AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg Toolkit Case: ವಕೀಲೆ ನಿಕಿತಾ ಜೇಕಬ್​ಗೆ ಬಾಂಬೆ ಹೈಕೋರ್ಟ್ ಜಾಮೀನು

Greta Thunberg Toolkit Case: ಮುಂಬೈ ಮೂಲದ ವಕೀಲೆ,  ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ.

Greta Thunberg Toolkit Case: ವಕೀಲೆ ನಿಕಿತಾ ಜೇಕಬ್​ಗೆ ಬಾಂಬೆ ಹೈಕೋರ್ಟ್ ಜಾಮೀನು
ನಿಕಿತಾ ಜೇಕಬ್
ರಶ್ಮಿ ಕಲ್ಲಕಟ್ಟ
|

Updated on:Feb 17, 2021 | 2:09 PM

Share

ಮುಂಬೈ: ಗ್ರೇಟಾ ಥನ್​ಬರ್ಗ್​ ಟ್ವೀಟ್ ಮಾಡಿದ್ದ ಟೂಲ್​ಕಿಟ್ ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ವಕೀಲೆ,  ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು (Transit Anticipatory Bail) ನೀಡಿದೆ. ಟೂಲ್​ಕಿಟ್ ಪ್ರಕರಣದಲ್ಲಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ನಿಕಿತಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು .

ಜಾಮೀನು ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನಾಯಕ್ ಅವರ ಏಕಸದಸ್ಯ ಪೀಠವು ಪೊಲೀಸ್ ಅಧಿಕಾರಿಗಳು ಆಕೆಯ ಮನೆಯಿಂದ ಲ್ಯಾಪ್​ಟಾಪ್, ಫೋನ್ ವಶಪಡಿಸಿಕೊಂಡು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹಾಗಾಗಿ ನಿಕಿತಾ ತನಿಖೆಗೆ ಲಭ್ಯವಿದ್ದಾರೆ ಎಂಬುದನ್ನು ಪರಿಗಣಿಸಿ ಜಾಮೀನು ನೀಡಲಾಗಿದೆ ಎಂದಿದೆ.  ಒಂದು ವೇಳೆ ನಿಕಿತಾ ಅವರು ಬಂಧನಕ್ಕೊಳಗಾದರೆ ₹25,000 ವೈಯಕ್ತಿಕ ಮುಚ್ಚಳಿಕೆ ಮತ್ತು ಅದೇ ಮೊತ್ತದ ಜಾಮೀನು ನೀಡಿದರೆ ಆಕೆಯನ್ನು ಬಿಡುಗಡೆ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ರೈತರ ಹೋರಾಟದ ಬಗ್ಗೆ ಗ್ರೇಟಾ ಥನ್ ಬರ್ಗ್ ಹಂಚಿಕೊಂಡ ಟೂಲ್ ಕಿಟ್ ಸಿದ್ಧಪಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪರಿಸರವಾದಿ ದಿಶಾ ರವಿ, ನಿಕಿತಾ ಜೇಕಬ್, ಶಂತನು ಮುಲಕ್ ಅವರನ್ನು ಬಂಧಿಸಲಾಗಿತ್ತು. ರವಿ ಈಗಲೂ ಬಂಧನದಲ್ಲಿದ್ದು, ಮುಲಕ್ ಅವರಿಗ ಬಾಂಬೆ ಹೈಕೋರ್ಟ್​ನ ಔರಂಗಾಬಾದ್ ಪೀಠವು ಸೋಮವಾರ 10 ದಿನಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿತ್ತು.

ಇದನ್ನೂ ಓದಿ: Greta Thunberg Toolkit case: ಟೂಲ್​ಕಿಟ್ ತಯಾರಿಸಿದ ಆರೋಪ; ಶಂತನು ಮುಲುಕ್​ಗೆ 10 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು

ನಿಕಿತಾ ಜೇಕಬ್ ತಲೆಮರೆಸಿಕೊಂಡಿದ್ದಾರೆ ಎಂದು ತಪ್ಪಾದ ನೆಪ ಹೇಳಿ ದೆಹಲಿ ಪೊಲೀಸರು ಜಾಮೀನು ರಹಿತ ವಾರೆಂಟ್ ಕಳಿಸಿದ್ದಾರೆ ಎಂದು ಆಕೆಯ ಪರ ವಾದಿಸುತ್ತಿರುವ ನ್ಯಾಯವಾದಿ ಮಿಹಿರ್ ದೇಸಾಯಿ, ಅಭಿಷೇಕ್ ಯೆಂಡೆ ಮತ್ತು ಸಂಜುಕ್ತಾ ಡೇ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಸೈಬರ್ ಪೊಲೀಸರ ಪರ ವಾದಿಸುತ್ತಿರುವ ವಕೀಲ ಹಿತೇನ್ ವೆನೆಗಾಂವ್ಕರ್ , ಇಡೀ ದಿನ ಆಕೆಗಾಗಿ ಕಾದು ಆಕೆ ಸಿಗದೇ ಇದ್ದಾಗ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು ಎಂದಿದ್ದಾರೆ.

Published On - 1:55 pm, Wed, 17 February 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?