AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ಹುಮಾ ಖುರೇಷಿ ಸಂಬಂಧಿ ಆಸಿಫ್ ಹತ್ಯೆ

ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿಯನ್ನು ದೆಹಲಿಯಲ್ಲಿ ಕೊಲೆ(Murder) ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಾಮುದ್ದೀನ್ ಪ್ರದೇಶದಲ್ಲಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಮಾಹಿತಿಯ ಪ್ರಕಾರ, ಸ್ಕೂಟಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ವಿಷಯ ವಿಕೋಪಕ್ಕೆ ಹೋಗಿ ಆಸಿಫ್ ಖುರೇಷಿ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಘಟನೆ ನಿಜಾಮುದ್ದೀನ್ ಭೋಗಲ್ ಜಂಗ್ಪುರದಲ್ಲಿ ನಡೆದಿದೆ.

ಬಾಲಿವುಡ್ ನಟಿ ಹುಮಾ ಖುರೇಷಿ ಸಂಬಂಧಿ ಆಸಿಫ್ ಹತ್ಯೆ
ಹುಮಾ ಖುರೇಷಿ
ನಯನಾ ರಾಜೀವ್
|

Updated on: Aug 08, 2025 | 8:21 AM

Share

ನವದೆಹಲಿ, ಆಗಸ್ಟ್ 08: ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಆಸಿಫ್​ನನ್ನು ದೆಹಲಿಯಲ್ಲಿ ಕೊಲೆ(Murder) ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಾಮುದ್ದೀನ್ ಪ್ರದೇಶದಲ್ಲಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಮಾಹಿತಿಯ ಪ್ರಕಾರ, ಸ್ಕೂಟಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ವಿಷಯ ವಿಕೋಪಕ್ಕೆ ಹೋಗಿ ಆಸಿಫ್ ಖುರೇಷಿ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಘಟನೆ ನಿಜಾಮುದ್ದೀನ್ ಭೋಗಲ್ ಜಂಗ್ಪುರದಲ್ಲಿ ನಡೆದಿದೆ.

ಆಸಿಫ್ ಖುರೇಷಿಯವರ ಹತ್ಯೆಯಿಂದಾಗಿ ಖುರೇಷಿ ಕುಟುಂಬದಲ್ಲಿ ದುಃಖದ ವಾತಾವರಣವಿದೆ. ಹುಮಾ ಖುರೇಷಿಯ ತಂದೆ ಅಪರಾಧಿಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮಾಹಿತಿಯ ಪ್ರಕಾರ, ರಾತ್ರಿ 11 ಗಂಟೆ ಸುಮಾರಿಗೆ, ಸ್ಕೂಟಿಯನ್ನು ಗೇಟ್‌ನಿಂದ ತೆಗೆದು ಪಕ್ಕದಲ್ಲಿ ನಿಲ್ಲಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆರೋಪಿಗಳು ಆಸಿಫ್ ಖುರೇಷಿ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ನಂತರ, ಆಸಿಫ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಗೆ ತಲುಪಿದಾಗ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಇಷ್ಟು ಸಣ್ಣ ವಿಚಾರಕ್ಕೆ ಒಂದು ಜೀವವನ್ನೇ ತೆಗೆಯುತ್ತಾರೆ ಎಂದರೆ ಅವರು ಎಷ್ಟು ಕ್ರೂರಿಗಳಾಗಿರಬಹುದು ಎಂದು ಖುರೇಷಿ ಪತ್ನಿ ಹಾಗೂ ಕುಟುಂಬದವರು ಆರೋಪಿಸಿದ್ದಾರೆ. ಮೃತ ಆಸಿಫ್ ಖುರೇಷಿ ಅವರ ಪತ್ನಿ ಹೇಳುವಂತೆ, ಈ ಹಿಂದೆಯೂ ಆರೋಪಿಯು ಪಾರ್ಕಿಂಗ್ ವಿವಾದಕ್ಕಾಗಿ ನನ್ನ ಪತಿಯೊಂದಿಗೆ ಜಗಳವಾಡಿದ್ದ.

ಮತ್ತಷ್ಟು ಓದಿ: Video: ಒಂದು ಚೂರೂ ಮನುಷ್ಯತ್ವ ಇಲ್ವಾ?, ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ

ಗುರುವಾರ ರಾತ್ರಿ ನನ್ನ ಪತಿ ಕೆಲಸದಿಂದ ಮನೆಗೆ ಹಿಂದಿರುಗಿದಾಗ, ಪಕ್ಕದ ಮನೆಯವರ ಸ್ಕೂಟಿ ಮನೆಯ ಮುಂದೆ ನಿಂತಿತ್ತು. ಅದನ್ನು ತೆಗೆಯಲು ಅವರು ಕೇಳಿದ್ದಾರೆ. ಆದರೆ ಸ್ಕೂಟಿ ತೆಗೆಯುವ ಬದಲು ಬಾಯಿಗೆ ಬಂದಂತೆ ಮಾತನಾಡಲು ಶುರು ಮಾಡಿದ್ದರು. ಬಳಿಕ ಜೋರು ಜಗಳ ನಡೆದಿದೆ. ಆರೋಪಿ ಚೂಪಾದ ಚಾಕುವಿನಿಂದ ಅವರಿಗೆ ಇರಿದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹುಮಾ ಖುರೇಷಿ ತಂದೆ ಸಲೀಂ ಖುರೇಷಿ ನಾನು ಮನೆಯಲ್ಲಿ ಮಲಗಿದ್ದೆ ಎಂದು ಹೇಳಿದರು. ಆಸಿಫ್ ಕೊಲೆಯಾಗಿದ್ದಾನೆ ಎಂದು ನನಗೆ ಕರೆ ಬಂದಿತು. ಆಸಿಫ್ ಸ್ಕೂಟರ್ ತೆಗೆಯಲು ಕೇಳಿದ್ದ. ಈ ಬಗ್ಗೆ ಜಗಳ ನಡೆದಿತ್ತು. ಆಸಿಫ್ ಮೇಲೆ ಇಬ್ಬರು ಒಟ್ಟಿಗೆ ಹಲ್ಲೆ ನಡೆಸಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಹೇಳಿದ್ದಾರೆ

ಆಸಿಫ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಇದರ ನಂತರ ಆತನನ್ನು ಕೊಲ್ಲಲು ಏನು ಬಳಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರನ್ನು ಬಂಧಿಸಿದ್ದಾರೆ. ಜಗಳ ಕೇವಲ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದ್ದೇ ಅಥವಾ ಅವರ ನಡುವೆ ಹಳೆಯ ದ್ವೇಷವೇ ಎಂಬುದನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅಪರಾಧಕ್ಕೆ ಬಳಸಲಾದ ಆಯುಧವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ