AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್​ಇಟಿ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ್ಯೆ

ಶ್ರೀನಗರದ ಶಾಲಿಮಾರ್‌ನಲ್ಲಿ ಎಲ್‌ಇಟಿಯ ಉನ್ನತ ಕಮಾಂಡರ್ ಸಲೀಂ ಪರ್ರೆ ಮತ್ತು ಪಾಕಿಸ್ತಾನಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಎನ್‌ಕೌಂಟರ್‌ನಲ್ಲಿ ಆ ಉಗ್ರರನ್ನು ತಟಸ್ಥಗೊಳಿಸಲಾಯಿತು

ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್​ಇಟಿ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ್ಯೆ
ಸೇನಾ ಕಾರ್ಯಾಚರಣೆ
TV9 Web
| Edited By: |

Updated on: Jan 03, 2022 | 9:28 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶಾಲಿಮಾರ್‌ನಲ್ಲಿ ಭದ್ರತಾ ಪಡೆಗಳು ಇಂದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಉಗ್ರರಲ್ಲಿ ಒಬ್ಬನಾದ ಸಲೀಂ ಪರ್ರೆ ಲಷ್ಕರ್ ಇ ತೈಬಾ (ಎಲ್‌ಇಟಿ) ಕಮಾಂಡರ್ ಆಗಿದ್ದ. ಇನ್ನೊಬ್ಬ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದ್ದು, ಆತ ಬಂಡಿಪೋರಾದಲ್ಲಿ ಇಬ್ಬರು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ.

ಇಂದು ಮಧ್ಯಾಹ್ನ ನಮಗೆ ಶ್ರೀನಗರದ ಶಾಲಿಮಾರ್‌ನಲ್ಲಿ ಎಲ್‌ಇಟಿಯ ಉನ್ನತ ಕಮಾಂಡರ್ ಸಲೀಂ ಪರ್ರೆ ಮತ್ತು ಪಾಕಿಸ್ತಾನಿ ಭಯೋತ್ಪಾದಕರು ಇರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಎನ್‌ಕೌಂಟರ್‌ನಲ್ಲಿ ಆ ಉಗ್ರರನ್ನು ತಟಸ್ಥಗೊಳಿಸಲಾಯಿತು ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಶ್ರೀನಗರ ಎನ್‌ಕೌಂಟರ್‌ನಲ್ಲಿ ತಟಸ್ಥಗೊಂಡ ಎರಡನೇ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದೆ. ಬಂಡಿಪೋರಾದಲ್ಲಿ 2 ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಈತ ಭಯೋತ್ಪಾದನಾ ಘಟನೆಯ ನಂತರ ಶ್ರೀನಗರದ ಹರ್ವಾನ್ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದ.

ಕಳೆದ ವಾರ ಸೇನಾ ಪಡೆ ಸಿಬ್ಬಂದಿ ಕೇವಲ 36 ಗಂಟೆಗಳಲ್ಲಿ 9 ಭಯೋತ್ಪಾದಕರನ್ನು ಎನ್​ಕೌಂಟರ್ ಮಾಡಿದ್ದರು. ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯು ಉಗ್ರರಿರುವ ಪ್ರದೇಶವನ್ನು ಸುತ್ತುವರೆದ ನಂತರ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು.

ಗುರುವಾರ ರಾತ್ರಿ ಶ್ರೀನಗರದಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈದ ಕೇವಲ ಮೂರು ದಿನಗಳ ನಂತರ ಕಾರ್ಯಾಚರಣೆ ನಡೆದಿದೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು 36 ಗಂಟೆಗಳ ಅವಧಿಯಲ್ಲಿ 9 ಭಯೋತ್ಪಾದಕರನ್ನು ಹತ್ಯೆ ಮಾಡಿತ್ತು. ಶ್ರೀನಗರದ ಪಂಥಾ ಚೌಕ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಇದನ್ನೂ ಓದಿ: 2019ರ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್​ಕೌಂಟರ್

ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ