AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ […]

ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ: ಕೊರೊನಾ ಸೋಂಕಿತ ಸಿನಿಮಾ ವಿತರಕ-ತಂದೆ ಸಾವು
KUSHAL V
| Edited By: |

Updated on:Aug 20, 2020 | 11:08 AM

Share

ಹೈದರಾಬಾದ್​: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಌಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ತೆಲುಗು ಚಿತ್ರರಂಗದ ಖ್ಯಾತ ಸಿನಿಮಾ ವಿತರಕ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸಾವನ್ನಪ್ಪಿರೋ ಘಟನೆ ಕಳೆದ ಬುಧವಾರ ತೆಲಂಗಾಣದ ನಾಲಗೊಂಡ ಜಿಲ್ಲೆಯ ವಡಪಲ್ಲಿ ಚೆಕ್​ಪೋಸ್ಟ್​ ಬಳಿ ಸಂಭವಿಸಿದೆ. ಅಪ್ಪ-ಮಗ ಕೊರೊನಾ ಚಿಕಿತ್ಸೆಗೆಂದು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.. ಅರ್ಜುನ್​ ರೆಡ್ಡಿ, ಏಜೆಂಟ್​ ಸಾಯಿ ಶ್ರೀನಿವಾಸ ಆತ್ರೇಯ ಹಾಗೂ ಪದ್ಮಾವತ್​ ಸಿನಿಮಾಗಳ ವಿತರಕರಾಗಿದ್ದ 48 ವರ್ಷದ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ನಂದಗೋಪಾಲ್​ ರೆಡ್ಡಿಗೆ (75) ಕೊರೊನಾ ಪಾಸಿಟಿವ್​ ಬಂದಿತ್ತು. ಹಾಗಾಗಿ, ತಂದೆ ಮತ್ತು ಮಗ ಚಿಕಿತ್ಸೆಗೆಂದು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಌಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು.

ಌಂಬುಲೆನ್ಸ್ ಚಾಲಕ ನಿದ್ದೆಗೆ ಜಾರಿದಾಗ ಅವಘಡ  ಌಂಬುಲೆನ್ಸ್​ ಕೊಂಡಪ್ರೋಲು ಬಳಿ ತಲುಪಿದಾಗ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಕಮಲಾಕರ್​ ರೆಡ್ಡಿ ಹಾಗೂ ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಌಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಌಂಬುಲೆನ್ಸ್ ಚಾಲಕ ವಾಹನ ಚಲಾಯಿಸುವಾಗ ನಿದ್ದೆಗೆ ಜಾರಿದ್ದರಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Published On - 11:06 am, Thu, 20 August 20

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?