಯಕ್ಷ ಕೃಷ್ಣ ಗೋಪಾಲ್ ಜೈಸ್ವಾನ್ ಅವರಿಗೆ ಕೆಸರು ಸ್ನಾನ ಮಾಡಿಸುವಾಗ ಹಾಡುಗಳನ್ನು ಹಾಡಿದ್ದಾರೆ. ನಗರದ ಮುಖ್ಯಸ್ಥರಿಗೆ ಕೆಸರು ಸ್ನಾನ ಮಾಡಿಸಿದರೆ ಇಂದ್ರದೇವ ಪ್ರಸನ್ನನಾಗುತ್ತಾನೆ. ಮಳೆಯಿಲ್ಲದೆ ಇಲ್ಲಿನ ಭತ್ತದ ಗದ್ದೆಗಳು ಹಾಳಾಗಿವೆ ಎಂದು ಮುನ್ನೀದೇವಿ ಎಂಬ ಮಹಿಳೆ ಹೇಳಿದ್ದಾರೆ. ಇಂದ್ರದೇವನನ್ನು ಒಲಿಸಲು ಮಕ್ಕಳಿಗೂ ಕೆಸರು ಸ್ನಾನ ಮಾಡಿಸಲಾಗುತ್ತದೆ. ಇದನ್ನು ಇಲ್ಲಿ ಕಲ್ ಕಲೌತಿ ಎಂದು ಕರೆಯಲಾಗುತ್ತದೆ.

ಕೆಸರು ಸ್ನಾನ ಹಳೇ ಸಂಪ್ರದಾಯ: ಬಿಜೆಪಿ ಶಾಸಕ

ಇದನ್ನೂ ಓದಿ
Image
Spiritual: ಪ್ರಾರ್ಥನೆ ಎಂದರೇನು? ಅಷ್ಟಕ್ಕೂ ಪ್ರಾರ್ಥನೆ ಹೇಗಿರಬೇಕು ಗೊತ್ತಾ..!
Image
ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ: ಕಾಂಗ್ರೆಸ್ ನಾಯಕ
Image
ಉತ್ತರ ಪ್ರದೇಶ: ದೇವಾಲಯಕ್ಕೆ ಕಾರಿನಲ್ಲೇ ಪ್ರದಕ್ಷಿಣೆ ಮಾಡಲು ಬಂದ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್​​ಗೆ ತಡೆ

ಮಳೆಗಾಗಿ ಕೆಸರು ಸ್ನಾನ ಮಾಡಲು ಶಾಸಕ ಕನೊಜಿಯಾ ಮತ್ತು ನಗರ ಪಾಲಿಕೆ ಮುಖ್ಯಸ್ಥ ಜೈಸ್ವಾಲ್ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಬಿರಿ ಬಿಸಿಲಿನಿಂದಾಗಿ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂದ್ರ ದೇವನನ್ನು ಪ್ರಸನ್ನನಾಗಿಸುವುದಕ್ಕೆ ಕೆಸರು ಸ್ನಾನ ಮಾಡಿಸುವುದು ಹಳೇ ಸಂಪ್ರದಾಯ. ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು ನನಗೆ ಕೆಸರು ಸ್ನಾನ ನೀಡಿದರು ಎಂದು ಕನೋಜಿಯ ಹೇಳಿದ್ದಾರೆ.  ಬರದಿಂತಿರುವ ಪರಿಸ್ಥಿತಿ ಇಲ್ಲಿದೆ. ಮಳೆ ದೇವರನ್ನು ಪ್ರಾರ್ಥಿಸಲು ಮಹಿಳೆಯರು ಮಾತ್ರ ಈ ಹಳೇ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ ಎಂದು ಜೈಸ್ವಾನ್ ಹೇಳಿದ್ದಾರೆ.

Published On - 2:49 pm, Thu, 14 July 22

ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್