Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​

ಜಮ್ಮುವಿನಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಯಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೆಕ್ಯೂರಿಟಿ ಫೋರ್ಸ್​ಗಳು ಹೈ ಅಲರ್ಟ್​​ನಲ್ಲಿದ್ದು, ನಿರಂತರವಾಗಿ ಗಮನಿಸುತ್ತಿವೆ.

ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​
ಜಮ್ಮುವಿನಲ್ಲಿ ಭದ್ರತಾ ಪಡೆ ಸಿಬ್ಬಂದಿ ಹೈ ಅಲರ್ಟ್​​
Follow us
TV9 Web
| Updated By: Lakshmi Hegde

Updated on: Jun 30, 2021 | 9:40 AM

ಜಮ್ಮುವಿನಲ್ಲಿ ಇಂದು ಮತ್ತೆ ಡ್ರೋನ್​ಗಳು ಕಾಣಿಸಿಕೊಂಡಿವೆ. ಸತತ ನಾಲ್ಕನೇ ದಿನವೂ ಹೀಗೆ ಡ್ರೋನ್​ಗಳು ಹಾರಾಟ ನಡೆಸಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್​ ಆಗಿವೆ. ಇಂದು ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಡ್ರೋನ್​​ಗಳು ಪತ್ತೆಯಾಗಿವೆ. ಇಂದೂ ಕೂಡ ಮುಂಜಾನೆ ಹೊತ್ತಲ್ಲಿ ಮಿರಾನ್​ ಸಾಹೀಬ್​, ಕಲುಚಕ್​ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋನ್​​ಗಳು ಹಾರಾಡಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಕಲುಚಕ್​ ಬಳಿ ಮುಂಜಾನೆ 4.40ರ ಹೊತ್ತಿಗೆ, 4.52ರ ಸಮಯದಲ್ಲಿ ಕುಂಜ್ವಾನಿಯಲ್ಲಿ ಡ್ರೋನ್​ ಹಾರಾಡಿದ್ದಾಗಿ ಭದ್ರತಾ ಪಡೆಗಳು ಮಾಹಿತಿ ನೀಡಿವೆ. ಕಳೆದ ನಾಲ್ಕು ದಿನಗಳಲ್ಲಿ ಜಮ್ಮು ಮತ್ತು ಅಲ್ಲಿನ ಸೇನಾ ಶಿಬಿರಗಳ ಸುತ್ತ ಸುಮಾರು ಏಳು ಡ್ರೋನ್​​ಗಳು ಹಾರಾಡಿವೆ.

ಜೂ.27ರಂದು ಜಮ್ಮುವಿನ ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಅವಳಿ ಸ್ಫೋಟವಾಗಿತ್ತು. ಈ ಸ್ಫೋಟಕವನ್ನು ಸ್ಫೋಟಿಸಲು ಡ್ರೋನ್​​ಗಳನ್ನೇ ಬಳಸಿದ್ದಾರೆಂದು ತನಿಖೆಯಿಂದ ಗೊತ್ತಿದೆ. ಇದೇ ಮೊದಲ ಬಾರಿಗೆ ಪಾಕಿಸ್ತಾನ ಮೂಲದ ಉಗ್ರಸಂಘಟನೆಗಳು ಸ್ಫೋಟಕವನ್ನು ಡ್ರೋನ್​ ಮೂಲಕ ಎಸೆದಿದ್ದಾರೆ ಎಂದೂ ಹೇಳಲಾಗಿದೆ. ಜಮ್ಮು ಏರ್​ಪೋರ್ಟ್​​ನಿಂದ ಅಂತಾರಾಷ್ಟ್ರೀಯ ಗಡಿ ಕೇವಲ 14 ಕಿಮೀ ದೂರ ಇದೆ. ಈ ಏರ್​ಪೋರ್ಟ್​ ಏರ್​ಫೋರ್ಸ್​ ನಿಯಂತ್ರಣದಲ್ಲಿದ್ದು, ಏರ್​ ಟ್ರಾಫಿಕ್​ ಕಂಟ್ರೋಲ್​ ಕೂಡ ಹೊಂದಿದೆ. ನಾಗರಿಕ ವಿಮಾನ ನಿಲ್ದಾಣವೂ ಹೌದು. ಹೀಗೆ ಹಾರಾಟ ನಡೆಸುತ್ತಿರುವ ಡ್ರೋನ್​ಗಳ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿಯನ್ನೂ ನಡೆಸುತ್ತಿದ್ದಾರೆ.

ಜಮ್ಮುವಿನಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಯಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೆಕ್ಯೂರಿಟಿ ಫೋರ್ಸ್​ಗಳು ಹೈ ಅಲರ್ಟ್​​ನಲ್ಲಿದ್ದು, ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಮತ್ತು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಜತೆ ಉನ್ನತ ಮಟ್ಟದ ಸಭೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: Petrol Price Today: ಇಂದು ಪೆಟ್ರೋಲ್​, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಗಮನಿಸಿ

(Today Again 3 drones spotted near military camps in Jammu)

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ