AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ […]

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್
ಶಕ್ತಿಕಾಂತ್​ ದಾಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 17, 2020 | 10:24 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಶಕ್ತಿಕಾಂತ್ ದಾಸ್ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿತ: ಭಾರತದ ಆರ್ಥಿಕ ಪ್ರಗತಿ ಸದ್ಯ ಶೇಕಡಾ 1.9ರಷ್ಟಿದೆ. ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿದಿದೆ. 2021-2022ರಲ್ಲಿ ಶೇ.7.4ರಷ್ಟು ಜಿಡಿಪಿ ವೃದ್ಧಿಯಾಗುವ ನಿರೀಕ್ಷೆ ಇದೆ. ಶೇಕಡಾ 21.3ರಷ್ಟು ಟ್ರ್ಯಾಕ್ಟರ್​ ಮಾರಾಟ ಹೆಚ್ಚಳ. ಜಿ20 ರಾಷ್ಟ್ರಗಳಲ್ಲಿ 1.9ರಷ್ಟು ಜಿಡಿಪಿ ಬೆಳವಣಿಗೆಯಾಗಿದೆ. ಇಷ್ಟೊಂದು ಬೆಳವಣಿಗೆ ಭಾರತದ್ದು ಅತಿ ಹೆಚ್ಚು ಬೆಳವಣಿಗೆ. ಈ ಬಗ್ಗೆ ಐಎಂಎಫ್ ತಿಳಿಸಿದೆ.

ದೇಶದಲ್ಲಿ ಎಟಿಎಂಗಳನ್ನ ಶೇಕಡಾ 91ರಷ್ಟು ಬಳಕೆ ಮಾಡುತ್ತಿದ್ದಾರೆ. ಬ್ಯಾಂಕ್‌ಗಳಿಗೆ ಹೊಸದಾಗಿ ಕರೆನ್ಸಿ ಸಹ ಬಿಡುಗಡೆ ಮಾಡಲಾಗಿದೆ. ಉತ್ಪಾದನಾ ವಲಯದಲ್ಲಿ ಕಳೆದ 4 ತಿಂಗಳಿಂದ ಉತ್ಪಾದನೆ ತೀರಾ ಕಡಿಮೆಯಾಗಿದೆ. ಬೇಡಿಕೆ ಸಹ ಶೇಕಡಾ 25ರಿಂದ 30ರಷ್ಟು ಕುಸಿದಿದೆ. ಭಾರತದಲ್ಲಿ ಅಗತ್ಯ ಪ್ರಮಾಣದ ದಿನಸಿ ದಾಸ್ತಾನಿದೆ. ಸಮರ್ಪಕವಾಗಿ ಹಣದ ಹರಿವು ಕಾಪಾಡಿಕೊಳ್ಳುತ್ತೇವೆ ಎಂದರು.

Published On - 10:18 am, Fri, 17 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ