AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸುದಾಮ ಕೃಷ್ಣನಿಗೆ ಚೀಲದಲ್ಲಿ ಅಕ್ಕಿ ನೀಡುತ್ತಿದ್ದರೆ ಅದು ಭ್ರಷ್ಟಾಚಾರ ಆಗುತ್ತಿತ್ತು: ಮೋದಿ

ಉತ್ತರ ಪ್ರದೇಶದ ಸಂಭಾಲ್​​​ನಲ್ಲಿ  ಕಲ್ಕಿ ಧಾಮ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಪ್ರಮೋದ್ ಜೀ, ನೀವು ನನಗೆ ಏನನ್ನೂ ನೀಡದಿರುವುದು ಒಳ್ಳೆಯದು, ಸಮಯ ಬದಲಾಗಿದೆ. ಇಂದಿನ ಯುಗದಲ್ಲಿ ಸುದಾಮನು ಶ್ರೀಕೃಷ್ಣನಿಗೆ ಅಕ್ಕಿ ಕೊಟ್ಟರೆ ಆ ವಿಡಿಯೊ ಹೊರಬಿದ್ದರೆ ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಹಾಕಿ, ಶ್ರೀಕೃಷ್ಣನಿಗೆ ಏನೋ ಕೊಡಲಾಗಿದೆ, ಶ್ರೀಕೃಷ್ಣ ಭ್ರಷ್ಟಾಚಾರ ಮಾಡುತ್ತಿದ್ದಾನೆ ಎಂಬ ತೀರ್ಪು ಬರುತ್ತಿತ್ತು ಎಂದಿದ್ದಾರೆ.

ಇಂದು ಸುದಾಮ ಕೃಷ್ಣನಿಗೆ ಚೀಲದಲ್ಲಿ ಅಕ್ಕಿ ನೀಡುತ್ತಿದ್ದರೆ ಅದು ಭ್ರಷ್ಟಾಚಾರ ಆಗುತ್ತಿತ್ತು: ಮೋದಿ
ಪ್ರಧಾನಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 19, 2024 | 6:28 PM

Share

ಸಂಭಾಲ್ ಫೆಬ್ರುವರಿ 19: ಇಂದು ಸುದಾಮ ಅಕ್ಕಿ ಕೊಟ್ಟರೆ ಶ್ರೀಕೃಷ್ಣನಿಗೂ ಭ್ರಷ್ಟಾಚಾರದ ಆರೋಪ ಬರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಉತ್ತರ ಪ್ರದೇಶದ (Uttar Pradesh)  ಸಂಭಾಲ್​​​ನಲ್ಲಿ  ಕಲ್ಕಿ ಧಾಮ ದೇವಾಲಯದ(Kalki Dham Temple) ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡುತ್ತಿದ್ದರವರು. ಶ್ರೀ ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ತಮ್ಮ ಭಾಷಣದಲ್ಲಿ, “ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ನಮ್ಮಲ್ಲಿ ಏನೂ ಇಲ್ಲ, ನಮ್ಮಲ್ಲಿರುವುದು  ಭಾವನೆಗಳು ಮಾತ್ರ ಎಂದು ಹೇಳಿದ್ದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಮೋದಿ ಅವರು (ಆಚಾರ್ಯ ಪ್ರಮೋದ್ ಕೃಷ್ಣಂ) ಎಲ್ಲರಿಗೂ ಕೊಡಲು ಏನಾದರೂ ಇದೆ ಆದರೆ ನನ್ನ ಬಳಿ ಏನೂ ಇಲ್ಲ, ನಾನು ನನ್ನ ಭಾವನೆಗಳನ್ನು ವ್ಯಕ್ತಪಡಿಸಬಲ್ಲೆ ಎಂದು ಹೇಳಿದರು.

ಪ್ರಮೋದ್ ಜೀ, ನೀವು ನನಗೆ ಏನನ್ನೂ ನೀಡದಿರುವುದು ಒಳ್ಳೆಯದು, ಸಮಯ ಬದಲಾಗಿದೆ. ಇಂದಿನ ಯುಗದಲ್ಲಿ ಸುದಾಮನು ಶ್ರೀಕೃಷ್ಣನಿಗೆ ಅಕ್ಕಿ ಕೊಟ್ಟರೆ ಆ ವಿಡಿಯೊ ಹೊರಬಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಹಾಕಿ, ಶ್ರೀಕೃಷ್ಣನಿಗೆ ಏನೋ ಕೊಡಲಾಗಿದೆ, ಶ್ರೀಕೃಷ್ಣ ಭ್ರಷ್ಟಾಚಾರ ಮಾಡುತ್ತಿದ್ದಾನೆ ಎಂಬ ತೀರ್ಪು ಬರುತ್ತಿತ್ತು. ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರಷ್ಟೇ ಸಾಕು. ಏನನ್ನೂ ನೀಡದಿರುವುದು ಉತ್ತಮ ಎಂದು ಹೇಳಿದ್ದಾರೆ.

ಮೋದಿ ಭಾಷಣ

ಕಲ್ಕಿಧಾಮ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಇಂದು ಸಂತರ ಶ್ರದ್ಧೆ ಹಾಗೂ ಸಾರ್ವಜನಿಕರ ಉತ್ಸಾಹದಿಂದ ಮತ್ತೊಂದು ಪುಣ್ಯಕ್ಷೇತ್ರದ ಶಂಕುಸ್ಥಾಪನೆ ನಡೆಯುತ್ತಿದ್ದು, ಆಚಾರ್ಯರು ಮತ್ತು ಸಂತರ ಸಮ್ಮುಖದಲ್ಲಿ ಭವ್ಯವಾದ ಕಲ್ಕಿ ಧಾಮದ ಶಂಕುಸ್ಥಾಪನೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಲ್ಕಿ ಧಾಮವು ಭಾರತೀಯ ನಂಬಿಕೆಯ ಮತ್ತೊಂದು ಶ್ರೇಷ್ಠ ಕೇಂದ್ರವಾಗಿ ಹೊರಹೊಮ್ಮುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದು ಸಾಂಸ್ಕೃತಿಕ ಪುನರುಜ್ಜೀವನದ ಅದ್ಭುತ ಕ್ಷಣವಾಗಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆ, ಅಬುಧಾಬಿಯಲ್ಲಿ ಮತ್ತೊಂದು ದೇವಾಲಯ, ಕಾಶಿ ವಿಶ್ವನಾಥ ದೇವಾಲಯದ ನವೀಕರಣ ಮತ್ತು ಕಾಶಿಯ ಪರಿವರ್ತನೆಯನ್ನು ನಾವು ನೋಡಿದ್ದೇವೆ. “ಯಾತ್ರಾ ಕೇಂದ್ರಗಳುಮತ್ತು ವೈದ್ಯಕೀಯ ಕಾಲೇಜುಗಳನ್ನು ಸಹ ನಿರ್ಮಿಸಲಾಗುತ್ತಿದೆ”. ಇದು ಭಾರತದ ಸಾಂಸ್ಕೃತಿಕ ಜಾಗೃತಿ ಮತ್ತು ಅಭಿವೃದ್ಧಿಯ ಕ್ಷಣ ಎಂದಿದ್ದಾರೆ ಮೋದಿ.

ಇದನ್ನೂ ಓದಿ: Shri Kalki Dham Temple: ಕಲ್ಕಿ ಧಾಮ್‌ ಶಂಕುಸ್ಥಾಪನೆ, ಇದು ನನಗೆ ಸಿಕ್ಕ ಸೌಭಾಗ್ಯ ಎಂದ ಪ್ರಧಾನಿ ಮೋದಿ

“ಜನವರಿ 22 ರಾಮ ಮಂದಿರವನ್ನು ತೆರೆದಾಗ, ಹೊಸ ಯುಗ, ಹೊಸ ಚಕ್ರದ ಆರಂಭವಾಗಿದೆ. ಕಲ್ಕಿ ದೇವಸ್ಥಾನವು ಭವಿಷ್ಯದ ಸಿದ್ಧತೆಯಾಗಿದೆ. ಇದು ಕಲ್ಕಿ ಅವತಾರದ ದೇವಾಲಯವಾಗಿದ್ದು, ವಿಷ್ಣುವಿನ ಎಲ್ಲಾ ಹತ್ತು ಅವತಾರಗಳಿಗೆ ಗರ್ಭಗುಡಿಯನ್ನು ಹೊಂದಿರುತ್ತದೆ, ”ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!