AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೆ ಆಘಾತ; ಇನ್ನಿಬ್ಬರು ಪ್ರಭಾವಿ ನಾಯಕರ ರಾಜೀನಾಮೆ
ಶೀಲ್​ಭದ್ರ ದತ್ತಾ (ಎಡ)- ಕಬಿರುಲ್​ ಇಸ್ಲಾಂ(ಬಲ)
Lakshmi Hegde
| Edited By: |

Updated on: Dec 18, 2020 | 2:25 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಒಂದರ ಬೆನ್ನಿಗೆ ಒಂದರಂತೆ ಶಾಕ್​ ಎದುರಾಗುತ್ತಿದೆ. ಪಕ್ಷದಿಂದ ಪ್ರಮುಖ ನಾಯಕರು ಹೊರನಡೆಯುತ್ತಿದ್ದು, ಇಂದು ಬೆಳಗ್ಗೆ ಬರಾಕ್​ಪುರ ಶಾಸಕ ಶೀಲ್​​ಭದ್ರ ದತ್ತಾ ಮತ್ತು ಪಕ್ಷದ ಸಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕಬಿರುಲ್​ ಇಸ್ಲಾಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಲ್​ಭದ್ರ ದತ್ತಾ ಪ್ರಾಥಮಿಕ ಸದಸ್ಯತ್ವವನ್ನೇ ತೊರೆದಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಟಿಎಂಸಿಯ ಒಟ್ಟು ನಾಲ್ವರು ಪ್ರಮುಖ ನಾಯಕರು ರಾಜೀನಾಮೆ ನೀಡುವ ಮೂಲಕ ತಮ್ಮ ನಾಯಕಿ ಮಮತಾ ಬ್ಯಾನರ್ಜಿಗೆ ಆಘಾತ ನೀಡಿದ್ದಾರೆ. ಈ ಸರಣಿ ರಾಜೀನಾಮೆ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆಯೂ ಇದ್ದು, ಇಂದು ದೀದಿ ತುರ್ತು ಸಭೆ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವೆಂಬರ್​ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಎರಡು ದಿನಗಳ ಹಿಂದೆ ಮೊದಲು ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುವೇಂದು ಅಧಿಕಾರಿ ನಿನ್ನೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ತೊರೆದಿದ್ದಾರೆ. ಅದರ ಬೆನ್ನಲ್ಲೇ ಮತ್ತೋರ್ವ ಪ್ರಭಾವಿ ಶಾಸಕ ಜಿತೇಂದ್ರ ತಿವಾರಿ ನಿನ್ನೆ ಅಸಾನ್ಸೋಲ್ ಮಹಾನಗರ ಪಾಲಿಕೆ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಮುಖ ನಾಯಕರ ಸಾಲುಸಾಲು ರಾಜೀನಾಮೆಯಿಂದಾಗಿ, ಟಿಎಂಸಿ ಪಕ್ಷದೊಳಗೆ ಏನಾಗುತ್ತಿದೆ? ಆಂತರಿಕವಾಗಿ ಏನೂ ಸರಿಯಿಲ್ಲವಾ ಎಂಬ ಪ್ರಶ್ನೆ ಏಳುತ್ತಿದೆ.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ