AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

ಕೇಂದ್ರ ಸರ್ಕಾರದ ಜೊತೆ ಜನವರಿ 4ರಂದು ನಡೆಯಲಿರುವ ಸಭೆಯ ಮುನ್ನವೇ ರೈತ ಒಕ್ಕೂಟವೊಂದು ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಕಿಸಾನ್ ಪರೇಡ್ ಆಯೋಜಿಸುವುದಾಗಿ ಘೋಷಿಸಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!
ಕ್ರಾಂತಿಕಾರಿ ಕಿಸಾನ್ ಯೂನಿಯನ್​ನ ಅಧ್ಯಕ್ಷ ದರ್ಶನ್ ಪಾಲ್
guruganesh bhat
|

Updated on:Jan 02, 2021 | 2:36 PM

Share

ದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ‘ಟ್ರ್ಯಾಕ್ಟರ್​ ಕಿಸಾನ್ ಪರೇಡ್’ ನಡೆಸುತ್ತೇವೆ ಎಂದು ದೆಹಲಿ ಚಲೋ ಚಳುವಳಿ ನಿರತ ಕ್ರಾಂತಿಕಾರಿ ಕಿಸಾನ್ ಯೂನಿಯನ್​ನ ಅಧ್ಯಕ್ಷ ದರ್ಶನ್ ಪಾಲ್ ತಿಳಿಸಿದ್ದಾರೆ. ಅಲ್ಲದೆ, ಜನವರಿ 23ರಂದು ಎಲ್ಲಾ ರಾಜ್ಯಗಳ ರಾಜ್ಯಪಾಲರ ನಿವಾಸಗಳತ್ತ ಮೆರವಣಿಗೆ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅರ್ಧ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂಬ ಹೇಳಿಕೆಯನ್ನು ವ್ಯಂಗ್ಯ ಮಾಡಿರುವ ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್, ‘ಜನವರಿ 26ರ ಒಳಗೆ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಇಲ್ಲದಿದ್ದರೆ ರಾಜಧಾನಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ, ದೇಶದ ಎಲ್ಲಾ ಕೃಷಿ ಕುಟುಂಬಗಳು ಈ ಚಳುವಳಿಗೆ ಓರ್ವ ಸದಸ್ಯರನ್ನಾದರೂ ಕಳುಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅತ್ಯಂತ ಶಾಂತಿಯುತವಾಗಿ ಚಳುವಳಿ ನಡೆಸುತ್ತಿದ್ದೇವೆ. ಇನ್ನು ಮುಂದೆಯೂ ಅಷ್ಟೇ ಶಾಂತಿಯುತವಾಗಿ ಚಳುವಳಿ ಮುಂದುವರೆಸುತ್ತೇವೆ.ಈವರೆಗೆ ಚಳುವಳಿಯಲ್ಲಿ 50ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರಿಗೆ ಗೌರವ ಸಲ್ಲಿಸುವುದಾಗಿ ರೈತ ನಾಯಕ ಅಶೋಕ್ ಧವಳೆ ತಿಳಿಸಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟ ಚಳುವಳಿ ನಿರತ ರೈತ ಘಾಜಿಪುರ್ ಗಡಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ 57 ವರ್ಷದ ರೈತ ಮೋಹನ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತ 2022ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್​ನ ರೈತರನ್ನು ಸೆಳೆಯಲು ಆಮ್​ಆದ್ಮಿ ಪಕ್ಷ ಯತ್ನಿಸುತ್ತಿದೆ. ಆಮ್​ಆದ್ಮಿ ಪಕ್ಷದ ಭರ್ಜರಿ ಜಯದಿಂದ ಮಾತ್ರ ಪಂಜಾಬ್​ನ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಪಕ್ಷದ ಪಂಜಾಬ್ ಉಸ್ತುವಾರಿ ರಾಘವ್ ಛಡ್ಡಾ ಹೇಳಿದ್ದಾರೆ.

Delhi Chalo: ಬೋರಿಸ್ ಜಾನ್ಸನ್​ರ ಗಣರಾಜ್ಯೋತ್ಸವ ಭೇಟಿ ತಡೆಯುವಂತೆ ಇಂಗ್ಲೆಂಡ್ ಸಂಸದರಿಗೆ ಪತ್ರ ಬರೆಯಲಿವೆ ರೈತ ಒಕ್ಕೂಟಗಳು

Published On - 2:26 pm, Sat, 2 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!