AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಕ್ಕೆ ಸಂಚಕಾರ: GST ಹೊಸ ನಿಯಮ ಹಿಂಪಡೆಯಲು ಹಣಕಾಸು ಸಚಿವೆ ನಿರ್ಮಲಾಗೆ ವ್ಯಾಪಾರಿಗಳಿಂದ ಒತ್ತಾಯ

ಸರಕು ಮತ್ತು ಸೇವಾ ತೆರಿಗೆ (GST)ಯ ಹೊಸ ಸೂಚನೆಗಳನ್ನು ಹಿಂಪಡೆಯುವಂತೆ ವ್ಯಾಪಾರಿಗಳು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹಾಗೂ ಜಿಎಸ್​ಟಿ ಕೌನ್ಸಿಲ್​ನ್ನು ಕೇಳಿಕೊಂಡಿದ್ದಾರೆ.

ಸಾಲಕ್ಕೆ ಸಂಚಕಾರ: GST ಹೊಸ ನಿಯಮ ಹಿಂಪಡೆಯಲು ಹಣಕಾಸು ಸಚಿವೆ ನಿರ್ಮಲಾಗೆ ವ್ಯಾಪಾರಿಗಳಿಂದ ಒತ್ತಾಯ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ 2021 ಮಂಡನೆ
TV9 Web
| Edited By: |

Updated on:Apr 06, 2022 | 11:13 PM

Share

ದೆಹಲಿ: ಸರಕು ಮತ್ತು ಸೇವಾ ತೆರಿಗೆ (GST)ಯ ಹೊಸ ನಿಯಮಗಳನ್ನು ಹಿಂಪಡೆಯುವಂತೆ ವ್ಯಾಪಾರಿಗಳು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹಾಗೂ ಜಿಎಸ್​ಟಿ ಕೌನ್ಸಿಲ್​ ಮನವಿ ಮಾಡಿಕೊಂಡಿದ್ದಾರೆ. ಹೊಸ ಜಿಎಸ್​ಟಿ ನಿಯಮಗಳನ್ನು ಕೆಲ ದಿನಗಳ ಹಿಂದಷ್ಟೇ ಹೊರಡಿಸಲಾಗಿತ್ತು. ಇದೀಗ ಅವುಗಳನ್ನು ಹಿಂಪಡೆದು, ಬದಲಾವಣೆ ತರುವಂತೆ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.

ಸ್ಕ್ರಾಪ್ ರೂಲ್ಸ್ 86B ಮತ್ತು 36(4), ಜನವರಿ 1, 2021ರಿಂದ ಜಾರಿಯಾಗಲಿದೆ. ಆದರೆ ಈ ಹೊಸ ನಿಯಮಗಳು ಜಿಎಸ್​ಟಿಯ ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್ (ITC)ಗೆ ತೊಡಕನ್ನು ಉಂಟುಮಾಡಲಿವೆ. ಆ ಮೂಲಕ, ಜಿಎಸ್​ಟಿಯ ಮೂಲಭೂತ ವಿಚಾರಕ್ಕೆ ವಿರುದ್ಧವಾಗಲಿದೆ ಎಂದು ವ್ಯಾಪಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿ.ಕೆ. ಬನ್ಸಾಲ್ ತಿಳಿಸಿದ್ದಾರೆ.

ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸಸ್ ಹಾಗೂ ಕಸ್ಟಮ್ಸ್ (CBIC) ನಿಯಮ 86B ಯನ್ನು ಜಿಎಸ್​ಟಿಯೊಂದಿಗೆ ಪರಿಚಯಿಸಿದೆ. ಈ ಮೂಲಕ, ತಿಂಗಳಿಗೆ ರೂ. 50 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ಇರುವ ವಾಣಿಜ್ಯ ವ್ಯವಹಾರಗಳು, ಖಡ್ಡಾಯವಾಗಿ ಕನಿಷ್ಠ ಶೇ. 1ರಷ್ಟು ಜಿಎಸ್​ಟಿಯನ್ನು ನಗದು ರೂಪದಲ್ಲಿ ನೀಡಬೇಕಾಗುತ್ತದೆ.

ನೂತನ ನಿಯಮ 36(4) ಅನುಸಾರ ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್​ನ್ನು (Input Tax Credit -ITC) ಬಳಕೆ ಮಾಡುವುದಕ್ಕೆ ನಿರ್ಬಂಧ ಹೇರುತ್ತದೆ. ವಹಿವಾಟುದಾರರು ಇನ್​ವಾಯ್ಸ್​/ ಸಾಲದ ಕರಾರು ಸಲ್ಲಿಸದಿದ್ದಲ್ಲಿ ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್​ ಸೌಲಭ್ಯ ಪಡೆಯುವ ವಿಚಾರದಲ್ಲಿ ನಿಯಂತ್ರಣ ವಿಧಿಸಿದೆ. GSTR 2B ಬಾಬತ್ತಿನಲ್ಲಿ ಪಡೆಯುವ ಸಾಲದ ಮೊತ್ತವನ್ನು ಶೇ. 10 ರಿಂದ ಶೇ. 5ಕ್ಕೆ ಕುಗ್ಗಿಸಿದೆ. ಇದರಿಂದ ವಹಿವಾಟುದಾರರಿಗೆ ಆ  ಎಕ್ಸ್​ಟ್ರಾ ಶೆ. 5ರಷ್ಟು ಮೊತ್ತದ ಖೋತಾ ಆಗಲಿದ್ದು, ಅದಕ್ಕೆ ವಹಿವಾಟುದಾರರು ಅಸಮಾಧಾನಗೊಂಡಿದ್ದಾರೆ.  ಇನ್​ಪುಟ್ ಟ್ಯಾಕ್ಸ್ ಕ್ರೆಡಿಟ್​ನ್ನು ಯಥಾಸ್ಥಿತಿಗೆ ತರುವಂತೆ ಮನವಿ ಮಾಡಿದ್ದಾರೆ.

Published On - 1:06 pm, Mon, 28 December 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ