AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Temple : ಲಾಕ್​ಡೌನ್​ ಬಳಿಕ ತಿಮ್ಮಪ್ಪನ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

ಕೇವಲ 24 ಗಂಟೆಗಳಲ್ಲಿ 1.89ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 17,310ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 7037 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

Tirupati Temple : ಲಾಕ್​ಡೌನ್​ ಬಳಿಕ ತಿಮ್ಮಪ್ಪನ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?
ತಿರುಪತಿ ದೇವಾಲಯ
TV9 Web
| Edited By: |

Updated on:Jul 21, 2021 | 3:57 PM

Share

ತಿರುಪತಿ​: ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಭಕ್ತರು ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಆಂಧ್ರಪ್ರದೇಶದಲ್ಲಿನ ತಿರುಮಲದ‌ ಬಾಲಾಜಿ ದೇವಾಲಯವೂ ಕೂಡ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಆ ಪ್ರಕಾರ ಕಳೆದ‌ 24ಗಂಟೆಗಳಲ್ಲಿ ತಿರುಮಲದ‌ ಬಾಲಾಜಿ ದೇವಾಲಯದ ಹುಂಡಿಯಲ್ಲಿ(Temple Hundi) ಅಧಿಕ ಪ್ರಮಾಣದ ಆದಾಯ‌ ಸಂಗ್ರಹವಾಗಿದೆ. ಕೇವಲ 24 ಗಂಟೆಗಳಲ್ಲಿ 1.89ಕೋಟಿ ರೂಪಾಯಿ ಹುಂಡಿಗೆ‌ ಆದಾಯ ಸಂಗ್ರಹವಾಗಿದ್ದು, 17,310ಭಕ್ತರು ಬಾಲಾಜಿಯ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ 7037 ಭಕ್ತರು ತಿರುಮಲದ‌ ಬಾಲಾಜಿ ದೇವಾಲಯದಲ್ಲಿ ತಲೆಕೂದಲು ಸಮರ್ಪಣೆ ಮಾಡಿದ್ದಾರೆ.

ಕಳೆದ ಬಾರಿ ಅಂದರೆ ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿನ ಲಾಕ್​ಡೌನ್​ಗೂ ಮುನ್ನ ತಿರುಮಲದ ಬಾಲಾಜಿ ದೇವಸ್ಥಾನದಲ್ಲಿ 800 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುತ್ತಿತ್ತು. ನಂತರ ಅಂದರೆ ಮೊದಲ ಕೊರೊನಾ ಅಲೆಯ ಅನ್​ಲಾಕ್​ ಬಳಿಕ (ಜೂನ್ 2020 ರಲ್ಲಿ )ಕೊವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹಲವಾರು ನಿರ್ಬಂಧಗಳೊಂದಿಗೆ ಈ ದೇವಾಲಯವನ್ನು ತೆರೆಯಲಾಯಿತು. ಅದರಂತೆ ಟಿಕೆಟ್ ಸಂಗ್ರಹಣೆ, ಪ್ರಸಾದಗಳ ಮಾರಾಟ, ವಸತಿ ಸೌಕರ್ಯಗಳು ಮತ್ತು ಹುಂಡಿ ಸಂಗ್ರಹಗಳು ಸೇರಿದಂತೆ ಒಟ್ಟಾರೆ ಆದಾಯದ ಮೇಲೆ ಪರಿಣಾಮ ಬೀರಿತು. ಆ ಪ್ರಕಾರ 100-150 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

ಕೊವಿಡ್​ಗೂ ಮುನ್ನ60,000ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು ಮತ್ತು ಸರಾಸರಿ ಹುಂಡಿ ಸಂಗ್ರಹವು ಪ್ರತಿದಿನ ಸುಮಾರು 3.5 ರಿಂದ 5 ಕೋಟಿ ರೂಪಾಯಿವರೆಗೆ ಸಂಗ್ರಹವಾಗುತ್ತಿತ್ತು. ಮೊದಲನೇ ಅಲೆಯ ಲಾಕ್​ಡೌನ್​ ಮುಗಿದ ನಂತರ ಹಂತ ಹಂತವಾಗಿ ಹುಂಡಿ ಆದಾಯ ಹೆಚ್ಚಾಗಿದ್ದು, ಜೂನ್‌ನಲ್ಲಿ ದೇವಾಲಯಕ್ಕೆ 1.1 ಕೋಟಿ ರೂಪಾಯಿ, ಜುಲೈ 16.69 ಕೋಟಿ ರೂಪಾಯಿ, ಆಗಸ್ಟ್ 18.43 ಕೋಟಿ ರೂಪಾಯಿ, ಸೆಪ್ಟೆಂಬರ್ 32.04 ಕೋಟಿ ರೂಪಾಯಿ, ಅಕ್ಟೋಬರ್ 47.52 ಕೋಟಿ ರೂಪಾಯಿ, ನವೆಂಬರ್ 61.29 ಕೋಟಿ ರೂಪಾಯಿ, ಡಿಸೆಂಬರ್ 79.64 ಕೋಟಿ ರೂಪಾಯಿ ಸಂಗ್ರಹವಾಗಿದೆ.

ದೇಶಾದ್ಯಂತ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ, ತಿರುಮಲದ ಬಾಲಾಜಿ ದೇವಸ್ಥಾನದ ಹುಂಡಿ ಹಣದ ಸಂಗ್ರಹವು 2021ರ ಜನವರಿಯಲ್ಲಿ 83.92 ಕೋಟಿ ರೂಪಾಯಿ ಮತ್ತು ಫೆಬ್ರವರಿಯಲ್ಲಿ 90.45 ಕೋಟಿ ರೂಪಾಯಿ, ಮಾರ್ಚ್ ಹುಂಡಿ ಸಂಗ್ರಹವು 12 ತಿಂಗಳಲ್ಲಿ ಮೊದಲ ಬಾರಿಗೆ 100 ಕೋಟಿ ಗಡಿ ದಾಟಿತು ಮತ್ತು ಆ ಮೂಲಕ 104.42 ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗಿತ್ತು. ಆದರೆ ಮತ್ತೆ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದ್ದು, ಪುನಃ ಈಗ ಅನ್​ಲಾಕ್​ ಆಗಿ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಇದನ್ನೂ ಓದಿ: Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ

Tonsure| ದೇವಸ್ಥಾನಗಳಲ್ಲಿ ಮುಡಿ ನೀಡೋದೇಕೆ? ಇದರ ಹಿಂದೆ ಅಡಗಿರೋ ಅರ್ಥವೇನು?

Published On - 11:54 am, Wed, 21 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ