Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ

ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ...

ಉತ್ತರ ಪ್ರದೇಶದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಅದ್ಧೂರಿ ಮದುವೆ
ಕಪ್ಪೆಗಳ ಮದುವೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 20, 2022 | 1:50 PM

ಗೋರಖ್​​ಪುರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ (Uttar Pradesh) ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆಗಾಗಿ ಪ್ರಾರ್ಥಿಸಿದ ಗೋರಖ್ ಪುರದ (Gorakhpur) ಜನರು ಕಪ್ಪೆಗಳಿಗೆ ಮದುವೆ (Frog Wedding) ಮಾಡಿಸಿದ್ದಾರೆ. ಹಿಂದೂ ಮಹಾಸಂಘ್ ಎಂಬ ಸ್ಥಳೀಯ ಗುಂಪು ಮಂಗಳವಾರ ಇಲ್ಲಿನ ಕಲಿಬರಿ ದೇವಾಲಯದಲ್ಲಿ ಮದುವೆ ಮಾಡಿಸಿದ್ದಾರೆ.ಈ ಮದುವೆಯಲ್ಲಿ ಹಲವಾರು ಜನರೂ ಭಾಗಿಯಾಗಿದ್ದಾರೆ. ಇಡೀ ಪ್ರದೇಶವೇ ಬರದ ಪರಿಸ್ಥಿತಿಯಲ್ಲಿದೆ. ಶ್ರಾವಣ ಮಾಸದ ಐದು ದಿನಗಳು ಈಗಾಗಲೇ ಕಳೆದಿದೆ ಆದರೆ ಮಳೆಯೇ ಬಂದಿಲ್ಲ ಎಂದು ಹಿಂದೂ ಮಹಾಸಂಘದ ರಾಮಕಾಂತ್ ವರ್ಮಾ ಹೇಳಿದ್ದಾರೆ. ಕಳೆದ ವಾರ ನಾವು ಹವನ್ ಪೂಜಾ ಮಾಡಿದ್ದೆವು. ಈಗ ನಾವು ಕಪ್ಪೆ ಜೋಡಿಗೆ ಮದುವೆ ಮಾಡುತ್ತಿದ್ದೇವೆ. ಈ ಆಚರಣೆಯಿಂದಾಗಿ ನಮ್ಮ ಪ್ರದೇಶದಲ್ಲಿ ಮಳೆಯಾಗಬಹುದು ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಈ ಆಚರಣೆ ಖಂಡಿತವಾಗಿಯೂ ಫಲ ನೀಡುತ್ತದೆ, ಇಲ್ಲಿ ಮಳೆಯಾಗುತ್ತದೆ ಎಂದು ಮದುವೆಯಲ್ಲಿ ಭಾಗಿಯಾದ ಜನರು ಹೇಳಿದ್ದಾರೆ.

ಜುಲೈ 13ರಂದು ಇಲ್ಲಿನ ಮಹಾರಾಜ್ ಗಂಜ್ ಜಿಲ್ಲೆಯಲ್ಲಿನ ಮಹಿಳೆಯರು ಸ್ಥಳೀಯ ಶಾಸಕ ಜೈಮಂಗಲ್ ಕನೋಜಿಯಾ ಮತ್ತು ನಗರ ಪಾಲಿಕೆ ಚೇರ್ ಮೆನ್ ಕೃಷ್ಣ ಗೋಪಾಲ್ ಜೈಸ್ವಾಲ್ ಅವರಿಗೆ ಕೆಸರು ಸ್ನಾನ ಮಾಡಿಸಿದ್ದರು. ಮಳೆ ದೇವರಾದ ಇಂದ್ರನನ್ನು ಒಲಿಸುವುದಕ್ಕಾಗಿ ಆ ಪ್ರದೇಶದ ನಾಯಕರಿಗೆ ಕೆಸರು ಸ್ನಾನ ಮಾಡಿಸುವ ಆಚರಣೆಯಾಗಿದೆ ಇದು.

ಬರದ ಪರಿಸ್ಥಿತಿ ಎದುರಿಸುತ್ತಿರಾಗ ಮಹಿಳೆಯರು ಮಾತ್ರ ಹಳೇ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ ಎಂದಿದ್ದಾರೆ ಜೈಸ್ವಾಲ್.

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ