AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

ಕೇಂದ್ರ ಸರ್ಕಾರದ ಜೊತೆ ಜನವರಿ 4ರಂದು ನಡೆಯಲಿರುವ ಸಭೆಯ ಮುನ್ನವೇ ರೈತ ಒಕ್ಕೂಟವೊಂದು ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಕಿಸಾನ್ ಪರೇಡ್ ಆಯೋಜಿಸುವುದಾಗಿ ಘೋಷಿಸಿದೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!
ಕ್ರಾಂತಿಕಾರಿ ಕಿಸಾನ್ ಯೂನಿಯನ್​ನ ಅಧ್ಯಕ್ಷ ದರ್ಶನ್ ಪಾಲ್
guruganesh bhat
|

Updated on:Jan 02, 2021 | 2:36 PM

Share

ದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ‘ಟ್ರ್ಯಾಕ್ಟರ್​ ಕಿಸಾನ್ ಪರೇಡ್’ ನಡೆಸುತ್ತೇವೆ ಎಂದು ದೆಹಲಿ ಚಲೋ ಚಳುವಳಿ ನಿರತ ಕ್ರಾಂತಿಕಾರಿ ಕಿಸಾನ್ ಯೂನಿಯನ್​ನ ಅಧ್ಯಕ್ಷ ದರ್ಶನ್ ಪಾಲ್ ತಿಳಿಸಿದ್ದಾರೆ. ಅಲ್ಲದೆ, ಜನವರಿ 23ರಂದು ಎಲ್ಲಾ ರಾಜ್ಯಗಳ ರಾಜ್ಯಪಾಲರ ನಿವಾಸಗಳತ್ತ ಮೆರವಣಿಗೆ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅರ್ಧ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂಬ ಹೇಳಿಕೆಯನ್ನು ವ್ಯಂಗ್ಯ ಮಾಡಿರುವ ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್, ‘ಜನವರಿ 26ರ ಒಳಗೆ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಇಲ್ಲದಿದ್ದರೆ ರಾಜಧಾನಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ, ದೇಶದ ಎಲ್ಲಾ ಕೃಷಿ ಕುಟುಂಬಗಳು ಈ ಚಳುವಳಿಗೆ ಓರ್ವ ಸದಸ್ಯರನ್ನಾದರೂ ಕಳುಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅತ್ಯಂತ ಶಾಂತಿಯುತವಾಗಿ ಚಳುವಳಿ ನಡೆಸುತ್ತಿದ್ದೇವೆ. ಇನ್ನು ಮುಂದೆಯೂ ಅಷ್ಟೇ ಶಾಂತಿಯುತವಾಗಿ ಚಳುವಳಿ ಮುಂದುವರೆಸುತ್ತೇವೆ.ಈವರೆಗೆ ಚಳುವಳಿಯಲ್ಲಿ 50ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರಿಗೆ ಗೌರವ ಸಲ್ಲಿಸುವುದಾಗಿ ರೈತ ನಾಯಕ ಅಶೋಕ್ ಧವಳೆ ತಿಳಿಸಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟ ಚಳುವಳಿ ನಿರತ ರೈತ ಘಾಜಿಪುರ್ ಗಡಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ 57 ವರ್ಷದ ರೈತ ಮೋಹನ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತ 2022ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್​ನ ರೈತರನ್ನು ಸೆಳೆಯಲು ಆಮ್​ಆದ್ಮಿ ಪಕ್ಷ ಯತ್ನಿಸುತ್ತಿದೆ. ಆಮ್​ಆದ್ಮಿ ಪಕ್ಷದ ಭರ್ಜರಿ ಜಯದಿಂದ ಮಾತ್ರ ಪಂಜಾಬ್​ನ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಪಕ್ಷದ ಪಂಜಾಬ್ ಉಸ್ತುವಾರಿ ರಾಘವ್ ಛಡ್ಡಾ ಹೇಳಿದ್ದಾರೆ.

Delhi Chalo: ಬೋರಿಸ್ ಜಾನ್ಸನ್​ರ ಗಣರಾಜ್ಯೋತ್ಸವ ಭೇಟಿ ತಡೆಯುವಂತೆ ಇಂಗ್ಲೆಂಡ್ ಸಂಸದರಿಗೆ ಪತ್ರ ಬರೆಯಲಿವೆ ರೈತ ಒಕ್ಕೂಟಗಳು

Published On - 2:26 pm, Sat, 2 January 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ