AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toolkit case: ಮಾಧ್ಯಮಗಳಿಗೆ ತನಿಖಾ ವರದಿ ಸೋರಿಕೆ ನಿರ್ಬಂಧಕ್ಕೆ ದೆಹಲಿ ಹೈಕೋರ್ಟ್​ಗೆ ದಿಶಾ ರವಿ ಮನವಿ

Greta Thunberg Toolkit case: ತನ್ನ ಖಾಸಗಿ ಚಾಟ್​ಗಳನ್ನು ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ತಡೆಯೊಡ್ಡಬೇಕು ಎಂದು ಬೆಂಗಳೂರು ಮೂಲದ 22ರ ಹರೆಯದ ದಿಶಾ ರವಿ ಒತ್ತಾಯಿಸಿದ್ದಾರೆ.

Toolkit case: ಮಾಧ್ಯಮಗಳಿಗೆ ತನಿಖಾ ವರದಿ ಸೋರಿಕೆ ನಿರ್ಬಂಧಕ್ಕೆ ದೆಹಲಿ ಹೈಕೋರ್ಟ್​ಗೆ ದಿಶಾ ರವಿ ಮನವಿ
ದಿಶಾ ರವಿ
Follow us
ರಶ್ಮಿ ಕಲ್ಲಕಟ್ಟ
|

Updated on:Feb 18, 2021 | 1:31 PM

ದೆಹಲಿ: ರೈತರ ಹೋರಾಟಕ್ಕೆ ಸಂಬಂಧಿಸಿದ ಟೂಲ್​ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪರಿಸರವಾದಿ ದಿಶಾ ರವಿ, ಈ ಪ್ರಕರಣದ ತನಿಖೆಯ ದಾಖಲೆಗಳನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆಯಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿದಾರರ ಖಾಸಗಿ ಚಾಟ್ ಅಥವಾ ಸಂಭಾಷಣೆಗಳನ್ನು ಮೂರನೇ ವ್ಯಕ್ತಿಗೆ (ಮಾಧ್ಯಮದವರಿಗೆ) ಸೋರಿಕೆ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ದಿಶಾ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ .

ಅದೇ  ವೇಳೆ ತನ್ನ ಖಾಸಗಿ ಚಾಟ್​ಗಳನ್ನು ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಬೆಂಗಳೂರು ಮೂಲದ 22ರ ಹರೆಯದ ದಿಶಾ ರವಿ ಒತ್ತಾಯಿಸಿದ್ದಾರೆ. ಫೆಬ್ರವರಿ 3ರಂದು ಸ್ವೀಡನ್ ನ ಪರಿಸರವಾಗಿ ಗ್ರೇಟಾ ಥನ್​ಬರ್ಗ್ ರೈತರ ಹೋರಾಟಕ್ಕೆ ಸಂಬಂಧಿಸಿದ ಟೂಲ್​ಕಿಟ್​ನ್ನು ಟ್ವೀಟ್ ಮಾಡಿದ್ದರು. ರೈತರ ಪ್ರತಿಭಟನೆ, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಅಹಿತಕರ ಘಟನೆಗಳು ಪೂರ್ವ ಯೋಜಿತವಾಗಿದ್ದು, ಅದಕ್ಕಾಗಿ ಟೂಲ್​ಕಿಟ್​ನಲ್ಲಿ ಯೋಜನೆ ರೂಪುಗೊಂಡಿತ್ತು ಎಂಬುದು ಪೊಲೀಸರ ವಾದವಾಗಿದೆ.

ಮಂಗಳವಾರ ದೆಹಲಿ ನ್ಯಾಯಾಲಯವು ದಿಶಾ ರವಿ ಅವರ ಎಫ್ಐಆರ್ ಮತ್ತು ಇತರ ದಾಖಲೆಗಳನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶಿಸಿತ್ತು. ಅಷ್ಟೇ ಅಲ್ಲದೆ ಅರೆಸ್ಟ್ ಮೆಮೊ ಮತ್ತು ಆಕೆಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಅನುಮತಿ ನೀಡುವ ರಿಮಾಂಡ್ ಪೇಪರ್​ನ ಪ್ರತಿಯನ್ನು ನೀಡುವಂತೆ ಸೂಚಿಸಿದೆ.

ಬೆಚ್ಚಗಿನ ಬಟ್ಟೆ, ಮಾಸ್ಕ್ ಮತ್ತು ಪುಸ್ತಕಗಳನ್ನು ಆಕೆಗೆ ಪೂರೈಸಲು ನ್ಯಾಯಾಲಯ ಅನುಮತಿ ನೀಡಿದೆ. ದಿಶಾ ರವಿ ಅವರು ಪೊಲೀಸ್ ವಶದಲ್ಲಿದ್ದುಕೊಂಡೇ ಪ್ರತಿದಿನ ಕುಟುಂಬದೊಂದಿಗೆ 15 ನಿಮಿಷ ಫೋನ್ ಕರೆ ಮಾಡಿ ಮಾತನಾಡಲು ಮತ್ತು ವಕೀಲರ ಜತೆ 30 ನಿಮಿಷ ಮಾತನಾಡಲು ಚೀಫ್ ಮೆಟ್ರೊಪಾಲಿಟನ್ ಮೆಜಿಸ್ಟ್ರೇಟ್ ಪಂಕಜ್ ಶರ್ಮಾ ಅವರು ಅವಕಾಶ ಕಲ್ಪಿಸಿದ್ದಾರೆ.

ನಿಕಿತಾ ಜೇಕಬ್ ಮತ್ತು ಮುುಲುಕ್​ಗೆ ಜಾಮೀನು ಟೂಲ್​ಕಿಟ್ ಸಿದ್ಧಪಡಿಸಿದ್ದಾರೆ ಎಂಬ ಆರೋಪದಲ್ಲಿ ಪೊಲೀಸರು ದಿಶಾ ರವಿ, ವಕೀಲೆ ಹಾಗೂ ಪರಿಸರವಾದಿ ನಿಕಿತಾ ಜೇಕಬ್ ಮತ್ತು ಶಾಂತನು ಮುಲಕ್ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ನಿಕಿತಾ ಮತ್ತು ಶಂತನು ಅವರಿಗೆ ಜಾಮೀನು ಸಿಕ್ಕಿದೆ.

ಗ್ರೇಟಾ ಥನ್​ಬರ್ಗ್​ ಟ್ವೀಟ್ ಮಾಡಿದ್ದ ಟೂಲ್​ಕಿಟ್ ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ವಕೀಲೆ,  ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು (Transit Anticipatory Bail) ನೀಡಿದೆ. ಜಾಮೀನು ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನಾಯಕ್ ಅವರ ಏಕಸದಸ್ಯ ಪೀಠವು ಪೊಲೀಸ್ ಅಧಿಕಾರಿಗಳು ಆಕೆಯ ಮನೆಯಿಂದ ಲ್ಯಾಪ್​ಟಾಪ್, ಫೋನ್ ವಶಪಡಿಸಿಕೊಂಡು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹಾಗಾಗಿ ನಿಕಿತಾ ತನಿಖೆಗೆ ಲಭ್ಯವಿದ್ದಾರೆ ಎಂಬುದನ್ನು ಪರಿಗಣಿಸಿ ಜಾಮೀನು ನೀಡಲಾಗಿದೆ ಎಂದಿದೆ.  ಒಂದು ವೇಳೆ ನಿಕಿತಾ ಅವರು ಬಂಧನಕ್ಕೊಳಗಾದರೆ ₹25,000 ವೈಯಕ್ತಿಕ ಮುಚ್ಚಳಿಕೆ ಮತ್ತು ಅದೇ ಮೊತ್ತದ ಜಾಮೀನು ನೀಡಿದರೆ ಆಕೆಯನ್ನು ಬಿಡುಗಡೆ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ಶಾಂತನು ಮುಲುಕ್​ಗೆ ಬಾಂಬೆ ಹೈಕೋರ್ಟ್​ನ ಔರಂಗಾಬಾದ್​ ಪೀಠವು ಫೆಬ್ರವರಿ 16ರಂದು ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು (Transit Anticipatory Bail) ನೀಡಿತ್ತು.

ಏನಿದು ಟೂಲ್​ ಕಿಟ್​? ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಟೂಲ್​ಕಿಟ್​ ಒಂದನ್ನು ಗ್ರೇಟಾ ಟ್ವಿಟ್​ರ್​ನಲ್ಲಿ ಹಂಚಿಕೊಂಡಿದ್ದರು. ಟೂಲ್​​ಕಿಟ್​ ಎಂದರೆ, ಒಂದು ಪ್ರತಿಭಟನೆ ಅಥವಾ ಒಂದು ಕಾರ್ಯಕ್ರಮದ ಸಂಪೂರ್ಣ ರೂಪುರೇಷೆ. ಪ್ರತಿಭಟನೆ/ಕಾರ್ಯಕ್ರಮ ಹೇಗೆ ನಡೆಯಬೇಕು ಎನ್ನುವ ಮಾಹಿತಿ ಇದರಲ್ಲಿ ಇರುತ್ತದೆ. ಗ್ರೇಟಾ ಹಂಚಿಕೊಂಡಿದ್ದ ಟೂಲ್​ಕಿಟ್​ನಲ್ಲಿ, ಪ್ರತಿಭಟನೆಯಲ್ಲಿ ರೈತರು ಭಾಗವಹಿಸಬೇಕು, ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಅದಾನಿ-ಅಂಬಾನಿಯಂಥ ದೊಡ್ಡ ದೊಡ್ಡ ಉದ್ಯಮಿಗಳ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್​ ಜಾಥಾದಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎನ್ನುವುದಕ್ಕೆ ಸ್ಫೂರ್ತಿದಾಯಕವಾಗಿತ್ತು ಈ ಟೂಲ್​ಕಿಟ್​. ಆದರೆ, ಈ ಪ್ರತಿಭಟನೆ ಹಿಂಸಾಚಾರದೊಂದಿಗೆ ಅಂತ್ಯವಾಗಿತ್ತು. ಗ್ರೇಟಾ ಹಂಚಿಕೊಂಡ ಟೂಲ್​ಕಿಟ್​ ಹಿಂದೆ ದಿಶಾ ರವಿ, ಶಂತನು ಮುಲಕ್ ಕೈವಾಡವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ:  Toolkit | ಲೇಖಕಿ ಗೆಯ್ಲ್ ಕಿಂಬಾಲ್ ನಡೆಸಿದ್ದ ದಿಶಾ ರವಿ ಸಂದರ್ಶನ YouTube ​ನಿಂದ ಮಾಯ! ಅಷ್ಟಕ್ಕೂ ದಿಶಾ ಏನು ಹೇಳಿದ್ದರು?

Published On - 1:27 pm, Thu, 18 February 21

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ