AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ
ಟೊಮೆಟೊ
ನಯನಾ ರಾಜೀವ್
|

Updated on: Jul 12, 2023 | 11:48 AM

Share

ಟೊಮೆಟೊ(Tomato) ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಟೊಮೆಟೊ ಕಳ್ಳತನವಾಗಿದೆ. ಟೊಮೆಟೊ ಮಾತ್ರವಲ್ಲದೆ 350 ಕೆಜಿ ಶುಂಠಿಯನ್ನೂ ಕಳ್ಳರು ಕೊಂಡೊಯ್ದಿದ್ದಾರೆ.

50 ಸಾವಿರ ರೂ ಮೌಲ್ಯದ ಒಂದೂವರೆ ಕ್ವಿಂಟಾಲ್ ಟೊಮೆಟೊ ಹಾಗೂ ಶುಂಠಿಯನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಜುಲೈ 4 ರಂದು ರಾತ್ರಿ ಕಳ್ಳರು ತಮ್ಮ ಜಮೀನಿನಲ್ಲಿದ್ದ 2.5 ಲಕ್ಷ ರೂ ಮೌಲ್ಯದ ಟೊಮೆಟೊವನ್ನು ಕದ್ದೊಯ್ದಿದ್ದಾರೆ ಎಂದು ರೈತ ಹೇಳಿದ್ದಾರೆ, 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆಯಲಾಗಿತ್ತು. ಟೊಮೆಟೋ ಖರೀದಿಗೂ ಸಾಲ ಮಾಡಿಕೊಂಡಿದ್ದರು.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಿಂದ ಸ್ವಲ್ಪ ಹಣ ಗಳಿಸುವ ನಿರೀಕ್ಷೆ ಹೊಂದಿದ್ದರು, ಮಧ್ಯಪ್ರದೇಶದಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ರೈತರ ಜಮೀನಿನಲ್ಲಿದ್ದ ಟೊಮೆಟೊವನ್ನು ಕದ್ದಿದ್ದರು.

ಟೊಮೆಟೊ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಜಿ 30ರಿಂದ 40ರೂ. ಮಾರಾಟವಾಗುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಯಲ್ಲಿ 150ರಿಂದ 200 ರೂ. ಬೆಲೆ ಏರಿಕೆಯ ನಂತರ ಇದೀಗ ಕಳ್ಳತನವೂ ಶುರುವಾಗಿದೆ.

ಕರ್ನಾಟಕ, ತೆಲಂಗಾಣ ನಂತರ ಇದೀಗ ರಾಜಸ್ಥಾನದಿಂದ ಟೊಮೆಟೊ ಕಳ್ಳತನದ ಘಟನೆ ಮುನ್ನೆಲೆಗೆ ಬಂದಿದೆ. ಸದ್ಯ ರಾಜಸ್ಥಾನದ ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ 100 ರಿಂದ 110 ರೂ.ಗೆ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!