AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Grand Challenge: ಹಠಾತ್ ಟೊಮೆಟೋ ಬೆಲೆ ಏರಿಕೆ, ಕುಸಿತ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ, ಅಭಿಪ್ರಾಯಕ್ಕೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’ ಆರಂಭ

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ನಿಮ್ಮ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ನಾವು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ನಿಮ್ಮ ಮುಂದೆ ಪ್ರಸ್ತುತಿ ಪಡುತ್ತಿದ್ದೇನೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ.

Tomato Grand Challenge: ಹಠಾತ್ ಟೊಮೆಟೋ ಬೆಲೆ ಏರಿಕೆ, ಕುಸಿತ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ, ಅಭಿಪ್ರಾಯಕ್ಕೆ 'ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್' ಆರಂಭ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 01, 2023 | 11:19 AM

Share

ದೆಹಲಿ: ದೇಶದಾಂತ್ಯ ಬೆಲೆ ಏರಿಕೆಯಿಂದ ಟೊಮೆಟೊ ಹುಳಿ ಹೆಚ್ಚಾಗಿದೆ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ ಎಂದು ಜನರು ಬೊಬ್ಬೆ ಹೊಡೆಯುತ್ತಿದ್ದಾರೆ. ಇದೀಗ ಈ ಬೆಲೆ ಏರಿಕೆ ಎಂಬ ಹುಳಿಯನ್ನು ಕಡಿಮೆ ಮಾಡುವುದು ಹೇಗೆ? ಎಂಬುದರ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊವನ್ನು ಖರೀದಿ ಮಾಡಲು ಜನರು ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಅನಿವಾರ್ಯ ಎಂದು ಖರೀದಿ ಮಾಡುವ ಪರಿಸ್ಥಿತಿ ಉಂಟಾಗಿದೆ. ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಎಂದು ಜನರ ಮುಂದೆ ಇಟ್ಟಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ನಿಮ್ಮ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ನಾವು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ನಿಮ್ಮ ಮುಂದೆ ಪ್ರಸ್ತುತಿ ಪಡುತ್ತಿದ್ದೇನೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: Tomato Price: ಕರ್ನಾಟಕದಲ್ಲಿ ದಶಕ ಬಾರಿಸಿದ ಟೊಮ್ಯಾಟೋ ದರ, ಇದಕ್ಕೆ ಕಾರಣ ಏನು?

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಭೇದಗಳು, ಉತ್ಪಾದನಾ ತಂತ್ರಜ್ಞಾ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:53 am, Sat, 1 July 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​