AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಪೆಟ್ರೋಲ್​ ಡೀಸೆಲ್​ ದರ: 10 ದಿನಗಳಿಂದ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್​ ದರ

Petrol and Diesel Price Today: ಪೆಟ್ರೋಲ್​ ಮತ್ತು ಡಿಸೇಲ್​ ದರ ಪ್ರತಿದಿನ ಪರಿಷ್ಕರಣೆಯಾಗುತ್ತಿರುತ್ತದೆ. ಪೆಟ್ರೋಲ್​ ಮತ್ತು ಡೀಸೆಲ್​ ದರ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿರುತ್ತದೆ. ಹಾಗಾದರೆ 2024 ಮಾರ್ಚ್​ 30 ರಂದು ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಎಷ್ಟಿದೆ?... ಇಲ್ಲಿದೆ ಮಾಹಿತಿ...

ಇಂದಿನ ಪೆಟ್ರೋಲ್​ ಡೀಸೆಲ್​ ದರ: 10 ದಿನಗಳಿಂದ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಪಾಡಿಕೊಂಡ ಪೆಟ್ರೋಲ್​ ದರ
ಪೆಟ್ರೋಲ್Image Credit source: English Jagran
ವಿವೇಕ ಬಿರಾದಾರ
|

Updated on:Mar 31, 2024 | 7:24 AM

Share

2017ರ ಜೂನ್​ನಲ್ಲಿ ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್‌ಗೆ ದೈನಂದಿನ ಬೆಲೆ ಪರಿಷ್ಕರಣೆ ಕಾರ್ಯವಿಧಾನವನ್ನು ಜಾರಿಗೆ ತಂದಿತು. ಅಂದಿನಿಂದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ ದರಗಳನ್ನು ಪರಿಷ್ಕರಿಸುತ್ತಿವೆ. ಇದಕ್ಕೂ ಮುನ್ನ ಇಂಧನ ಬೆಲೆಯನ್ನು ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗಿತ್ತು. ಹಾಗಾದರೆ ಇಂದು (ಶನಿವಾರ ಮಾರ್ಚ್​ 30) ರ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಇಲ್ಲಿದೆ..

ಬೆಂಗಳೂರಿನಲ್ಲಿ ಪೆಟ್ರೋಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಶುಕ್ರವಾರ (ಮಾರ್ಚ್​. 29) ರಂದು ಇದ್ದ ಬೆಲಯೇ ಶನಿವಾರವೂ ಮುಂದುವರೆದಿದೆ. ಇಂದು (ಶನಿವಾರ ಮಾರ್ಚ್​​.30) ರಂದು ಬೆಂಗಳೂರಿನಲ್ಲಿ ಪೆಟ್ರೋಲ್​​ ಬೆಲೆ ಪ್ರತಿ ಲೀಟರ್‌ಗೆ 99.84 ರೂ. ಇದೆ. ಇನ್ನು ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ಪೆಟ್ರೋಲ್ ಬೆಲೆ 0.05 ರಷ್ಟು ಮಾತ್ರ ಏರಿಳಿತ ಕಂಡಿದೆ. ಇನ್ನು ಡೀಸೆಲ್​ ದರ ಶುಕ್ರವಾರಕ್ಕಿಂತ ಕೊಂಚ ಏರಿಕೆ ಕಂಡಿದೆ. ಇಂದು 85.98 ರೂ. ಡೀಸೆಲ್​ ದರ ಇದೆ. ಶುಕ್ರವಾರಕ್ಕಿಂತ 0.05 ರೂ. ಏರಿಕೆಯಾಗಿದೆ.

 ಪೆಟ್ರೋಲ್​ ಮತ್ತು ಡೀಸೆಲ್​ ದರ
ನಗರ ಪೆಟ್ರೋಲ್​ (ಲೀ) ಡೀಸೆಲ್ (ಲೀ)​​
ಅಹಮದಾಬಾದ್ 94.44 89,95​
ಭೋಪಾಲ್ 106.29 91.68
ಚೆನ್ನೈ 100.85 92.34
ಹೈದರಾಬಾದ್ 107.41 95.65
ಜಮ್ಮು 95.43 81.28
ಕೊಲ್ಕತ್ತಾ 103.94 90.76
ಲಖನೌ 94.65 87.76
ನಾಗಪುರ 103.98 90.86
ನೋಯ್ಡಾ 94.65 87.75
ಪುಣೆ 103.88 90.41

ಈ ತಿಂಗಳು ದಾಖಲಾದ ಗರಿಷ್ಠ ಪೆಟ್ರೋಲ್​ ಬೆಲೆ ಅಂದರೆ 101.94 ರೂ. ಮಾರ್ಚ್ 1 ರಿಂದ ಮಾರ್ಚ್ 30 ರ ನಡುವೆ ಶೇ 2.06 ರಷ್ಟು ಮಾತ್ರ ಪೆಟ್ರೋಲ್​ ದರದಲ್ಲಿ ಏರಿಳಿತ ಕಂಡಿದೆ. ಇನ್ನು ಮಾರ್ಚ್‌ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ದರ 99.84 ರೂ. ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Sat, 30 March 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ