Tomato Price Hike: ಟೊಮೆಟೊ ಕೃಷಿಯಿಂದ 1.8 ಕೋಟಿ ರೂ. ಗಳಿಸಿದ ತೆಲಂಗಾಣದ ರೈತ!

ಮಹಿಪಾಲ್ ರೆಡ್ಡಿ ಏಪ್ರಿಲ್ ತಿಂಗಳಲ್ಲಿ ಟೊಮೆಟೊ ಬೀಜಗಳನ್ನು ಬಿತ್ತಿದ್ದರು. ಬೇಸಿಗೆಯ ಕಾರಣ ಫಸಲು ಹಾಳಾಗಬಾರದು ಎಂಬ ಉದ್ದೇಶದಿಂದ ಬಲೆಗಳನ್ನು ಹಾಕಿ ಕೃಷಿ ಮಾಡಿದ್ದರು. ಟೊಮೆಟೊ ಬೆಳೆ ಕಟಾವಿಗೆ ಸಿದ್ಧವಾದಾಗ ಬೆಲೆ ಗರಿಷ್ಠ ಮಟ್ಟದಲ್ಲಿತ್ತು.

Tomato Price Hike: ಟೊಮೆಟೊ ಕೃಷಿಯಿಂದ 1.8 ಕೋಟಿ ರೂ. ಗಳಿಸಿದ ತೆಲಂಗಾಣದ ರೈತ!
ಮಹಿಪಾಲ್ ರೆಡ್ಡಿ, ಟೊಮೆಟೊ ಬೆಳೆದ ರೈತImage Credit source: Tv9 Telugu
Follow us
|

Updated on: Jul 22, 2023 | 3:24 PM

ಮೇದಕ್, ಜುಲೈ 22: ತೆಲಂಗಾಣದ ಮೇದಕ್ (Medak, Telangana) ಜಿಲ್ಲೆಯ ಕೌಡಿಪಲ್ಲಿಯ ರೈತರೊಬ್ಬರು ಟೊಮೆಟೊ (Tomato) ಮಾರಾಟ ಮಾಡಿ 1.8 ಕೋಟಿ ರೂ. ಆದಾಯ ಗಳಿಸಿದ್ದಾರೆ. ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯದ ರೈತರು ಕಂಗಲಾಗಿದ್ದರ ಬಗ್ಗೆ ವರದಿಗಳನ್ನು ನೋಡಿದ್ದೇವೆ. ಬೆಲೆ ಸಿಗದೆ ಟೊಮೆಟೊವನ್ನು ರಸ್ತೆಬದಿಯಲ್ಲಿ ಎಸೆದು ರೈತರು ಪ್ರತಿಭಟನೆ ಮಾಡಿದ್ದನ್ನೂ ನೋಡಿದ್ದೇವೆ. ಆದರೆ ಈಗ ದೃಶ್ಯ ಉಲ್ಟಾಪಲ್ಟಾ ಆಗಿದೆ. ಈಗ ಟೊಮೆಟೊ ಬೆಳೆದವರಿಗೆ ಹಣವೋ ಹಣ. ಮಾರುಕಟ್ಟೆಯಲ್ಲಿ ಟೊಮೆಟೊಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಟೊಮೆಟೊ ಬೆಳೆದವರಿಗೆ ಕೈತುಂಬಾ ಹಣವೂ ಸಿಗುತ್ತಿದೆ. ಬನ್ಸವಾಡ ಮಹಿಪಾಲ್ ರೆಡ್ಡಿ ಎಂಬ 37 ವರ್ಷದ ರೈತ 8 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಇದುವರೆಗೆ 7,000 ಬಾಕ್ಸ್‌ ಟೊಮೆಟೊ ಮಾರಾಟ ಮಾಡಿದ್ದಾರೆ. ಅವರು ಪ್ರತಿ ಬಾಕ್ಸ್​ಗೆ ಸರಾಸರಿ 2,600 ರೂ.ನಂತೆ ಮಾರಾಟ ಮಾಡಿದ್ದಾರೆ. ರೆಡ್ಡಿ ಅವರು ಕಳೆದ 20 ವರ್ಷಗಳಿಂದ 40 ಎಕರೆ ಜಮೀನಿನಲ್ಲಿ ವಿವಿಧ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಅವರು 20 ಎಕರೆ ಜಮೀನನ್ನು ಹೊಂದಿದ್ದಾರೆ ಮತ್ತು ಉಳಿದ ಕೃಷಿ ಭೂಮಿಯನ್ನು ಗುತ್ತಿಗೆ ಪಡೆದಿದ್ದಾರೆ.

ಮಹಿಪಾಲ್ ರೆಡ್ಡಿ 10ನೇ ತರಗತಿಯಲ್ಲಿ ಅನುತ್ತೀರ್ಣರಾದ ನಂತರ ಕೃಷಿ ಆರಂಭಿಸಿದ್ದರು. ಈ ಬಾರಿ ಟೊಮೆಟೊ ಮಾರಾಟ ಮಾಡಿ 1.8 ಕೋಟಿ ರೂ. ಆದಾಯ ಗಳಿಸಿದ್ದು, ಇದರಲ್ಲಿ ಲಾಭವೇ 90 ಲಕ್ಷ ರೂ. ಆಗಿದೆ ಎಂದು ‘ಟಿವಿ 9 ತೆಲುಗು’ ವರದಿ ಮಾಡಿದೆ.

ಮಹಿಪಾಲ್ ರೆಡ್ಡಿ ಏಪ್ರಿಲ್ ತಿಂಗಳಲ್ಲಿ ಟೊಮೆಟೊ ಬೀಜಗಳನ್ನು ಬಿತ್ತಿದ್ದರು. ಬೇಸಿಗೆಯ ಕಾರಣ ಫಸಲು ಹಾಳಾಗಬಾರದು ಎಂಬ ಉದ್ದೇಶದಿಂದ ಬಲೆಗಳನ್ನು ಹಾಕಿ ಕೃಷಿ ಮಾಡಿದ್ದರು. ಟೊಮೆಟೊ ಬೆಳೆ ಕಟಾವಿಗೆ ಸಿದ್ಧವಾದಾಗ ಬೆಲೆ ಗರಿಷ್ಠ ಮಟ್ಟದಲ್ಲಿತ್ತು ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Tomato Price Hike: ಮಗಳಿಗೆ ಟೊಮೆಟೊದಲ್ಲಿ ತುಲಾಭಾರ ಮಾಡಿಸಿದ ದಂಪತಿ, ಕಣ್ತುಂಬಿಕೊಂಡ ಭಕ್ತರು

ಟೊಮೆಟೊ ಬೆಳೆಯಲು ಎಕರೆಗೆ 2 ಲಕ್ಷ ಖರ್ಚಾಗಿದೆ ಎಂದು ಮಹಿಪಾಲ್ ರೆಡ್ಡಿ ತಿಳಿಸಿದ್ದಾರೆ. ಕೃಷಿಯಲ್ಲಿ ಒಳ್ಳೆಯ ಮತ್ತು ಕೆಟ್ಟ ಎರಡೂ ಅನುಭವಗಳಾಗಿವೆ. ಈ ಹಿಂದೆ ಒಂದು ಕೆಜಿ ಟೊಮೆಟೊ ಬೆಲೆ 1 ರೂ.ಗಿಂತ ಕಡಿಮೆ ಇದ್ದ ಕಾರಣ ಟೊಮೆಟೊವನ್ನು ರಸ್ತೆಗೆ ಬಿಸಾಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!