AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ದಿಟ್ಟ ಹೆಜ್ಜೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 35ರಷ್ಟು ಕಡಿಮೆಯಾದ ಉಗ್ರರ ಸಂಖ್ಯೆ

2019ಕ್ಕೆ ಹೋಲಿಸಿದರೆ 2020ರಲ್ಲಿ ಪಾಕಿಸ್ತಾನದಿಂದಾದ ಕದನ ವಿರಾಮ ಉಲ್ಲಂಘನೆ ಪ್ರಮಾಣ ಶೇ.27ರಷ್ಟು ಹೆಚ್ಚಾಗಿದೆ. ಪಾಕಿಸ್ತಾನ ಉಗ್ರರಿಗೆ ಸಹಾಯ ಮಾಡುವ ಸಲುವಾಗಿಯೇ ಕದನ ವಿರಾಮ ಉಲ್ಲಂಘಿಸುತ್ತಿದೆ ಎನ್ನುವುದೂ ಸ್ಪಷ್ಟ. ಆದರೆ, ಇಲ್ಲಿ ಪಾಕಿಸ್ತಾನ ಎಷ್ಟೇ ಹರಸಾಹಸಪಟ್ಟರೂ ಉಗ್ರರನ್ನು ಭಾರತಕ್ಕೆ ಕಳುಹಿಸಲು ನಮ್ಮ ಯೋಧರು ಅವಕಾಶ ನೀಡುತ್ತಿಲ್ಲ.

ಭಾರತೀಯ ಸೇನೆಯ ದಿಟ್ಟ ಹೆಜ್ಜೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 35ರಷ್ಟು ಕಡಿಮೆಯಾದ ಉಗ್ರರ ಸಂಖ್ಯೆ
ಭಾರತೀಯ ಸೇನೆ
Skanda
| Updated By: ಸಾಧು ಶ್ರೀನಾಥ್​|

Updated on: Jan 15, 2021 | 6:06 PM

Share

ದೆಹಲಿ: ಕಳೆದ ವರ್ಷ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯ ಪ್ರಮಾಣ ಹೆಚ್ಚಿದೆಯಾದರೂ ಅದಕ್ಕೆ ವ್ಯತಿರಿಕ್ತವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ 2019ರಲ್ಲಿ ಇರುವುದಕ್ಕಿಂತಲೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ಸೇನೆ ಬಿಡುಗಡೆ ಮಾಡಿದ ವರದಿ ತಿಳಿಸಿದೆ.

2019ಕ್ಕೆ ಹೋಲಿಸಿದರೆ 2020ರಲ್ಲಿ ಪಾಕಿಸ್ತಾನದಿಂದಾದ ಕದನ ವಿರಾಮ ಉಲ್ಲಂಘನೆ ಪ್ರಮಾಣ ಶೇ. 27ರಷ್ಟು ಹೆಚ್ಚಾಗಿದೆ. ಪಾಕಿಸ್ತಾನ ಉಗ್ರರಿಗೆ ಸಹಾಯ ಮಾಡುವ ಸಲುವಾಗಿಯೇ ಕದನ ವಿರಾಮ ಉಲ್ಲಂಘಿಸುತ್ತಿದೆ ಎನ್ನುವುದೂ ಸ್ಪಷ್ಟ. ಆದರೆ, ಇಲ್ಲಿ ಪಾಕಿಸ್ತಾನ ಎಷ್ಟೇ ಹರಸಾಹಸಪಟ್ಟರೂ ಉಗ್ರರನ್ನು ಭಾರತಕ್ಕೆ ಕಳುಹಿಸಲು ನಮ್ಮ ಯೋಧರು ಅವಕಾಶ ನೀಡುತ್ತಿಲ್ಲ. ಈ ಕಾರಣದಿಂದಾಗಿಯೇ ಭಾರತದ ನೂತನ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದಲ್ಲಿ 2019ಕ್ಕಿಂತ 2020ರಲ್ಲಿ ಉಗ್ರರ ಪ್ರಮಾಣ ಶೇ. 35ರಷ್ಟು ಕಡಿಮೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಸೇನೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 421 ಉಗ್ರರು ಇದ್ದರು. 2020ರಲ್ಲಿ ಉಗ್ರರ ಸಂಖ್ಯೆ 274ಕ್ಕೆ ಇಳಿದಿದೆ. 2019ರಲ್ಲಿ 3,824ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನ 2020ರಲ್ಲಿ 5,246ಬಾರಿ ಈ ದುಸ್ಸಾಹಸಕ್ಕೆ ಕೈಹಾಕಿದೆ ಎಂಬುದನ್ನೂ ಹೇಳಿದೆ.

ಭಾರತೀಯ ಸೇನೆ 2020ರಲ್ಲಿ 221ಜನ ಉಗ್ರರನ್ನು ಸದೆಬಡಿದಿದ್ದು, 47 ಜನರನ್ನು ಸೆರೆಹಿಡಿದಿದೆ. 2019ರಲ್ಲಿ ಹತರಾದ ಉಗ್ರರ ಸಂಖ್ಯೆ152 ಮತ್ತು ಸೆರೆ ಸಿಕ್ಕವರ ಸಂಖ್ಯೆ 43ರಷ್ಟಿತ್ತು. ಅಂತೆಯೇ, ಕಳೆದ ಬಾರಿ 11 ಜನ ಉಗ್ರರು ಸೇನೆಗೆ ಶರಣಾಗಿದ್ದು, 2019ರಲ್ಲಿ ಕೇವಲ ಮೂವರು ಶರಣಾಗಿದ್ದರು ಎನ್ನುವುದೂ ತಿಳಿದುಬಂದಿದೆ.

ತಾಳ್ಮೆ ಪರಿಶೀಲಿಸುವವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು: ಸೇನಾ ಮುಖ್ಯಸ್ಥ ಜ. ಮನೋಜ್​ ಮುಕುಂದ್​ ನರವಾಣೆ ಎಚ್ಚರಿಕೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!