AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಟೊಮೆಟೋ ಕಾಯಲೆಂದೇ ಬೌನ್ಸರ್​​​ ನೇಮಿಸಿದ ತರಕಾರಿ ವ್ಯಾಪಾರಿ!

ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಗ್ರಾಹಕರ ನಿದ್ದೆಗೆಡಿಸಿದೆ. ಜನರು ಟೊಮೆಟೋ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಟೊಮೆಟೋ ಬೆಳೆದ ರೈತನಿಗೆ ಮಾತ್ರ ಜ್ಯಾಕ್ ಪಾಟ್ ಹೊಡೆದಿದೆ. ಇದರ ಮಧ್ಯೆ ಟೊಮೆಟೋವನ್ನು ಕಾಯಲೆಂದೇ ಉತ್ತರ ಪ್ರದೇಶದ ವಾರಣಾಸಿಯ ತರಕಾರಿ ಮಾರಾಟಗಾರರೊಬ್ಬರು ಬೌನ್ಸರ್ಸ್​​​ಗಳನ್ನು ನೇಮಿಸಿಕೊಂಡಿದ್ದಾರೆ. 

Tomato: ಟೊಮೆಟೋ ಕಾಯಲೆಂದೇ ಬೌನ್ಸರ್​​​ ನೇಮಿಸಿದ ತರಕಾರಿ ವ್ಯಾಪಾರಿ!
ಟೊಮೆಟೋ ಕಾಯುತ್ತಿರುವ ಬೌನ್ಸರ್ಸ್​​
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 5:29 PM

Share

ಉತ್ತರ ಪ್ರದೇಶ: ಮಾರುಕಟ್ಟೆಯಲ್ಲಿ ಟೊಮೆಟೋ (Tomato) ಬೆಲೆ ಗ್ರಾಹಕರ ನಿದ್ದೆಗೆಡಿಸಿದೆ. ಜನರು ಟೊಮೆಟೋ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಟೊಮೆಟೋ ಬೆಳೆದ ರೈತನಿಗೆ ಮಾತ್ರ ಜ್ಯಾಕ್ ಪಾಟ್ ಹೊಡೆದಿದೆ. ವೆಜ್ ಆಗಿರಲಿ, ನಾನ್ ವೆಜ್ ಆಗಿರಲಿ ಬಹುತೇಕ ಎಲ್ಲಾ ಅಡುಗೆಗೆ ಟೊಮೆಟೋ ಬೇಕೇ ಬೇಕೆ. ಆದರೆ ಈಗ ಟೊಮೆಟೋ ಬೆಲೆ ಗಗನಕ್ಕೇರಿದ್ದು, ಮತ್ತಷ್ಟು ಹುಳಿ ಹುಳಿಯಾಗಿದೆ. ಸದ್ಯ ಟೊಮೆಟೋಗೆ ಮಾರುಕಟ್ಟೆಯಲ್ಲಿ ಬಂಗಾರ ಬಲೆ ಬಂದಿದ್ದು, ಇದನ್ನು ಕಾಯಲೆಂದೇ ಉತ್ತರ ಪ್ರದೇಶದ ವಾರಣಾಸಿಯ ತರಕಾರಿ ಮಾರಾಟಗಾರರೊಬ್ಬರು ಬೌನ್ಸರ್ಸ್ (bouncer) ​​​ಗಳನ್ನು ನೇಮಿಸಿಕೊಂಡಿದ್ದಾರೆ.

ಹೌದು ಪಿಟಿಐ ಈ ಕುರಿತಾಗಿ ವರದಿ ಮಾಡಿದೆ. ದೇಶದಾದ್ಯಂತ ಟೊಮೆಟೋ ಬೆಲೆ ಹೆಚ್ಚಾಗಿದೆ. ಹಾಗಾಗಿ ಖರೀದಿಸುವ ಬದಲು ಜನರು ಕಳ್ಳತನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ತೊಂದರೆ ನೀಡುತ್ತಿದ್ದಾರೆ. ಹಾಗಾಗಿ ನಾನು ಬೌನ್ಸರ್ಸ್​​​ಗಳನ್ನು ನೇಮಿಸಿಕೊಂಡಿದ್ದೇನೆ.

ಇದನ್ನೂ ಓದಿ: Tomato: ಪೆಟ್ರೋಲ್​ಗಿಂತ ದುಬಾರಿಯಾದ ಟೊಮೆಟೋ ಬೆಲೆ ಯಾವಾಗ ಇಳಿಯುತ್ತೆ? ತಜ್ಞರು ಹೇಳೋದೇನು? ಇಲ್ಲಿದೆ ಡೀಟೇಲ್ಸ್

ನನ್ನ ಅಂಗಡಿಯಲ್ಲಿ ಟೊಮೆಟೋಗಳಿವೆ. ನಾನು ಗ್ರಾಹಕರೊಂದಿಗೆ ಯಾವುದೇ ವಾದ ಅಥವಾ ಜಗಳ ಮಾಡಲು ಬಯಸುವುದಿಲ್ಲ. ಟೊಮೆಟೋ 160 ರೂ. ಕೆಜಿ ಗೆ ಮಾರಾಟವಾಗುತ್ತಿದೆ. ಜನರು 50 ಅಥವಾ 100 ಗ್ರಾಂ ಖರೀದಿಸುತ್ತಿದ್ದಾರೆ ಎಂದು ತರಕಾರಿ ಮಾರಾಟಗಾರ ಅಜಯ್ ಫೌಜಿ ಪಿಟಿಐಗೆ ತಿಳಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕದ ಕೋಲಾರ, ಹಾಸನ ಜಿಲ್ಲೆಗಳಲ್ಲಿ ಕೂಡ ರೈತರು ಕಷ್ಟಪಟ್ಟು ಬೆಳೆದ ಟೊಮೆಟೋ ಗಳನ್ನು ಕಳ್ಳತನ ಮಾಡಿದ್ದರು. ಇದನ್ನು ತಡೆಗಟ್ಟಲು ರೈತರು ಗಂಭೀರ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ವರದಿಯಾಗಿತ್ತು.

ರಾತ್ರೋರಾತ್ರಿ 3 ಲಕ್ಷ ರೂಪಾಯಿ ಮೌಲ್ಯದ ಟೊಮೆಟೋ ಕಳ್ಳತನ

ಹಾಸನ: ರೈತರೊಬ್ಬರು ತಮ್ಮ ಜಮೀನಿನಲ್ಲಿ ರಾತ್ರೋರಾತ್ರಿ 3 ಲಕ್ಷ ರೂಪಾಯಿ ಮೌಲ್ಯದ ಟೊಮೆಟೋ ಕಳ್ಳತನವಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಜಿಲ್ಲೆಯ ಹಳೇಬೀಡು ಸಮೀಪದ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ: Viral Video: ತಮಿಳಿನ ‘ಟಮ್ ಟಮ್’​ ಧಾಟಿಯಲ್ಲಿ ಟೊಮ್ಯಾಟೋ ಗೀತೆ

ಯಾವಾಗ ಟೊಮೆಟೋ ಬೆಲೆ ಕೆ.ಜಿ.ಗೆ 150 ರೂ. ದಾಟಿತೋ ಕಳ್ಳರು 3 ಲಕ್ಷ ಮೌಲ್ಯದ 90 ಟೊಮೆಟೋ ಬಾಕ್ಸ್​ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಎರಡು ಎಕರೆ ಭೂಮಿಯಲ್ಲಿ ಬೆಳೆಯಲಾಗಿದ್ದು ಟೊಮೆಟೋವನ್ನು ಚಿಕ್ಕಮಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲು ನಿರ್ಧರಿಸಲಾಗಿತ್ತು. ಆದರೆ ಅಷ್ಟರಲ್ಲಿಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!