AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಆ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

Video: ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದ ಅಪ್ರಾಪ್ತರು
ಕಾರು
ನಯನಾ ರಾಜೀವ್
|

Updated on: Nov 04, 2024 | 10:20 AM

Share

ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್​ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಷ್ಟಾದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ದೆಹಲಿ ಪೊಲೀಸರ ಪ್ರಕಾರ, ಶನಿವಾರ ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಂಚಾರ ಪೊಲೀಸ್ ಸಿಬ್ಬಂದಿ ಎಎಸ್‌ಐ ಪ್ರಮೋದ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶೈಲೇಶ್ ಚೌಹಾಣ್ ಅವರು ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೊಬೈಲ್ ಫೋನ್‌ಗಳ ಮೂಲಕ ಚಲನ್‌ಗಳನ್ನು ನೀಡುತ್ತಿದ್ದರು. ಆಗ ಕಾರೊಂದು ರೆಡ್ ಸಿಗ್ನಲ್​ ಜಂಪ್ ಮಾಡಿ ಹೋಗಿತ್ತು.

ಆಗ ಪೊಲೀಸರು ಕಾರಿನ ಚಾಲಕನಿಗೆ ನಿಲ್ಲುವಂತೆ ಸೂಚಿಸಿದರು, ಆದರೂ ನಿಲ್ಲಲಿಲ್ಲ, ಆಗ ಪೊಲೀಸರು ಕಾರು ನಿಲ್ಲಿಸಲು ಯತ್ನಿಸಿದಾಗ ಬಾನೆಟ್​ ಮೇಲೆ ಬಿದ್ದಿದ್ದಾರೆ. ಆದರೂ ಚಾಲಕ ಕಾರು ನಿಲ್ಲಿಸಿರಲಿಲ್ಲ. ಸುಮಾರು 20 ಮೀಟರ್ ವರೆಗೆ ಪೊಲೀಸ್ ಸಿಬ್ಬಂದಿಯನ್ನು ಎಳೆದೊಯ್ದಿದ್ದಾನೆ. ಈ ಘಟನೆಯ ನಂತರ ಆರೋಪಿ ಚಾಲಕ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ರಸ್ತೆಯಲ್ಲಿ ಎಳೆದೊಯ್ದ ಚಾಲಕ; ವಿಡಿಯೋ ವೈರಲ್

ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಹೊರಗಿದ್ದಾರೆ ದೆಹಲಿ ಪೊಲೀಸರ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಬಹಿರಂಗಗೊಂಡಿರುವ ವಾಹನವು ವಸಂತ್ ಕುಂಜ್ ಪ್ರದೇಶದಲ್ಲಿ ಜೈ ಭಗವಾನ್ ಹೆಸರಿನಲ್ಲಿ ನೋಂದಣಿಯಾಗಿದೆ. ಸಮೀಪದ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೈರಲ್ ವಿಡಿಯೋಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರೇ ಸುರಕ್ಷಿತವಾಗಿಲ್ಲ ಎಂದಾದರೆ ಜನ ಸಾಮಾನ್ಯರ ಗತಿಯೇನು ಎಂದು ವೀಡಿಯೋ ನೋಡಿದ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ