AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ
ಶೀಲ್​ಭದ್ರ ದತ್ತಾ (ಎಡ)- ಕಬಿರುಲ್​ ಇಸ್ಲಾಂ(ಬಲ)
Lakshmi Hegde
| Edited By: |

Updated on: Dec 18, 2020 | 2:25 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಒಂದರ ಬೆನ್ನಿಗೆ ಒಂದರಂತೆ ಶಾಕ್​ ಎದುರಾಗುತ್ತಿದೆ. ಪಕ್ಷದಿಂದ ಪ್ರಮುಖ ನಾಯಕರು ಹೊರನಡೆಯುತ್ತಿದ್ದು, ಇಂದು ಬೆಳಗ್ಗೆ ಬರಾಕ್​ಪುರ ಶಾಸಕ ಶೀಲ್​​ಭದ್ರ ದತ್ತಾ ಮತ್ತು ಪಕ್ಷದ ಸಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕಬಿರುಲ್​ ಇಸ್ಲಾಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಲ್​ಭದ್ರ ದತ್ತಾ ಪ್ರಾಥಮಿಕ ಸದಸ್ಯತ್ವವನ್ನೇ ತೊರೆದಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ. ಈ ಸರಣಿ ರಾಜೀನಾಮೆ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆಯೂ ಇದ್ದು, ಇಂದು ದೀದಿ ತುರ್ತು ಸಭೆ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವೆಂಬರ್​ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಎರಡು ದಿನಗಳ ಹಿಂದೆ ಮೊದಲು ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅಧಿಕಾರಿ ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ತೊರೆದಿದ್ದಾರೆ. ಅದರ ಬೆನ್ನಲ್ಲೇ ಮತ್ತೋರ್ವ ಪ್ರಭಾವಿ ಶಾಸಕ ಜಿತೇಂದ್ರ ತಿವಾರಿ ನಿನ್ನೆ ಅಸಾನ್ಸೋಲ್ ಮಹಾನಗರ ಪಾಲಿಕೆ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಮುಖ ನಾಯಕರ ಸಾಲುಸಾಲು ರಾಜೀನಾಮೆಯಿಂದಾಗಿ, ಟಿಎಂಸಿ ಪಕ್ಷದೊಳಗೆ ಏನಾಗುತ್ತಿದೆ? ಆಂತರಿಕವಾಗಿ ಏನೂ ಸರಿಯಿಲ್ಲವಾ ಎಂಬ ಪ್ರಶ್ನೆ ಏಳುತ್ತಿದೆ.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!