Toy Train Derails: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಟಾಯ್ ಟ್ರೈನ್, ಎಲ್ಲಾ ಪ್ರಯಾಣಿಕರು ಸುರಕ್ಷಿತ

ಮಹಾರಾಷ್ಟ್ರದ ಜನಪ್ರಿಯ ಮಾಥೆರಾನ್ ಗಿರಿಧಾಮದಿಂದ ನೆರಲ್‌ಗೆ ತೆರಳುತ್ತಿದ್ದ ಆಟಿಕೆ ರೈಲು ಹಳಿತಪ್ಪಿದೆ, ಆದರೆ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

Toy Train Derails: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಟಾಯ್ ಟ್ರೈನ್, ಎಲ್ಲಾ ಪ್ರಯಾಣಿಕರು ಸುರಕ್ಷಿತ
ಸಾಂದರ್ಭಿಕ ಚಿತ್ರ
Follow us
|

Updated on: Jun 06, 2023 | 1:35 PM

ಮುಂಬೈ: ಮಹಾರಾಷ್ಟ್ರದ ಜನಪ್ರಿಯ ಮಾಥೆರಾನ್ ಗಿರಿಧಾಮದಿಂದ ನೆರಲ್‌ಗೆ ತೆರಳುತ್ತಿದ್ದ ಆಟಿಕೆ ರೈಲು ಹಳಿತಪ್ಪಿದೆ, (Toy Train Derails) ಆದರೆ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 95 ಕಿಮೀ ದೂರದಲ್ಲಿರುವ ಜುಮ್ಮಾ ಪಟ್ಟಿ ನಿಲ್ದಾಣದ ಬಳಿ ರೈಲಿನ ಇಂಜಿನ್‌ನ ಒಂದು ಚಕ್ರ ಹಳಿತಪ್ಪಿದೆ, ಶನಿವಾರ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಒಡಿಶಾದಲ್ಲಿ ನಡೆದ ಭೀಕರ ಟ್ರಿಪಲ್ ರೈಲು ಅಪಘಾತದಲ್ಲಿ 278 ಜನರು ಸಾವನ್ನಪ್ಪಿದರು ಮತ್ತು 1,100 ಜನರು ಗಾಯಗೊಂಡ ನಂತರ ಈ ಘಟನೆ ನಡೆದಿದೆ. ಶನಿವಾರ ಸಂಜೆ 4 ಗಂಟೆಗೆ ಮಾಥೆರಾನ್‌ನಿಂದ ಹೊರಟ ಟಾಯ್ ಟ್ರೈನ್​​ನಲ್ಲಿ 90 ರಿಂದ 95 ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಪ್ರಯಾಣಿಕರು ತಕ್ಷಣವೇ ರೈಲಿನಿಂದ ಇಳಿದು ಕ್ಯಾಬ್‌ಗಳ ಮೂಲಕ ತಮ್ಮ ಗಮ್ಯಸ್ಥಾನಕ್ಕೆ ತೆರಳಿದರು ಎಂದು ಅವರು ಹೇಳಿದರು. ರೈಲನ್ನು ರಾತ್ರಿ 9 ಗಂಟೆ ಸುಮಾರಿಗೆ ಮರುಜೋಡನೆ ಮಾಡಲಾಗಿದೆ, ರೈಲ್ವೇ ಸಿಬ್ಬಂದಿಯ ಪ್ರಕಾರ ರಾತ್ರಿ 10.30 ರ ಹೊತ್ತಿಗೆ ಮಾಥೆರಾನ್ ಬೆಟ್ಟಗಳ ತಪ್ಪಲಿನಲ್ಲಿರುವ ನೇರಲ್ ನಿಲ್ದಾಣಕ್ಕೆ ತರಲಾಯಿತು.

ಘಟನೆಯು ನೇರಲ್‌ನಿಂದ ಮಾಥೆರಾನ್‌ಗೆ ಕೊನೆಯ ರೈಲನ್ನು ರದ್ದುಗೊಳಿಸಿತು. ಈ ಕಾರಣದಿಂದ ಎರಡೂ ರೈಲುಗಳ ಪ್ರಯಾಣಿಕರ ಪ್ರಯಾಣ ದರವನ್ನು ಮರುಪಾವತಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Toy Train: ಮತ್ತೆ ಸಂಚಾರ ಆರಂಭಿಸಿದೆ ಟಾಯ್ ಟ್ರೈನ್; ಡಾರ್ಜಿಲಿಂಗ್​ಗೆ ಹೋಗಿ ಈ ರೈಲಿನಲ್ಲಿ ಪ್ರಯಾಣಿಸದಿದ್ದರೆ ಹೇಗೆ?

ಮಳೆಗಾಲದಲ್ಲಿ ನೆರಲ್ ಮತ್ತು ಮಾಥೆರಾನ್ ನಡುವೆ ಆಟಿಕೆ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೇರಲ್-ಮಾಥೆರಾನ್ ಆಟಿಕೆ ರೈಲು 100 ವರ್ಷಗಳಿಗಿಂತಲೂ ಹಳೆಯದು. ಇದು ಭಾರತದ ಕೆಲವು ಪರ್ವತ ರೈಲುಮಾರ್ಗಗಳಲ್ಲಿ (ವಿಭಾಗ) ಒಂದಾಗಿದೆ.

21 ಕಿಮೀ ಉದ್ದದ ನೇರಲ್-ಮಾಥೆರಾನ್ ನ್ಯಾರೋ ಗೇಜ್ ಟ್ರ್ಯಾಕ್ ಗಿರಿಧಾಮದ ಸುಂದರವಾದ ಘಾಟ್ ಮೂಲಕ ಹಾದುಹೋಗುತ್ತದೆ. ಸುರಕ್ಷತಾ ಕಾರಣಗಳಿಗಾಗಿ ಸಾಮಾನ್ಯವಾಗಿ ಜೂನ್​​​ನಿಂದ ಅಕ್ಟೋಬರ್ ವರೆಗೆ ಮಳೆಗಾಲದಲ್ಲಿ ನೆರಲ್ ಮತ್ತು ಮಾಥೆರಾನ್ ನಡುವೆ ಆಟಿಕೆ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ