AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​

ಜಮ್ಮುವಿನಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಯಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೆಕ್ಯೂರಿಟಿ ಫೋರ್ಸ್​ಗಳು ಹೈ ಅಲರ್ಟ್​​ನಲ್ಲಿದ್ದು, ನಿರಂತರವಾಗಿ ಗಮನಿಸುತ್ತಿವೆ.

ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​
ಜಮ್ಮುವಿನಲ್ಲಿ ಭದ್ರತಾ ಪಡೆ ಸಿಬ್ಬಂದಿ ಹೈ ಅಲರ್ಟ್​​
TV9 Web
| Edited By: |

Updated on: Jun 30, 2021 | 9:40 AM

Share

ಜಮ್ಮುವಿನಲ್ಲಿ ಇಂದು ಮತ್ತೆ ಡ್ರೋನ್​ಗಳು ಕಾಣಿಸಿಕೊಂಡಿವೆ. ಸತತ ನಾಲ್ಕನೇ ದಿನವೂ ಹೀಗೆ ಡ್ರೋನ್​ಗಳು ಹಾರಾಟ ನಡೆಸಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್​ ಆಗಿವೆ. ಇಂದು ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಡ್ರೋನ್​​ಗಳು ಪತ್ತೆಯಾಗಿವೆ. ಇಂದೂ ಕೂಡ ಮುಂಜಾನೆ ಹೊತ್ತಲ್ಲಿ ಮಿರಾನ್​ ಸಾಹೀಬ್​, ಕಲುಚಕ್​ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋನ್​​ಗಳು ಹಾರಾಡಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಕಲುಚಕ್​ ಬಳಿ ಮುಂಜಾನೆ 4.40ರ ಹೊತ್ತಿಗೆ, 4.52ರ ಸಮಯದಲ್ಲಿ ಕುಂಜ್ವಾನಿಯಲ್ಲಿ ಡ್ರೋನ್​ ಹಾರಾಡಿದ್ದಾಗಿ ಭದ್ರತಾ ಪಡೆಗಳು ಮಾಹಿತಿ ನೀಡಿವೆ. ಕಳೆದ ನಾಲ್ಕು ದಿನಗಳಲ್ಲಿ ಜಮ್ಮು ಮತ್ತು ಅಲ್ಲಿನ ಸೇನಾ ಶಿಬಿರಗಳ ಸುತ್ತ ಸುಮಾರು ಏಳು ಡ್ರೋನ್​​ಗಳು ಹಾರಾಡಿವೆ.

ಜೂ.27ರಂದು ಜಮ್ಮುವಿನ ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಅವಳಿ ಸ್ಫೋಟವಾಗಿತ್ತು. ಈ ಸ್ಫೋಟಕವನ್ನು ಸ್ಫೋಟಿಸಲು ಡ್ರೋನ್​​ಗಳನ್ನೇ ಬಳಸಿದ್ದಾರೆಂದು ತನಿಖೆಯಿಂದ ಗೊತ್ತಿದೆ. ಇದೇ ಮೊದಲ ಬಾರಿಗೆ ಪಾಕಿಸ್ತಾನ ಮೂಲದ ಉಗ್ರಸಂಘಟನೆಗಳು ಸ್ಫೋಟಕವನ್ನು ಡ್ರೋನ್​ ಮೂಲಕ ಎಸೆದಿದ್ದಾರೆ ಎಂದೂ ಹೇಳಲಾಗಿದೆ. ಜಮ್ಮು ಏರ್​ಪೋರ್ಟ್​​ನಿಂದ ಅಂತಾರಾಷ್ಟ್ರೀಯ ಗಡಿ ಕೇವಲ 14 ಕಿಮೀ ದೂರ ಇದೆ. ಈ ಏರ್​ಪೋರ್ಟ್​ ಏರ್​ಫೋರ್ಸ್​ ನಿಯಂತ್ರಣದಲ್ಲಿದ್ದು, ಏರ್​ ಟ್ರಾಫಿಕ್​ ಕಂಟ್ರೋಲ್​ ಕೂಡ ಹೊಂದಿದೆ. ನಾಗರಿಕ ವಿಮಾನ ನಿಲ್ದಾಣವೂ ಹೌದು. ಹೀಗೆ ಹಾರಾಟ ನಡೆಸುತ್ತಿರುವ ಡ್ರೋನ್​ಗಳ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡಿನ ದಾಳಿಯನ್ನೂ ನಡೆಸುತ್ತಿದ್ದಾರೆ.

ಜಮ್ಮುವಿನಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಯಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸೆಕ್ಯೂರಿಟಿ ಫೋರ್ಸ್​ಗಳು ಹೈ ಅಲರ್ಟ್​​ನಲ್ಲಿದ್ದು, ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಮತ್ತು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಜತೆ ಉನ್ನತ ಮಟ್ಟದ ಸಭೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: Petrol Price Today: ಇಂದು ಪೆಟ್ರೋಲ್​, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ! ಪ್ರಮುಖ ನಗರಗಳಲ್ಲಿನ ಇಂಧನ ದರ ವಿವರ ಗಮನಿಸಿ

(Today Again 3 drones spotted near military camps in Jammu)

Follow Us
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?