AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg Toolkit Case: ವಕೀಲೆ ನಿಕಿತಾ ಜೇಕಬ್​ಗೆ ಬಾಂಬೆ ಹೈಕೋರ್ಟ್ ಜಾಮೀನು

Greta Thunberg Toolkit Case: ಮುಂಬೈ ಮೂಲದ ವಕೀಲೆ,  ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ.

Greta Thunberg Toolkit Case: ವಕೀಲೆ ನಿಕಿತಾ ಜೇಕಬ್​ಗೆ ಬಾಂಬೆ ಹೈಕೋರ್ಟ್ ಜಾಮೀನು
ನಿಕಿತಾ ಜೇಕಬ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 17, 2021 | 2:09 PM

Share

ಮುಂಬೈ: ಗ್ರೇಟಾ ಥನ್​ಬರ್ಗ್​ ಟ್ವೀಟ್ ಮಾಡಿದ್ದ ಟೂಲ್​ಕಿಟ್ ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ವಕೀಲೆ,  ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು (Transit Anticipatory Bail) ನೀಡಿದೆ. ಟೂಲ್​ಕಿಟ್ ಪ್ರಕರಣದಲ್ಲಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ನಿಕಿತಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು .

ಜಾಮೀನು ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನಾಯಕ್ ಅವರ ಏಕಸದಸ್ಯ ಪೀಠವು ಪೊಲೀಸ್ ಅಧಿಕಾರಿಗಳು ಆಕೆಯ ಮನೆಯಿಂದ ಲ್ಯಾಪ್​ಟಾಪ್, ಫೋನ್ ವಶಪಡಿಸಿಕೊಂಡು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹಾಗಾಗಿ ನಿಕಿತಾ ತನಿಖೆಗೆ ಲಭ್ಯವಿದ್ದಾರೆ ಎಂಬುದನ್ನು ಪರಿಗಣಿಸಿ ಜಾಮೀನು ನೀಡಲಾಗಿದೆ ಎಂದಿದೆ.  ಒಂದು ವೇಳೆ ನಿಕಿತಾ ಅವರು ಬಂಧನಕ್ಕೊಳಗಾದರೆ ₹25,000 ವೈಯಕ್ತಿಕ ಮುಚ್ಚಳಿಕೆ ಮತ್ತು ಅದೇ ಮೊತ್ತದ ಜಾಮೀನು ನೀಡಿದರೆ ಆಕೆಯನ್ನು ಬಿಡುಗಡೆ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ರೈತರ ಹೋರಾಟದ ಬಗ್ಗೆ ಗ್ರೇಟಾ ಥನ್ ಬರ್ಗ್ ಹಂಚಿಕೊಂಡ ಟೂಲ್ ಕಿಟ್ ಸಿದ್ಧಪಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪರಿಸರವಾದಿ ದಿಶಾ ರವಿ, ನಿಕಿತಾ ಜೇಕಬ್, ಶಂತನು ಮುಲಕ್ ಅವರನ್ನು ಬಂಧಿಸಲಾಗಿತ್ತು. ರವಿ ಈಗಲೂ ಬಂಧನದಲ್ಲಿದ್ದು, ಮುಲಕ್ ಅವರಿಗ ಬಾಂಬೆ ಹೈಕೋರ್ಟ್​ನ ಔರಂಗಾಬಾದ್ ಪೀಠವು ಸೋಮವಾರ 10 ದಿನಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿತ್ತು.

ಇದನ್ನೂ ಓದಿ: Greta Thunberg Toolkit case: ಟೂಲ್​ಕಿಟ್ ತಯಾರಿಸಿದ ಆರೋಪ; ಶಂತನು ಮುಲುಕ್​ಗೆ 10 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು

ನಿಕಿತಾ ಜೇಕಬ್ ತಲೆಮರೆಸಿಕೊಂಡಿದ್ದಾರೆ ಎಂದು ತಪ್ಪಾದ ನೆಪ ಹೇಳಿ ದೆಹಲಿ ಪೊಲೀಸರು ಜಾಮೀನು ರಹಿತ ವಾರೆಂಟ್ ಕಳಿಸಿದ್ದಾರೆ ಎಂದು ಆಕೆಯ ಪರ ವಾದಿಸುತ್ತಿರುವ ನ್ಯಾಯವಾದಿ ಮಿಹಿರ್ ದೇಸಾಯಿ, ಅಭಿಷೇಕ್ ಯೆಂಡೆ ಮತ್ತು ಸಂಜುಕ್ತಾ ಡೇ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಸೈಬರ್ ಪೊಲೀಸರ ಪರ ವಾದಿಸುತ್ತಿರುವ ವಕೀಲ ಹಿತೇನ್ ವೆನೆಗಾಂವ್ಕರ್ , ಇಡೀ ದಿನ ಆಕೆಗಾಗಿ ಕಾದು ಆಕೆ ಸಿಗದೇ ಇದ್ದಾಗ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು ಎಂದಿದ್ದಾರೆ.

Published On - 1:55 pm, Wed, 17 February 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ