AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ
ಟೊಮೆಟೊ
ನಯನಾ ರಾಜೀವ್
|

Updated on: Jul 12, 2023 | 11:48 AM

Share

ಟೊಮೆಟೊ(Tomato) ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಟೊಮೆಟೊ ಕಳ್ಳತನವಾಗಿದೆ. ಟೊಮೆಟೊ ಮಾತ್ರವಲ್ಲದೆ 350 ಕೆಜಿ ಶುಂಠಿಯನ್ನೂ ಕಳ್ಳರು ಕೊಂಡೊಯ್ದಿದ್ದಾರೆ.

50 ಸಾವಿರ ರೂ ಮೌಲ್ಯದ ಒಂದೂವರೆ ಕ್ವಿಂಟಾಲ್ ಟೊಮೆಟೊ ಹಾಗೂ ಶುಂಠಿಯನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಜುಲೈ 4 ರಂದು ರಾತ್ರಿ ಕಳ್ಳರು ತಮ್ಮ ಜಮೀನಿನಲ್ಲಿದ್ದ 2.5 ಲಕ್ಷ ರೂ ಮೌಲ್ಯದ ಟೊಮೆಟೊವನ್ನು ಕದ್ದೊಯ್ದಿದ್ದಾರೆ ಎಂದು ರೈತ ಹೇಳಿದ್ದಾರೆ, 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆಯಲಾಗಿತ್ತು. ಟೊಮೆಟೋ ಖರೀದಿಗೂ ಸಾಲ ಮಾಡಿಕೊಂಡಿದ್ದರು.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಿಂದ ಸ್ವಲ್ಪ ಹಣ ಗಳಿಸುವ ನಿರೀಕ್ಷೆ ಹೊಂದಿದ್ದರು, ಮಧ್ಯಪ್ರದೇಶದಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ರೈತರ ಜಮೀನಿನಲ್ಲಿದ್ದ ಟೊಮೆಟೊವನ್ನು ಕದ್ದಿದ್ದರು.

ಟೊಮೆಟೊ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಜಿ 30ರಿಂದ 40ರೂ. ಮಾರಾಟವಾಗುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಯಲ್ಲಿ 150ರಿಂದ 200 ರೂ. ಬೆಲೆ ಏರಿಕೆಯ ನಂತರ ಇದೀಗ ಕಳ್ಳತನವೂ ಶುರುವಾಗಿದೆ.

ಕರ್ನಾಟಕ, ತೆಲಂಗಾಣ ನಂತರ ಇದೀಗ ರಾಜಸ್ಥಾನದಿಂದ ಟೊಮೆಟೊ ಕಳ್ಳತನದ ಘಟನೆ ಮುನ್ನೆಲೆಗೆ ಬಂದಿದೆ. ಸದ್ಯ ರಾಜಸ್ಥಾನದ ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ 100 ರಿಂದ 110 ರೂ.ಗೆ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ