Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price : ಈ ರಾಜ್ಯದಲ್ಲಿ 250ರೂ.ಗೆ ತಲುಪಿದ ಒಂದು ಕೆಜಿ ಟೊಮೆಟೊ ಬೆಲೆ

ಟೊಮೆಟೊ(Tomato) ಎಂದಾಕ್ಷಣ ಹಣ್ಣಿನಷ್ಟೇ ಎಲ್ಲರ ಮುಖವೂ ಕೆಂಪಾಗುತ್ತಿದೆ ಏಕೆಂದರೆ ಅದರ ಬೆಲೆ ಅಷ್ಟಿದೆ. ಸಾಕಷ್ಟು ಬಾರಿ ಈರುಳ್ಳಿ ಸೇರಿದಂತೆ ಸಾಕಷ್ಟು ತರಕಾರಿಗಳ ಬೆಲೆ ಏರಿಕೆಯಾದಾಗಲೂ ಟೊಮೆಟೊ ಒಂದೇ ಕಡಿಮೆ ಬೆಲೆ ಇದ್ದುಕೊಂಡು ಹಸಿದವರ ಹೊಟ್ಟೆಯನ್ನು ತುಂಬಿಸಿತ್ತು.

Tomato Price : ಈ ರಾಜ್ಯದಲ್ಲಿ 250ರೂ.ಗೆ ತಲುಪಿದ ಒಂದು ಕೆಜಿ ಟೊಮೆಟೊ ಬೆಲೆ
ಟೊಮೆಟೊImage Credit source: India Posts English
Follow us
ನಯನಾ ರಾಜೀವ್
|

Updated on:Jul 07, 2023 | 10:22 AM

ಟೊಮೆಟೊ(Tomato) ಎಂದಾಕ್ಷಣ ಹಣ್ಣಿನಷ್ಟೇ ಎಲ್ಲರ ಮುಖವೂ ಕೆಂಪಾಗುತ್ತಿದೆ ಏಕೆಂದರೆ ಅದರ ಬೆಲೆ ಅಷ್ಟಿದೆ. ಸಾಕಷ್ಟು ಬಾರಿ ಈರುಳ್ಳಿ ಸೇರಿದಂತೆ ಸಾಕಷ್ಟು ತರಕಾರಿಗಳ ಬೆಲೆ ಏರಿಕೆಯಾದಾಗಲೂ ಟೊಮೆಟೊ ಒಂದೇ ಕಡಿಮೆ ಬೆಲೆ ಇದ್ದುಕೊಂಡು ಹಸಿದವರ ಹೊಟ್ಟೆಯನ್ನು ತುಂಬಿಸಿತ್ತು. ಆದರೆ ಕೇವಲ ಕರ್ನಾಟಕ ಮಾತ್ರವಲ್ಲ ವಿವಿಧ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕರ್ನಾಟಕದಲ್ಲಿ ಒಂದು ಕೆಜಿ ಟೊಮೆಟೊ 120-150 ರೂ.ವರೆಗೆ ಮಾರಾಟವಾಗುತ್ತಿದ್ದರೆ ಬೇರೆ ರಾಜ್ಯಗಳಲ್ಲಿ 250 ರೂ.ವರೆಗೂ ಮಾರಾಟ ಮಾಡಲಾಗುತ್ತಿದೆ.

ಗಂಗೋತ್ರಿಯಲ್ಲಿ ಪ್ರತಿ ಕೆಜಿಗೆ 250 ರೂ. ಮತ್ತು ಉತ್ತರಕಾಶಿ ಜಿಲ್ಲೆಯಲ್ಲಿ ಪ್ರತಿ ಕೆಜಿಗೆ 180ರೂ.ನಿಂದ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಉತ್ತರಕಾಶಿಯಲ್ಲಿ ಹೆಚ್ಚುತ್ತಿರುವ ಟೊಮೆಟೊ ಬೆಲೆಯಿಂದ ಗ್ರಾಹಕರು ಹೆಚ್ಚು ಹೊರೆಯನ್ನು ಎದುರಿಸುತ್ತಿದ್ದಾರೆ. ಜನರು ಈಗ ಹಣ್ಣನ್ನು ಖರೀದಿಸಲು ಸಹ ಸಿದ್ಧರಿಲ್ಲ.

ಮತ್ತಷ್ಟು ಓದಿ: ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು; ಹಾಸನದಲ್ಲಿ ಲಕ್ಷಾಂತರ ರೂ. ಮೌಲ್ಯದ ಟೊಮೇಟೊ ಕಳ್ಳತನ

ಗಂಗೋತ್ರಿ, ಯಮುನೋತ್ರಿಯಲ್ಲಿ, ಟೊಮೆಟೊ ಕೆಜಿಗೆ 200 ರೂ.ನಿಂದ 250 ರೂ.ಗೆ ಮಾರಾಟವಾಗುತ್ತಿದೆ ಎಂದು ತರಕಾರಿ ಮಾರಾಟಗಾರ ರಾಕೇಶ್ ಎಎನ್‌ಐಗೆ ತಿಳಿಸಿದ್ದಾರೆ.

ಪ್ರಮುಖ ಟೊಮೆಟೊ ಬೆಳೆಯುವ ಪ್ರದೇಶಗಳಲ್ಲಿ ಹೆಚ್ಚಾದ ತಾಪಮಾನ ಹಾಗೂ ಅಕಾಲಿಕ ಮಳೆಯಿಂದಾಗಿ ತರಕಾರಿ ಬೆಲೆಗಳು ಹೆಚ್ಚಾಗಿವೆ. ಚೆನ್ನೈನಲ್ಲಿ ಸದ್ಯ ಟೊಮೆಟೊ ಕೆಜಿಗೆ 100-130 ರೂ.ಗೆ ಮಾರಾಟವಾಗುತ್ತಿದೆ.

ಬೆಲೆ ಏರಿಕೆಯ ನಡುವೆಯೂ ಗ್ರಾಹಕರಿಗೆ ಕೊಂಚ ಬಿಡುವು ನೀಡುವ ಉದ್ದೇಶದಿಂದ ತಮಿಳುನಾಡು ಸರ್ಕಾರವು ರಾಜ್ಯ ರಾಜಧಾನಿ ಚೆನ್ನೈನ ಪಡಿತರ ಅಂಗಡಿಗಳಲ್ಲಿ ಪ್ರತಿ ಕೆಜಿಗೆ 60 ರೂ. ಸಬ್ಸಿಡಿ ದರದಲ್ಲಿ ಟೊಮೆಟೊವನ್ನು ಮಾರಾಟ ಮಾಡಲು ಪ್ರಾರಂಭಿಸಿದೆ.

ಹಲವು ರಾಜ್ಯಗಳಂತೆ ಕರ್ನಾಟಕದಲ್ಲೂ ಇತ್ತೀಚಿನ ದಿನಗಳಲ್ಲಿ ಟೊಮೆಟೊ ಬೆಲೆ ಏರಿಕೆಯಾಗಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಹಠಾತ್ ತಾಪಮಾನ ಏರಿಕೆಯಿಂದಾಗಿ ಬೆಲೆಗಳು ಹೆಚ್ಚಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 am, Fri, 7 July 23

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್