AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಭರವಸೆ ಉಳಿದಿಲ್ಲ, ಪತ್ನಿ ಓಡಿ ಹೋಗಿದ್ದಕ್ಕೆ ನಾಲ್ವರು ಮಕ್ಕಳೊಂದಿಗೆ ನದಿಗೆ ಹಾರಿದ ವ್ಯಕ್ತಿ

ಪತ್ನಿ ಬೇರೊಬ್ಬ ವ್ಯಕ್ತಿ ಜತೆ ಓಡಿ ಹೋಗಿದ್ದಕ್ಕೆ ಪತಿ ತನ್ನ ಮಕ್ಕಳ ಜತೆ ನೀರಿಗೆ ಹಾರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶನಿವಾರ, ಗುಲಿಸ್ತಾ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಅವರು ತಕ್ಷಣ ಸ್ಥಳಕ್ಕೆ ತಲುಪಿ ಡೈವರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾತನಾಡಿ, ಮಕ್ಕಳನ್ನು ಮೆಹೆಕ್ (12), ಶಿಫಾ (5), ಅಮನ್ (3) ಮತ್ತು ಎಂಟು ತಿಂಗಳ ಶಿಶು ಇನೈಶಾ ಎಂದು ಗುರುತಿಸಲಾಗಿದೆ.

ಯಾವುದೇ ಭರವಸೆ ಉಳಿದಿಲ್ಲ, ಪತ್ನಿ ಓಡಿ ಹೋಗಿದ್ದಕ್ಕೆ ನಾಲ್ವರು ಮಕ್ಕಳೊಂದಿಗೆ ನದಿಗೆ ಹಾರಿದ ವ್ಯಕ್ತಿ
ನದಿಗೆ ಹಾರಿದ್ದ ವ್ಯಕ್ತಿ
ನಯನಾ ರಾಜೀವ್
|

Updated on: Oct 05, 2025 | 1:29 PM

Share

ಲಕ್ನೋ, ಅಕ್ಟೋಬರ್ 05: ಜೀವನ(Life)ದಲ್ಲಿ ಯಾವುದೇ ಭರವಸೆ ಉಳಿದಿಲ್ಲ ಎಂದು ವಿಡಿಯೋ ಮಾಡಿಟ್ಟು, ವ್ಯಕ್ತಿಯೊಬ್ಬ ನಾಲ್ವರು ಮಕ್ಕಳೊಂದಿಗೆ ನದಿಗೆ ಹಾರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಓಡಿ ಹೋಗಿದ್ದಳು, ಇದರಿಂದ ಮನೆಯಲ್ಲಿ ಅಶಾಂತಿ ನೆಲೆಸಿತ್ತು, ಸಲ್ಮಾನ್ ಶುಕ್ರವಾರ ತನ್ನ ಪತ್ನಿಯೊಂದಿಗಿನ ಜಗಳವಾಡಿದ್ದ, ಬಳಿಕ ಈ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ವೀಡಿಯೊ ರೆಕಾರ್ಡ್ ಮಾಡಿ ತನ್ನ ಸಹೋದರಿ ಗುಲಿಸ್ತಾಗೆ ಕಳುಹಿಸಿದ್ದಾನೆ.

ಅದರಲ್ಲಿ ತನ್ನ ಪತ್ನಿ ಖುಷ್ನುಮಾ ಮತ್ತು ಆಕೆಯ ಪ್ರಿಯಕರನೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಶನಿವಾರ, ಗುಲಿಸ್ತಾ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಅವರು ತಕ್ಷಣ ಸ್ಥಳಕ್ಕೆ ತಲುಪಿ ಡೈವರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾತನಾಡಿ, ಮಕ್ಕಳನ್ನು ಮೆಹೆಕ್ (12), ಶಿಫಾ (5), ಅಮನ್ (3) ಮತ್ತು ಎಂಟು ತಿಂಗಳ ಶಿಶು ಇನೈಶಾ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಆಸ್ತಿ ವಿವಾದ, ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಆತ್ಮಹತ್ಯೆ ಬೆದರಿಕೆ ಹಾಕಿದ ಮಗ

ಸಲ್ಮಾನ್ ಮತ್ತು ಖುಷ್ನುಮಾ ಮದುವೆಯಾಗಿ 15 ವರ್ಷಗಳಾಗಿವೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ, ಆದರೆ ಇತ್ತೀಚಿನ ತಿಂಗಳುಗಳಲ್ಲಿ ಜಗಳಗಳು ಹೆಚ್ಚಾಗಿದ್ದವು.ಈ ಶುಕ್ರವಾರ ಮತ್ತೆ ಜಗಳ ನಡೆದಿತ್ತು, ಬಳಿಕ ಆಕೆ ತನ್ನ ಗೆಳೆಯನ ಜತೆ ಓಡಿ ಹೋಗಿದ್ದಳು.

ಆ ದಿನ ನಂತರ, ಸಲ್ಮಾನ್ ತನ್ನ ನಾಲ್ವರು ಮಕ್ಕಳನ್ನು ಯಮುನಾ ಸೇತುವೆಗೆ ಕರೆದುಕೊಂಡು ಹೋಗಿ ನದಿಗೆ ಹಾರಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ, ಅವರಿಗಾಗಿ ನದಿಯಲ್ಲಿ ಶೋಧ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು