AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ […]

ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ -ಶಕ್ತಿಕಾಂತ್ ದಾಸ್
ಶಕ್ತಿಕಾಂತ್​ ದಾಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 17, 2020 | 10:24 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ದೇಶದ ಪರಿಸ್ಥಿತಿಯನ್ನು ಆರ್‌ಬಿಐ ಮಾನಿಟರಿಂಗ್ ಮಾಡುತ್ತಿದೆ. RBIನ 150 ಸಿಬ್ಬಂದಿ ಹಗಲು-ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

1930ರ ನಂತರ ಜಾಗತಿಕ ಆರ್ಥಿಕ ಕುಸಿತ ಆಗಿತ್ತು. ಈಗಲೂ ಅದೇ ರೀತಿ ಆರ್ಥಿಕ ಕುಸಿತದ ಮುನ್ಸೂಚನೆ ಸಿಕ್ಕಿದೆ. ಆದರೆ ಸದ್ಯ ಭಾರತದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜಗತ್ತಿನಲ್ಲೇ ಕೆಲವು ವಲಯಗಳಲ್ಲಿ ಉತ್ಪಾದನೆ ಕುಸಿಯುತ್ತಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯವಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಶಕ್ತಿಕಾಂತ್ ದಾಸ್ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿತ: ಭಾರತದ ಆರ್ಥಿಕ ಪ್ರಗತಿ ಸದ್ಯ ಶೇಕಡಾ 1.9ರಷ್ಟಿದೆ. ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರ್​​ನಷ್ಟು ಕುಸಿದಿದೆ. 2021-2022ರಲ್ಲಿ ಶೇ.7.4ರಷ್ಟು ಜಿಡಿಪಿ ವೃದ್ಧಿಯಾಗುವ ನಿರೀಕ್ಷೆ ಇದೆ. ಶೇಕಡಾ 21.3ರಷ್ಟು ಟ್ರ್ಯಾಕ್ಟರ್​ ಮಾರಾಟ ಹೆಚ್ಚಳ. ಜಿ20 ರಾಷ್ಟ್ರಗಳಲ್ಲಿ 1.9ರಷ್ಟು ಜಿಡಿಪಿ ಬೆಳವಣಿಗೆಯಾಗಿದೆ. ಇಷ್ಟೊಂದು ಬೆಳವಣಿಗೆ ಭಾರತದ್ದು ಅತಿ ಹೆಚ್ಚು ಬೆಳವಣಿಗೆ. ಈ ಬಗ್ಗೆ ಐಎಂಎಫ್ ತಿಳಿಸಿದೆ.

ದೇಶದಲ್ಲಿ ಎಟಿಎಂಗಳನ್ನ ಶೇಕಡಾ 91ರಷ್ಟು ಬಳಕೆ ಮಾಡುತ್ತಿದ್ದಾರೆ. ಬ್ಯಾಂಕ್‌ಗಳಿಗೆ ಹೊಸದಾಗಿ ಕರೆನ್ಸಿ ಸಹ ಬಿಡುಗಡೆ ಮಾಡಲಾಗಿದೆ. ಉತ್ಪಾದನಾ ವಲಯದಲ್ಲಿ ಕಳೆದ 4 ತಿಂಗಳಿಂದ ಉತ್ಪಾದನೆ ತೀರಾ ಕಡಿಮೆಯಾಗಿದೆ. ಬೇಡಿಕೆ ಸಹ ಶೇಕಡಾ 25ರಿಂದ 30ರಷ್ಟು ಕುಸಿದಿದೆ. ಭಾರತದಲ್ಲಿ ಅಗತ್ಯ ಪ್ರಮಾಣದ ದಿನಸಿ ದಾಸ್ತಾನಿದೆ. ಸಮರ್ಪಕವಾಗಿ ಹಣದ ಹರಿವು ಕಾಪಾಡಿಕೊಳ್ಳುತ್ತೇವೆ ಎಂದರು.

Published On - 10:18 am, Fri, 17 April 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ