AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮುದ್ದು ಮಗುವಿನ ಮುಖ ವಿರೂಪಗೊಳಿಸಿದ ಬಾಲಕ

ಬಾಲಕನೊಬ್ಬ ಮಗುವಿನ ಮುಖವನ್ನು ವಿರೂಪಗೊಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 16 ವರ್ಷದ ಬಾಲಕ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಆಕೆ ತಡೆಯಲು ಪ್ರಯತ್ನಿಸಿದಾಗ ಆತ ಕೋಪದಲ್ಲಿ ಕಲ್ಲುಗಳಿಂದ ಆಕೆಯ ಮುಖವನ್ನು ಜಜ್ಜಿ ವಿರೂಪಗೊಳಿಸಿದ್ದಾನೆ. ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಾಗ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಪೋಷಕರು ಮಗುವನ್ನು ಹುಡುಕಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ತಮಿಳುನಾಡು: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮುದ್ದು ಮಗುವಿನ ಮುಖ ವಿರೂಪಗೊಳಿಸಿದ ಬಾಲಕ
ಮಗುImage Credit source: The Week
ನಯನಾ ರಾಜೀವ್
|

Updated on: Feb 26, 2025 | 8:08 AM

Share

ಚೆನ್ನೈ, ಫೆಬ್ರವರಿ 26: ಅತ್ಯಾಚಾರ ವಿರೋಧಿಸಿದ್ದಕ್ಕೆ 3 ವರ್ಷದ ಮಗುವಿನ ಮುಖವನ್ನು ಬಾಲಕ ವಿರೂಪಗೊಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 16 ವರ್ಷದ ಬಾಲಕ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ತಡೆಯಲು ಪ್ರಯತ್ನಿಸಿದ್ದಕ್ಕೆ ಕೋಪಗೊಂಡು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾನೆ. ಮೈಲಾಡುತುರೈ ಜಿಲ್ಲೆಯ ಸೀರ್ಕಾಳಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಅಂಗನವಾಡಿಯಿಂದ ಮಗು ಮನೆಗೆ ಹಿಂದಿರುಗುತ್ತಿದ್ದಾಗ, 16 ವರ್ಷದ ಬಾಲಕ ಆಕೆಗೆ ಚಾಕೊಲೇಟ್​ ಕೊಡಿಸುವ ಆಮಿಷವೊಡ್ಡಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಆಕೆ ಸಹಾಯಕ್ಕಾಗಿ ಕೂಗಿದಾಗ ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿ ವಿರೂಪಗೊಳಿಸಿದ್ದಾನೆ. ಪದೇ ಪದೇ ಮುಖದ ಮೇಲೆ ಹಲ್ಲೆ ನಡೆಸಿ ಕಣ್ಣುಗಳಿಗೂ ತೀವ್ರವಾಗಿ ಗಾಯ ಮಾಡಿದ್ದಾನೆಂದು ತಿಳಿದುಬಂದಿದೆ.

ದಾಳಿಯಿಂದಾಗಿ ಮಗು ಪ್ರಜ್ಞೆ ಕಳೆದುಕೊಂಡಿತ್ತು, ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆಕೆಯನ್ನು ಹುಡುಕುತ್ತಿದ್ದ ಪೋಷಕರು ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆಕೆ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮತ್ತಷ್ಟು ಓದಿ: ಮಾಜಿ ಗರ್ಲ್​ಫ್ರೆಂಡ್​ಗೆ ಬೇರೊಬ್ಬನ ಜತೆ ಸಂಬಂಧ, ಸ್ನೇಹಿತರ ಜತೆ ಸೇರಿ ಆಕೆಯ ಮೇಲೆ ಅತ್ಯಾಚಾರ

ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ 16 ವರ್ಷದ ಬಾಲಕಿಯನ್ನು ಅಖಿಲ ಮಹಿಳಾ ಪೊಲೀಸ್ ಠಾಣೆ ಬಂಧಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಇತ್ತೀಚೆಗಷ್ಟೇ ತಮಿಳುನಾಡಿನ ಕೃಷ್ಣಾಪುರದ 15 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತನಾಗಿದ್ದ ಹುಡುಗನ ದಾಳಿಯಿಂದ ತಪ್ಪಿಸಿಕೊಂಡು ಗಂಟಲಿನ ಮೇಲೆ ಹಲವಾರು ಗಾಯಗಳಿಂದ ಆಸ್ಪತ್ರೆಗೆ ದಾಖಲಾದ ಒಂದು ದಿನದ ಬಳಿಕ ಈ ಘಟನೆ ಸಂಭವಿಸಿದೆ.

10 ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಅದೇ ಪ್ರದೇಶದ 12 ನೇ ತರಗತಿಯ ವಿದ್ಯಾರ್ಥಿ ಜತೆ ಇನ್​ಸ್ಟಾಗ್ರಾಂ ಮೂಲಕ ಸ್ನೇಹ ಬೆಳದಿತ್ತು. ಫೆಬ್ರವರಿ 23 ರ ರಾತ್ರಿ 10 ಗಂಟೆ ಸುಮಾರಿಗೆ ಆಕೆಯನ್ನು ಮನೆಯಿಂದ ಹೊರಗೆ ಕರೆದಿದ್ದ. ಆಕೆ ಹೊರಗೆ ಬಂದಾಗ, ಚಾಕುವಿನಿಂದ ಹಲ್ಲೆ ನಡೆಸಿ, 12 ಗ್ರಾಂ ಚಿನ್ನದ ಸರವನ್ನು ದೋಚಿದ್ದ. ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ