AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಆ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು
ಕಾರು
ನಯನಾ ರಾಜೀವ್
|

Updated on: Nov 04, 2024 | 10:20 AM

Share

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಸಿಬ್ಬಂದಿ ಎಎಸ್‌ಐ ಪ್ರಮೋದ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶೈಲೇಶ್ ಚೌಹಾಣ್ ಅವರು ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೊಬೈಲ್ ಫೋನ್‌ಗಳ ಮೂಲಕ ಚಲನ್‌ಗಳನ್ನು ನೀಡುತ್ತಿದ್ದರು. ಆಗ ಕಾರೊಂದು ರೆಡ್ ಸಿಗ್ನಲ್​ ಜಂಪ್ ಮಾಡಿ ಹೋಗಿತ್ತು.

ಆಗ ಪೊಲೀಸರು ಕಾರಿನ ಚಾಲಕನಿಗೆ ನಿಲ್ಲುವಂತೆ ಸೂಚಿಸಿದರು, ಆದರೂ ನಿಲ್ಲಲಿಲ್ಲ, ಆಗ ಪೊಲೀಸರು ಕಾರು ನಿಲ್ಲಿಸಲು ಯತ್ನಿಸಿದಾಗ ಬಾನೆಟ್​ ಮೇಲೆ ಬಿದ್ದಿದ್ದಾರೆ. ಆದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ಸುಮಾರು 20 ಮೀಟರ್ ವರೆಗೆ ಪೊಲೀಸ್ ಸಿಬ್ಬಂದಿಯನ್ನು ಎಳೆದೊಯ್ದಿದ್ದಾನೆ. ಈ ಘಟನೆಯ ನಂತರ ಆರೋಪಿ ಚಾಲಕ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಹೊರಗಿದ್ದಾರೆ ದೆಹಲಿ ಪೊಲೀಸರ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಬಹಿರಂಗಗೊಂಡಿರುವ ವಾಹನವು ವಸಂತ್ ಕುಂಜ್ ಪ್ರದೇಶದಲ್ಲಿ ಜೈ ಭಗವಾನ್ ಹೆಸರಿನಲ್ಲಿ ನೋಂದಣಿಯಾಗಿದೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೋಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲ ಎಂದಾದರೆ ಜನ ಸಾಮಾನ್ಯರ ಗತಿಯೇನು ಎಂದು ವೀಡಿಯೋ ನೋಡಿದ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​