AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ […]

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 20, 2020 | 11:08 AM

Share

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ (75) ಕೊರೊನಾ ಪಾಸಿಟಿವ್​ ಬಂದಿತ್ತು. ಹಾಗಾಗಿ, ತಂದೆ ಮತ್ತು ಮಗ ಚಿಕಿತ್ಸೆಗೆಂದು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.

ಌಂಬುಲೆನ್ಸ್ ಚಾಲಕ ನಿದ್ದೆಗೆ ಜಾರಿದಾಗ ಅವಘಡ  ಌಂಬುಲೆನ್ಸ್​ ಕೊಂಡಪ್ರೋಲು ಬಳಿ ತಲುಪಿದಾಗ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಌಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಌಂಬುಲೆನ್ಸ್ ಚಾಲಕ ವಾಹನ ಚಲಾಯಿಸುವಾಗ ನಿದ್ದೆಗೆ ಜಾರಿದ್ದರಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Published On - 11:06 am, Thu, 20 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!