AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂಲ್​ಕಿಟ್ ತನಿಖೆ: ಕಾಂಗ್ರೆಸ್​ನ ಇಬ್ಬರು ನಾಯಕರಿಗೆ ನೋಟೀಸನ್ನು ಜಾರಿಮಾಡಿದ ದೆಹಲಿ ಪೊಲೀಸ್

ನವದೆಹಲಿ: ಕೊವಿಡ್ ಟೂಲ್​ಕಿಟ್​ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್ ವಿಷಯಕ್ಕೆ ಸಂಬಂಧಿಸಿದಂತೆ ದೂರೊಂದು ದಾಖಲಾದ ನಂತರ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು-ರೋಹನ್ ಗುಪ್ತಾ ಮತ್ತು ಎಮ್​ ವಿ ರಾಜೀವ್​ ಗೌಡ ಅವರಿಗೆ ನೋಟೀಸನ್ನು ಜಾರಿ ಮಾಡಿ ತನಿಖೆಯಲ್ಲಿ ಪಾಲ್ಗೊಳ್ಳುವಂತೆ ಹೇಳಿದೆಯೆಂದು ಸದರಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಅಧಿಕಾರಿಯೊಬ್ಬರು ಹೇಳಿರಉವ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ನೋಟೀಸುಗಳನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿರುವ ರೋಹನ್ ಗುಪ್ತಾ ಮತ್ತು ಪಕ್ಷದ ಬಾತ್ಮೀದಾರ ರಾಜೀವ್ ಗೌಡ […]

ಟೂಲ್​ಕಿಟ್ ತನಿಖೆ: ಕಾಂಗ್ರೆಸ್​ನ ಇಬ್ಬರು ನಾಯಕರಿಗೆ ನೋಟೀಸನ್ನು ಜಾರಿಮಾಡಿದ ದೆಹಲಿ ಪೊಲೀಸ್
ಪ್ರೊಫೆಸರ್ ಎಮ್​ ವಿ ರಾಜೀವ್ ಗೌಡ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 25, 2021 | 11:00 PM

Share

ನವದೆಹಲಿ: ಕೊವಿಡ್ ಟೂಲ್​ಕಿಟ್​ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್ ವಿಷಯಕ್ಕೆ ಸಂಬಂಧಿಸಿದಂತೆ ದೂರೊಂದು ದಾಖಲಾದ ನಂತರ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು-ರೋಹನ್ ಗುಪ್ತಾ ಮತ್ತು ಎಮ್​ ವಿ ರಾಜೀವ್​ ಗೌಡ ಅವರಿಗೆ ನೋಟೀಸನ್ನು ಜಾರಿ ಮಾಡಿ ತನಿಖೆಯಲ್ಲಿ ಪಾಲ್ಗೊಳ್ಳುವಂತೆ ಹೇಳಿದೆಯೆಂದು ಸದರಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಅಧಿಕಾರಿಯೊಬ್ಬರು ಹೇಳಿರಉವ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ನೋಟೀಸುಗಳನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿರುವ ರೋಹನ್ ಗುಪ್ತಾ ಮತ್ತು ಪಕ್ಷದ ಬಾತ್ಮೀದಾರ ರಾಜೀವ್ ಗೌಡ ಅವರಿಗೆ ಜಾರಿ ಮಾಡಿರುವುದನ್ನು ಅಧಿಕಾರಿಯು ಧೃಡೀಕರಿಸಿದ್ದಾರೆ. ದೂರಿಗೆ ಸಂಬಂಧಿಸಿದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಇದುವರಗೆ ಎಫ್ಐಆರ್ ದಾಖಲಿಸಿಲ್ಲ. ಈಗ ಜಾರಿಗೊಳಿಸಿರುವ ನೊಟೀಸ್​ಗಳು ಹೊಸವೇನೂ ಅಲ್ಲವೆಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

‘ಕಾಂಗ್ರೆಸ್ ಪಕ್ಷದಿಂದ ದಾಖಲಾದ ದೂರಿನ ಆಧಾರದ ಮೇಲೆ ಈ ನೋಟೀಸುಗಳನ್ನು 8-9 ದಿನಗಳ ಹಿಂದೆಯೇ ಕಾಂಗ್ರೆಸ್ ಪಕ್ಷಕ್ಕೆ ಜಾರಿ ಮಾಡಲಾಗಿತ್ತು. ತನಿಖೆಯನ್ನು ಮುಂದಿವರೆಸಿಕೊಂಡು ಹೋಗಲು ಸಹಾಯವಾಗುವ ಹಾಗೆ ಅವರನ್ನು ಇದರಲ್ಲಿ ಭಾಗಿಯಾಗುವಂತೆ ಹೇಳಲಾಗಿದೆ,’ ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ಮೊದಲು, ಸೋಮವಾರದಂದು ದೆಹಲಿ ಪೊಲೀಸ್ ಅಧಿಕಾರಿಗಳು, ನವದೆಹಲಿ ಮತ್ತು ಗೊರೆಗಾಂವ್​ನಲ್ಲಿರುವ ಟ್ವಿಟ್ಟರ್​ ಇಂಡಿಯಾದ ಕಚೇರಿಗಳಲ್ಲಿ ಶೋಧ ನಡೆಸಿದರಲ್ಲದೆ, ಟ್ವಿಟ್ಟರ್ ಇಂಡಿಯಾಗೆ ನೋಟೀಸೊಂದನ್ನು ಜಾರಿ ಮಾಡಿ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಮಸಿ ಬಳಿಯಲು ಕಾಂಗ್ರೆಸ್ ಪಕ್ಷ ಮಾಡಿದೆ ಆರೋಪಿಸಲಾಗಿರುವ ಟೂಲ್​ಕಿಟ್ ಮೇಲೆ ಬಿಜೆಪಿ ಪಕ್ಷದ ವಕ್ತಾರ ಸಂಬಿತ್ ಪಾತ್ರ ಅವರು ಮಾಡಿರುವ ಟ್ವಿಟ್​ಅನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂದು ಆರೋಪಿಸಲಾಗಿರುವ ‘ಮ್ಯಾನಿಪುಲೇಟೆಟ್ ಮಿಡಿಯಾ’ ಎಂದು ಯಾಕೆ ಟ್ಚಿಟ್ಟರ್ ಸಂಸ್ಥೆಯು ಟ್ಯಾಗ್ ಮಾಡಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ನೋಟೀಸೊಂದನ್ನು ಜಾರಿ ಮಾಡಿತು.

ದೆಹಲಿ ಪೊಲೀಸ್ ತಂಡ, ನಿಯಮದ ಪ್ರಕಾರ ನೋಟೀಸನ್ನು ಜಾರಿ ಮಾಡಲು ಟ್ವಿಟ್ಟರ್ ಇಂಡಿಯಾ ಕಚೇರಿಗೆ ಹೋಗಿತ್ತು. ‘ನೋಟೀಸನ್ನು ಯಾರಿಗೆ ಜಾರಿ ಮಾಡಬೇಕೆನ್ನುವ ಬಗ್ಗೆ ನಮಗೆ ಗೊಂದಲವಿದ್ದುದ್ದರಿಂದ ಅಲ್ಲಿಗೆ ಹೋಗುವುದು ಅತ್ಯವಶ್ಯಕವಾಗಿತ್ತು. ಟ್ವಿಟ್ಟರ್ ಇಂಡಿಯಾದ ಎಮ್​ಡಿ ಕಳಿಸಿರುವ ಉತ್ತರಗಳು ಸಂದೇಹಾಸ್ಪದವಾಗಿವೆ,’ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಚಿನ್ಮಯ್ ಬಿಸ್ವಾಲ್ ಹೇಳಿರುವರೆಂದು ಪಿಟಿಐ ವರದಿ ಮಾಡಿದೆ.

ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ಟೂಲ್​ಕಿಟ್​ಗೆ ಸಂಬಂಧಿಸಿದಂತೆ ಕಳೆದೊಂದು ವಾರದಿಂದ ಕಾಲು ಕೆರೆದು ಜಗಳಕ್ಕಿಳಿದಿವೆ. ಕೊವಿಡ್​ ಪಿಡುಗಿನ ನಿರ್ವಹಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಕ್ರಮಗಳನ್ನು ಖಂಡಿಸಿ, ಸರ್ಕಾರ ಮತ್ತು ಪ್ರಧಾನಿಗಳ ಹೆಸರಿಗೆ ಕಳಂಕ ತರುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಟೂಲ್​​ಕಿಟ್​ ಮೂಲಕ ಮಾಡುತ್ತಿದೆ ಎಂದು ಬಿಜೆಪಿ ಅರೋಪಿಸುತ್ತಿದೆ. ಇದಕ್ಕೆ ಉತ್ತರವಾಗಿ ಕಾಂಗ್ರೆಸ್ ಪಕ್ಷವು ಬಿಜೆಪಿ ಟ್ವೀಟ್​ ಮಾಡಿರುವ ಟೂಲ್​​ಕಿಟ್​ ಕೃತ್ರಿಮ ಎಂದು ಆಪಾದಿಸುತ್ತಿದೆ.

ಇದನ್ನೂ ಓದಿ: ಟೂಲ್​ಕಿಟ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ನೊಟೀಸ್ ಜಾರಿ, ಬಿಜೆಪಿಯ ಸಂಬಿತ್​ ಪಾತ್ರಾ ವಿಚಾರಣೆ ಸಾಧ್ಯತೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!