AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಆ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು
ಕಾರು
ನಯನಾ ರಾಜೀವ್
|

Updated on: Nov 04, 2024 | 10:20 AM

Share

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಸಿಬ್ಬಂದಿ ಎಎಸ್‌ಐ ಪ್ರಮೋದ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶೈಲೇಶ್ ಚೌಹಾಣ್ ಅವರು ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೊಬೈಲ್ ಫೋನ್‌ಗಳ ಮೂಲಕ ಚಲನ್‌ಗಳನ್ನು ನೀಡುತ್ತಿದ್ದರು. ಆಗ ಕಾರೊಂದು ರೆಡ್ ಸಿಗ್ನಲ್​ ಜಂಪ್ ಮಾಡಿ ಹೋಗಿತ್ತು.

ಆಗ ಪೊಲೀಸರು ಕಾರಿನ ಚಾಲಕನಿಗೆ ನಿಲ್ಲುವಂತೆ ಸೂಚಿಸಿದರು, ಆದರೂ ನಿಲ್ಲಲಿಲ್ಲ, ಆಗ ಪೊಲೀಸರು ಕಾರು ನಿಲ್ಲಿಸಲು ಯತ್ನಿಸಿದಾಗ ಬಾನೆಟ್​ ಮೇಲೆ ಬಿದ್ದಿದ್ದಾರೆ. ಆದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ಸುಮಾರು 20 ಮೀಟರ್ ವರೆಗೆ ಪೊಲೀಸ್ ಸಿಬ್ಬಂದಿಯನ್ನು ಎಳೆದೊಯ್ದಿದ್ದಾನೆ. ಈ ಘಟನೆಯ ನಂತರ ಆರೋಪಿ ಚಾಲಕ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಹೊರಗಿದ್ದಾರೆ ದೆಹಲಿ ಪೊಲೀಸರ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಬಹಿರಂಗಗೊಂಡಿರುವ ವಾಹನವು ವಸಂತ್ ಕುಂಜ್ ಪ್ರದೇಶದಲ್ಲಿ ಜೈ ಭಗವಾನ್ ಹೆಸರಿನಲ್ಲಿ ನೋಂದಣಿಯಾಗಿದೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೋಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲ ಎಂದಾದರೆ ಜನ ಸಾಮಾನ್ಯರ ಗತಿಯೇನು ಎಂದು ವೀಡಿಯೋ ನೋಡಿದ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ