AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ
ಟೊಮೆಟೊ
ನಯನಾ ರಾಜೀವ್
|

Updated on: Jul 12, 2023 | 11:48 AM

Share

ಟೊಮೆಟೊ(Tomato) ಬೆಲೆ ಏರಿಕೆಯಾದಾಗಿಂದ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಟೊಮೆಟೊ ಕಳ್ಳತನವಾಗಿದೆ. ಟೊಮೆಟೊ ಮಾತ್ರವಲ್ಲದೆ 350 ಕೆಜಿ ಶುಂಠಿಯನ್ನೂ ಕಳ್ಳರು ಕೊಂಡೊಯ್ದಿದ್ದಾರೆ.

50 ಸಾವಿರ ರೂ ಮೌಲ್ಯದ ಒಂದೂವರೆ ಕ್ವಿಂಟಾಲ್ ಟೊಮೆಟೊ ಹಾಗೂ ಶುಂಠಿಯನ್ನು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಜುಲೈ 4 ರಂದು ರಾತ್ರಿ ಕಳ್ಳರು ತಮ್ಮ ಜಮೀನಿನಲ್ಲಿದ್ದ 2.5 ಲಕ್ಷ ರೂ ಮೌಲ್ಯದ ಟೊಮೆಟೊವನ್ನು ಕದ್ದೊಯ್ದಿದ್ದಾರೆ ಎಂದು ರೈತ ಹೇಳಿದ್ದಾರೆ, 2 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆಯಲಾಗಿತ್ತು. ಟೊಮೆಟೋ ಖರೀದಿಗೂ ಸಾಲ ಮಾಡಿಕೊಂಡಿದ್ದರು.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟೊಮೆಟೊ ಬೆಲೆ ಏರಿಕೆಯಿಂದ ಸ್ವಲ್ಪ ಹಣ ಗಳಿಸುವ ನಿರೀಕ್ಷೆ ಹೊಂದಿದ್ದರು, ಮಧ್ಯಪ್ರದೇಶದಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ರೈತರ ಜಮೀನಿನಲ್ಲಿದ್ದ ಟೊಮೆಟೊವನ್ನು ಕದ್ದಿದ್ದರು.

ಟೊಮೆಟೊ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಜಿ 30ರಿಂದ 40ರೂ. ಮಾರಾಟವಾಗುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಯಲ್ಲಿ 150ರಿಂದ 200 ರೂ. ಬೆಲೆ ಏರಿಕೆಯ ನಂತರ ಇದೀಗ ಕಳ್ಳತನವೂ ಶುರುವಾಗಿದೆ.

ಕರ್ನಾಟಕ, ತೆಲಂಗಾಣ ನಂತರ ಇದೀಗ ರಾಜಸ್ಥಾನದಿಂದ ಟೊಮೆಟೊ ಕಳ್ಳತನದ ಘಟನೆ ಮುನ್ನೆಲೆಗೆ ಬಂದಿದೆ. ಸದ್ಯ ರಾಜಸ್ಥಾನದ ಸಗಟು ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ 100 ರಿಂದ 110 ರೂ.ಗೆ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!