ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 2.55 ಕೋಟಿ ರೂ. ಸಂಗ್ರಹ

ನಿನ್ನೆ (ಆಗಸ್ಟ್, 12) 2.55 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 21446 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ.

ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 2.55 ಕೋಟಿ ರೂ. ಸಂಗ್ರಹ
ತಿರುಪತಿ ದೇವಾಲಯ
Follow us
| Updated By: preethi shettigar

Updated on:Aug 13, 2021 | 10:58 AM

ತಿರುಪತಿ: ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24 ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ನಿನ್ನೆ (ಆಗಸ್ಟ್, 12) 2.55 ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 21446 ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 10348 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಕೊವಿಡ್​ಗೂ ಮುನ್ನ60,000ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಮತ್ತು ಸರಾಸರಿ ಹುಂಡಿ ಸಂಗ್ರಹವು ಪ್ರತಿದಿನ ಸುಮಾರು 3.5 ರಿಂದ 5 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತಿತ್ತು. ಮೊದಲನೇ ಅಲೆಯ ಲಾಕ್​ಡೌನ್​ ಮುಗಿದ ನಂತರ ಹಂತ ಹಂತವಾಗಿ ಹುಂಡಿ ಆದಾಯ ಹೆಚ್ಚಾಗಿದ್ದು, ಜೂನ್‌ನಲ್ಲಿ ದೇವಾಲಯಕ್ಕೆ 1.1 ಕೋಟಿ ರೂಪಾಯಿ, ಜುಲೈ 16.69 ಕೋಟಿ ರೂಪಾಯಿ, ಆಗಸ್ಟ್ 18.43 ಕೋಟಿ ರೂಪಾಯಿ, ಸೆಪ್ಟೆಂಬರ್ 32.04 ಕೋಟಿ ರೂಪಾಯಿ, ಅಕ್ಟೋಬರ್ 47.52 ಕೋಟಿ ರೂಪಾಯಿ, ನವೆಂಬರ್ 61.29 ಕೋಟಿ ರೂಪಾಯಿ, ಡಿಸೆಂಬರ್ 79.64 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಕ್ರೀಡಾಪಟು ಪಿ.ವಿ ಸಿಂಧು ತಿರುಪತಿಗೆ ಭೇಟಿ ಈ ಬಾರಿಯ ಟೊಕಿಯೋ ಒಲಂಪಿಕ್ಸ್​ನ್ಲಲಿ ಕಂಚಿನ ಪದಕ ಗೆದ್ದ ಕ್ರೀಡಾಪಟು ಪಿ.ವಿ ಸಿಂಧು,  ಆಂಧ್ರದ ತಿರುಮಲದಲ್ಲಿ‌ ಬಾಲಾಜಿಯ ದರ್ಶನ‌ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಿ.ವಿ ಸಿಂಧುಗೆ ದೇವಾಲಯದ ಅಧಿಕಾರಿಗಳು ಸ್ವಾಗತ ಕೋರಿದ್ದಾರೆ. ಈ ವೇಳೆ ಬಾಲಾಜಿಯ ದರ್ಶನ, ತೀರ್ಥ‌ ಪ್ರಸಾದಕ್ಕೆ ದೇವಾಲಯದ ಅರ್ಚಕರು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ತಿರುಪತಿ ಟಿಟಿಡಿ‌ ಬೋರ್ಡ್ ಅಧ್ಯಕ್ಷರಾಗಿ ಸಿಎಂ ಜಗನ್ ಸಂಬಂಧಿ​ ಸುಬ್ಬಾರೆಡ್ಡಿ ಮರು ನೇಮಕ

ತಿರುಪತಿಯಲ್ಲಿ ಮದುವೆ ಆಗಲಿದ್ದಾರೆ ಶ್ರೀದೇವಿ ಪುತ್ರಿ; ಮನದಾಳದ ಮಾತು ಹಂಚಿಕೊಂಡ ಜಾನ್ವಿ ಕಪೂರ್

Published On - 10:54 am, Fri, 13 August 21

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ