AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು

ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ ಮಾಡಿಸಿದರೆ ಮಳೆ ದೇವರು ವರುಣ ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ...

Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು
ಬಿಜೆಪಿ ಶಾಸಕನಿಗೆ ಕೆಸರು ಸ್ನಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 2:52 PM

Share

ಗೋರಖ್​​ಪುರ್ :ಉತ್ತರ ಪ್ರದೇಶದ (Uttar Pradesh) ಮಹಾರಾಜ್​​ಗಂಜ್ (Maharajganj )ಜಿಲ್ಲೆಯಲ್ಲಿ ಮಹಿಳೆಯರ ಗುಂಪೊಂದು ಸ್ಥಳೀಯ ಶಾಸಕ ಮತ್ತು ನಗರ ಪಾಲಿಕೆ ಅಧ್ಯಕ್ಷರ ಮೇಲೆ ಕೆಸರು ಸುರಿದು ಮಳೆಗಾಗಿ ಇಂದ್ರನಲ್ಲಿ ಪ್ರಾರ್ಥಿಸಿದೆ. ಆ ಪ್ರದೇಶದ ಮುಖ್ಯಸ್ಥರಿಗೆ ಕೆಸರಿನಲ್ಲಿ ಸ್ನಾನ (Mud Bath) ಮಾಡಿಸಿದರೆ ಮಳೆ ದೇವರು  ಪ್ರಸನ್ನನಾಗಿ ಆ ಊರಿಗೆ ಮಳೆ ಬರುತ್ತದೆ ಎಂಬ ನಂಬಿಕೆ ಇಲ್ಲಿದೆ. ಮಹಾರಾಜ್​​ಗಂಜ್ ಜಿಲ್ಲೆಯ ಪಿಪಾರ್​​ದೆವುರಾದಲ್ಲಿನ ಮಹಿಳೆಯರು ಬಿಜೆಪಿ ಶಾಸಕ ಜೈಮಂಗಲ್ ಕನೊಜಿಯಾ ಮತ್ತು ನಗರ ಪಾಲಿಕೆ ಅಧ್ಯಕ್ಷ ಕೃಷ್ಣ ಗೋಪಾಲ್ ಜೈಸ್ವಾನ್ ಅವರಿಗೆ ಕೆಸರು ಸ್ನಾನ ಮಾಡಿಸುವಾಗ ಹಾಡುಗಳನ್ನು ಹಾಡಿದ್ದಾರೆ. ನಗರದ ಮುಖ್ಯಸ್ಥರಿಗೆ ಕೆಸರು ಸ್ನಾನ ಮಾಡಿಸಿದರೆ ಇಂದ್ರದೇವ ಪ್ರಸನ್ನನಾಗುತ್ತಾನೆ. ಮಳೆಯಿಲ್ಲದೆ ಇಲ್ಲಿನ ಭತ್ತದ ಗದ್ದೆಗಳು ಹಾಳಾಗಿವೆ ಎಂದು ಮುನ್ನೀದೇವಿ ಎಂಬ ಮಹಿಳೆ ಹೇಳಿದ್ದಾರೆ. ಇಂದ್ರದೇವನನ್ನು ಒಲಿಸಲು ಮಕ್ಕಳಿಗೂ ಕೆಸರು ಸ್ನಾನ ಮಾಡಿಸಲಾಗುತ್ತದೆ. ಇದನ್ನು ಇಲ್ಲಿ ಕಲ್ ಕಲೌತಿ ಎಂದು ಕರೆಯಲಾಗುತ್ತದೆ.

ಕೆಸರು ಸ್ನಾನ ಹಳೇ ಸಂಪ್ರದಾಯ: ಬಿಜೆಪಿ ಶಾಸಕ

ಇದನ್ನೂ ಓದಿ
Image
Spiritual: ಪ್ರಾರ್ಥನೆ ಎಂದರೇನು? ಅಷ್ಟಕ್ಕೂ ಪ್ರಾರ್ಥನೆ ಹೇಗಿರಬೇಕು ಗೊತ್ತಾ..!
Image
ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ: ಕಾಂಗ್ರೆಸ್ ನಾಯಕ
Image
ಉತ್ತರ ಪ್ರದೇಶ: ದೇವಾಲಯಕ್ಕೆ ಕಾರಿನಲ್ಲೇ ಪ್ರದಕ್ಷಿಣೆ ಮಾಡಲು ಬಂದ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್​​ಗೆ ತಡೆ

ಮಳೆಗಾಗಿ ಕೆಸರು ಸ್ನಾನ ಮಾಡಲು ಶಾಸಕ ಕನೊಜಿಯಾ ಮತ್ತು ನಗರ ಪಾಲಿಕೆ ಮುಖ್ಯಸ್ಥ ಜೈಸ್ವಾಲ್ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಬಿರಿ ಬಿಸಿಲಿನಿಂದಾಗಿ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂದ್ರ ದೇವನನ್ನು ಪ್ರಸನ್ನನಾಗಿಸುವುದಕ್ಕೆ ಕೆಸರು ಸ್ನಾನ ಮಾಡಿಸುವುದು ಹಳೇ ಸಂಪ್ರದಾಯ. ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು ನನಗೆ ಕೆಸರು ಸ್ನಾನ ನೀಡಿದರು ಎಂದು ಕನೋಜಿಯ ಹೇಳಿದ್ದಾರೆ.  ಬರದಿಂತಿರುವ ಪರಿಸ್ಥಿತಿ ಇಲ್ಲಿದೆ. ಮಳೆ ದೇವರನ್ನು ಪ್ರಾರ್ಥಿಸಲು ಮಹಿಳೆಯರು ಮಾತ್ರ ಈ ಹಳೇ ಸಂಪ್ರದಾಯವನ್ನು ಅನುಸರಿಸುತ್ತಿದ್ದಾರೆ ಎಂದು ಜೈಸ್ವಾನ್ ಹೇಳಿದ್ದಾರೆ.

Published On - 2:49 pm, Thu, 14 July 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ