AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ

ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ...

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ
ಕಪ್ಪೆಗಳ ಮದುವೆ
TV9 Web
| Edited By: |

Updated on: Jul 20, 2022 | 1:50 PM

Share

ಗೋರಖ್​​ಪುರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ (Uttar Pradesh) ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆಗಾಗಿ ಪ್ರಾರ್ಥಿಸಿದ ಗೋರಖ್ ಪುರದ (Gorakhpur) ಜನರು ಕಪ್ಪೆಗಳಿಗೆ ಮದುವೆ (Frog Wedding) ಮಾಡಿಸಿದ್ದಾರೆ. ಹಿಂದೂ ಮಹಾಸಂಘ್ ಎಂಬ ಸ್ಥಳೀಯ ಗುಂಪು ಮಂಗಳವಾರ ಇಲ್ಲಿನ ಕಲಿಬರಿ ದೇವಾಲಯದಲ್ಲಿ ಮದುವೆ ಮಾಡಿಸಿದ್ದಾರೆ.ಈ ಮದುವೆಯಲ್ಲಿ ಹಲವಾರು ಜನರೂ ಭಾಗಿಯಾಗಿದ್ದಾರೆ. ಇಡೀ ಪ್ರದೇಶವೇ ಬರದ ಪರಿಸ್ಥಿತಿಯಲ್ಲಿದೆ. ಶ್ರಾವಣ ಮಾಸದ ಐದು ದಿನಗಳು ಈಗಾಗಲೇ ಕಳೆದಿದೆ ಆದರೆ ಮಳೆಯೇ ಬಂದಿಲ್ಲ ಎಂದು ಹಿಂದೂ ಮಹಾಸಂಘದ ರಾಮಕಾಂತ್ ವರ್ಮಾ ಹೇಳಿದ್ದಾರೆ. ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಈ ಆಚರಣೆ ಖಂಡಿತವಾಗಿಯೂ ಫಲ ನೀಡುತ್ತದೆ, ಇಲ್ಲಿ ಮಳೆಯಾಗುತ್ತದೆ ಎಂದು ಮದುವೆಯಲ್ಲಿ ಭಾಗಿಯಾದ ಜನರು ಹೇಳಿದ್ದಾರೆ.

ಜುಲೈ 13ರಂದು ಇಲ್ಲಿನ ಮಹಾರಾಜ್ ಗಂಜ್ ಜಿಲ್ಲೆಯಲ್ಲಿನ ಮಹಿಳೆಯರು ಸ್ಥಳೀಯ ಶಾಸಕ ಜೈಮಂಗಲ್ ಕನೋಜಿಯಾ ಮತ್ತು ನಗರ ಪಾಲಿಕೆ ಚೇರ್ ಮೆನ್ ಕೃಷ್ಣ ಗೋಪಾಲ್ ಜೈಸ್ವಾಲ್ ಅವರಿಗೆ ಕೆಸರು ಸ್ನಾನ ಮಾಡಿಸಿದ್ದರು. ಮಳೆ ದೇವರಾದ ಇಂದ್ರನನ್ನು ಒಲಿಸುವುದಕ್ಕಾಗಿ ಆ ಪ್ರದೇಶದ ನಾಯಕರಿಗೆ ಕೆಸರು ಸ್ನಾನ ಮಾಡಿಸುವ ಆಚರಣೆಯಾಗಿದೆ ಇದು.

ಬರದ ಪರಿಸ್ಥಿತಿ ಎದುರಿಸುತ್ತಿರಾಗ ಮಹಿಳೆಯರು ಮಾತ್ರ ಹಳೇ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ ಎಂದಿದ್ದಾರೆ ಜೈಸ್ವಾಲ್.

Follow Us
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​