AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೈ-ಡೈನಿಂಗ್ ರೆಸ್ಟೋರೆಂಟ್‌ನಲ್ಲಿ ಊಟ ಮಾಡಲು ಹೋಗಿ 120 ಅಡಿ ಎತ್ತರದಲ್ಲಿ ಸಿಲುಕಿದ ಮಂಗಳೂರಿನ ಪ್ರವಾಸಿಗರು

ಕೇರಳದ ಇಡುಕ್ಕಿಯ ಅಣಚಲ್‌ನಲ್ಲಿರುವ ಖಾಸಗಿ ಸ್ಕೈ ಡೈನಿಂಗ್ ಸೌಲಭ್ಯದಲ್ಲಿ ಇಂದು ಮಧ್ಯಾಹ್ನ ಕ್ರೇನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ನಂತರ ಪ್ರವಾಸಿಗರ ಗುಂಪೊಂದು ನೆಲದಿಂದ 120 ಅಡಿ ಎತ್ತರದಲ್ಲಿ ಸಿಲುಕಿಕೊಂಡಿತ್ತು. ಇದರಲ್ಲಿ ಮಂಗಳೂರು ಮೂಲದ ಮಲಯಾಳಿಗಳು ಕೂಡ ಸೇರಿದ್ದರು. ಅವರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಒಂದೂವರೆ ಗಂಟೆಗೂ ಹೆಚ್ಚು ಕಾಲ ಅಲ್ಲಿಯೇ ಕಳೆದರು. ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಸ್ಕೈ-ಡೈನಿಂಗ್ ರೆಸ್ಟೋರೆಂಟ್‌ನಲ್ಲಿ ಊಟ ಮಾಡಲು ಹೋಗಿ 120 ಅಡಿ ಎತ್ತರದಲ್ಲಿ ಸಿಲುಕಿದ ಮಂಗಳೂರಿನ ಪ್ರವಾಸಿಗರು
Idukki Sky Dining Restaurant
ಸುಷ್ಮಾ ಚಕ್ರೆ
|

Updated on: Nov 28, 2025 | 9:50 PM

Share

ಇಡುಕ್ಕಿ, ನವೆಂಬರ್ 28: ಕೇರಳದ (Kerala) ಇಡುಕ್ಕಿ ಬಳಿ ಸ್ಕೈ-ಡೈನಿಂಗ್​ ರೆಸ್ಟೋರೆಂಟ್​​​ನಲ್ಲಿ ಊಟ ಮಾಡಲು ಹೋಗಿದ್ದ ಐವರು ಪ್ರವಾಸಿಗರು 120 ಅಡಿ ಎತ್ತರದಲ್ಲಿ ಸಿಲುಕಿದ್ದರು. ಕ್ರೇನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ನಂತರ ಮಂಗಳೂರು ಮೂಲದ ಪ್ರವಾಸಿಗರು ಸೇರಿದಂತೆ ಅದರಲ್ಲಿದ್ದ ಎಲ್ಲ ಪ್ರವಾಸಿಗರು 2 ಗಂಟೆಗಳ ಕಾಲ ಮೇಲೆ ಸಿಲುಕಿಕೊಂಡರು. ಇಬ್ಬರು ಮಕ್ಕಳು ಸೇರಿದಂತೆ ಆ ಪ್ರವಾಸಿಗರನ್ನು 120 ಅಡಿ ಎತ್ತರದಿಂದ ಕೆಳಗೆ ಇಳಿಸುತ್ತಿರುವ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ವೈರಲ್ ಆಗಿದೆ.

ಕೇರಳದ ಇಡುಕ್ಕಿಯ ಅಣಚಲ್ ಬಳಿ ಸ್ಕೈ-ಡೈನಿಂಗ್ ಕ್ರೇನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 5 ಜನರು ನೆಲದಿಂದ 120 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಆ ಸ್ಥಳಕ್ಕೆ ತಲುಪುವ ಮೊದಲು ಆ ಪ್ರವಾಸಿಗರು 2 ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿತ್ತು.

ಇದನ್ನೂ ಓದಿ: ಕಿಡ್ನಾಪ್ ಆಗಿದ್ದ ಮಗುವಿಗೆ ಚಾಕೋಲೇಟ್ ಬಾಕ್ಸ್ ನೀಡಿ ಸಂತೈಸಿದ ಪೊಲೀಸರು!

ಈ ವೇಳೆ ರಕ್ಷಣಾ ಕಾರ್ಯಕರ್ತರು ಮೊದಲು ಮಕ್ಕಳು ಮತ್ತು ಅವರ ತಾಯಿಯನ್ನು ಕೆಳಗಿಳಿಸಲಾಯಿತು. ನಂತರ ತಂದೆ ಮತ್ತು ರೆಸ್ಟೋರೆಂಟ್ ಸಿಬ್ಬಂದಿಯೊಬ್ಬರು ಕೆಳಗೆ ಬಂದರು. ಮಧ್ಯಾಹ್ನ 1.30 ರ ಸುಮಾರಿಗೆ ಪ್ರವಾಸಿಗರು ಮೇಲೆ ಸಿಲುಕಿಕೊಂಡಿದ್ದರು. ರೆಸ್ಟೋರೆಂಟ್ ಆಡಳಿತಾಧಿಕಾರಿಗಳು ರಕ್ಷಣಾ ಸೇವೆಗಳಿಂದ ಸಹಾಯವನ್ನು ಪಡೆಯಲಿಲ್ಲ. ಅಲ್ಲಿಗೆ ಮುನ್ನಾರ್ ಮತ್ತು ಅಡಿಮಾಲಿಯ ಘಟಕಗಳನ್ನು ಕಳುಹಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಸ್ಕೈ-ಡೈನಿಂಗ್’ ಅನುಭವವು ಹಿಲ್ ಸ್ಟೇಷನ್ ಆಗಿರುವ ಇಡುಕ್ಕಿ ಜಿಲ್ಲೆಯಲ್ಲಿ ಸಾಹಸ ಪ್ರವಾಸೋದ್ಯಮ ಒಂದು ಭಾಗವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ