AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ
ಶೀಲ್​ಭದ್ರ ದತ್ತಾ (ಎಡ)- ಕಬಿರುಲ್​ ಇಸ್ಲಾಂ(ಬಲ)
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 18, 2020 | 2:25 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಒಂದರ ಬೆನ್ನಿಗೆ ಒಂದರಂತೆ ಶಾಕ್​ ಎದುರಾಗುತ್ತಿದೆ. ಪಕ್ಷದಿಂದ ಪ್ರಮುಖ ನಾಯಕರು ಹೊರನಡೆಯುತ್ತಿದ್ದು, ಇಂದು ಬೆಳಗ್ಗೆ ಬರಾಕ್​ಪುರ ಶಾಸಕ ಶೀಲ್​​ಭದ್ರ ದತ್ತಾ ಮತ್ತು ಪಕ್ಷದ ಸಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕಬಿರುಲ್​ ಇಸ್ಲಾಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಲ್​ಭದ್ರ ದತ್ತಾ ಪ್ರಾಥಮಿಕ ಸದಸ್ಯತ್ವವನ್ನೇ ತೊರೆದಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ. ಈ ಸರಣಿ ರಾಜೀನಾಮೆ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆಯೂ ಇದ್ದು, ಇಂದು ದೀದಿ ತುರ್ತು ಸಭೆ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವೆಂಬರ್​ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಎರಡು ದಿನಗಳ ಹಿಂದೆ ಮೊದಲು ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅಧಿಕಾರಿ ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ತೊರೆದಿದ್ದಾರೆ. ಅದರ ಬೆನ್ನಲ್ಲೇ ಮತ್ತೋರ್ವ ಪ್ರಭಾವಿ ಶಾಸಕ ಜಿತೇಂದ್ರ ತಿವಾರಿ ನಿನ್ನೆ ಅಸಾನ್ಸೋಲ್ ಮಹಾನಗರ ಪಾಲಿಕೆ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಮುಖ ನಾಯಕರ ಸಾಲುಸಾಲು ರಾಜೀನಾಮೆಯಿಂದಾಗಿ, ಟಿಎಂಸಿ ಪಕ್ಷದೊಳಗೆ ಏನಾಗುತ್ತಿದೆ? ಆಂತರಿಕವಾಗಿ ಏನೂ ಸರಿಯಿಲ್ಲವಾ ಎಂಬ ಪ್ರಶ್ನೆ ಏಳುತ್ತಿದೆ.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ

ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್