AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ
ಟೊಮೆಟೊ
ನಯನಾ ರಾಜೀವ್
|

Updated on: Jul 12, 2023 | 11:48 AM

Share

ಟೊಮೆಟೊ(Tomato) ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಟೊಮೆಟೊ ಕಳ್ಳತನವಾಗಿದೆ. ಟೊಮೆಟೊ ಮಾತ್ರವಲ್ಲದೆ 350 ಕೆಜಿ ಶುಂಠಿಯನ್ನೂ ಕಳ್ಳರು ಕೊಂಡೊಯ್ದಿದ್ದಾರೆ.

50 ಸಾವಿರ ರೂ ಮೌಲ್ಯದ ಒಂದೂವರೆ ಕ್ವಿಂಟಾಲ್ ಟೊಮೆಟೊ ಹಾಗೂ ಶುಂಠಿಯನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಜುಲೈ 4 ರಂದು ರಾತ್ರಿ ಕಳ್ಳರು ತಮ್ಮ ಜಮೀನಿನಲ್ಲಿದ್ದ 2.5 ಲಕ್ಷ ರೂ ಮೌಲ್ಯದ ಟೊಮೆಟೊವನ್ನು ಕದ್ದೊಯ್ದಿದ್ದಾರೆ ಎಂದು ರೈತ ಹೇಳಿದ್ದಾರೆ, 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆಯಲಾಗಿತ್ತು. ಟೊಮೆಟೋ ಖರೀದಿಗೂ ಸಾಲ ಮಾಡಿಕೊಂಡಿದ್ದರು.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಿಂದ ಸ್ವಲ್ಪ ಹಣ ಗಳಿಸುವ ನಿರೀಕ್ಷೆ ಹೊಂದಿದ್ದರು, ಮಧ್ಯಪ್ರದೇಶದಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ರೈತರ ಜಮೀನಿನಲ್ಲಿದ್ದ ಟೊಮೆಟೊವನ್ನು ಕದ್ದಿದ್ದರು.

ಟೊಮೆಟೊ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಜಿ 30ರಿಂದ 40ರೂ. ಮಾರಾಟವಾಗುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಯಲ್ಲಿ 150ರಿಂದ 200 ರೂ. ಬೆಲೆ ಏರಿಕೆಯ ನಂತರ ಇದೀಗ ಕಳ್ಳತನವೂ ಶುರುವಾಗಿದೆ.

ಕರ್ನಾಟಕ, ತೆಲಂಗಾಣ ನಂತರ ಇದೀಗ ರಾಜಸ್ಥಾನದಿಂದ ಟೊಮೆಟೊ ಕಳ್ಳತನದ ಘಟನೆ ಮುನ್ನೆಲೆಗೆ ಬಂದಿದೆ. ಸದ್ಯ ರಾಜಸ್ಥಾನದ ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ 100 ರಿಂದ 110 ರೂ.ಗೆ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್