AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಆ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು
ಕಾರು
ನಯನಾ ರಾಜೀವ್
|

Updated on: Nov 04, 2024 | 10:20 AM

Share

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಸಿಬ್ಬಂದಿ ಎಎಸ್‌ಐ ಪ್ರಮೋದ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶೈಲೇಶ್ ಚೌಹಾಣ್ ಅವರು ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೊಬೈಲ್ ಫೋನ್‌ಗಳ ಮೂಲಕ ಚಲನ್‌ಗಳನ್ನು ನೀಡುತ್ತಿದ್ದರು. ಆಗ ಕಾರೊಂದು ರೆಡ್ ಸಿಗ್ನಲ್​ ಜಂಪ್ ಮಾಡಿ ಹೋಗಿತ್ತು.

ಆಗ ಪೊಲೀಸರು ಕಾರಿನ ಚಾಲಕನಿಗೆ ನಿಲ್ಲುವಂತೆ ಸೂಚಿಸಿದರು, ಆದರೂ ನಿಲ್ಲಲಿಲ್ಲ, ಆಗ ಪೊಲೀಸರು ಕಾರು ನಿಲ್ಲಿಸಲು ಯತ್ನಿಸಿದಾಗ ಬಾನೆಟ್​ ಮೇಲೆ ಬಿದ್ದಿದ್ದಾರೆ. ಆದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ಸುಮಾರು 20 ಮೀಟರ್ ವರೆಗೆ ಪೊಲೀಸ್ ಸಿಬ್ಬಂದಿಯನ್ನು ಎಳೆದೊಯ್ದಿದ್ದಾನೆ. ಈ ಘಟನೆಯ ನಂತರ ಆರೋಪಿ ಚಾಲಕ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಹೊರಗಿದ್ದಾರೆ ದೆಹಲಿ ಪೊಲೀಸರ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಬಹಿರಂಗಗೊಂಡಿರುವ ವಾಹನವು ವಸಂತ್ ಕುಂಜ್ ಪ್ರದೇಶದಲ್ಲಿ ಜೈ ಭಗವಾನ್ ಹೆಸರಿನಲ್ಲಿ ನೋಂದಣಿಯಾಗಿದೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೋಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲ ಎಂದಾದರೆ ಜನ ಸಾಮಾನ್ಯರ ಗತಿಯೇನು ಎಂದು ವೀಡಿಯೋ ನೋಡಿದ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ