AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಮದುವೆ ದಿನ ರಾತ್ರಿಯೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಮದುವೆ(Marriage) ದಿನ ರಾತ್ರಿಯೇ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿಯಲ್ಲಿ ನಡೆದಿದೆ. ಹರ್ಷಿತಾ ಎಂಬ 22 ವರ್ಷದ ವಧು ತನ್ನ ಮದುವೆಯ ಮೊದಲ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಆಂಧ್ರಪ್ರದೇಶ: ಮದುವೆ ದಿನ ರಾತ್ರಿಯೇ ಆತ್ಮಹತ್ಯೆಗೆ ಶರಣಾದ ಮಹಿಳೆ
ಮದುವೆ
ನಯನಾ ರಾಜೀವ್
|

Updated on: Aug 06, 2025 | 10:40 AM

Share

ಆಂಧ್ರಪ್ರದೇಶ, ಆಗಸ್ಟ್​ 06: ಮದುವೆ(Marriage) ದಿನದ ರಾತ್ರಿಯೇ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿಯಲ್ಲಿ ನಡೆದಿದೆ. ಹರ್ಷಿತಾ ಎಂಬ 22 ವರ್ಷದ ವಧು ತನ್ನ ಮದುವೆಯ ಮೊದಲ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಹರ್ಷಿತಾ ಕರ್ನಾಟಕದ ನಾಗೇಂದ್ರ ಎಂಬುವವರನ್ನು ಮದುವೆಯಾಗಿದ್ದರು. ದಂಪತಿ ವಧುವಿನ ಮನೆಯಲ್ಲಿದ್ದರು.ಮೊದಲ ರಾತ್ರಿಗೆ ಎಲ್ಲಾ ವ್ಯವಸ್ಥೆಗಳು ನಡೆಯುತ್ತಿದ್ದವು. ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದರು. ಅವರು ಹಿಂದಿರುಗಿದಾಗ ಕೋಣೆ ಲಾಕ್ ಆಗಿತ್ತು.

ಪದೇ ಪದೆ ಬಾಗಿಲು ಬಡಿದರೂ ಯಾರೂ ಉತ್ತರಿಸಲಿಲ್ಲ,ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಬಾಗಿಲು ಒಡೆದು ನೋಡಿದಾಗ ಹರ್ಷಿತಾ ಮೃತಪಟ್ಟಿರುವುದು ಕಂಡುಬಂದಿದೆ. ಅವರು ಆಕೆಯನ್ನು ಪೆನುಕೊಂಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಹಠಾತ್ ಮತ್ತು ಆಘಾತಕಾರಿ ಸಾವು ಎರಡೂ ಕುಟುಂಬಗಳಿಗೆ ತೀವ್ರ ದುಃಖ ತಂದಿದೆ.

ಮತ್ತಷ್ಟು ಓದಿ: Viral: ದ್ವೇಷದಿಂದ ಪ್ರೀತಿಯವರೆಗೆ: ಫ್ರೆಂಡ್‌ಶಿಪ್‌ ಡೇಯಂದು ವಿಚಿತ್ರ ಮ್ಯಾರೇಜ್ ಸ್ಟೋರಿ ರಿವೀಲ್ ಮಾಡಿದ ಯುವತಿ

ಯುವ ವಧುವಿನ ಈ ಕಠಿಣ ಹೆಜ್ಜೆಯ ಹಿಂದಿನ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಮದುವೆ ಸಮಾರಂಭದ ವಧುವಿನ ಫೋಟೊದಲ್ಲಿ ಯಾವ ನೋವೂ ಇದ್ದಂತೆ ಕಾಣಿಸುತ್ತಿರಲಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಸುತ್ತಲಿನ ಸಂದರ್ಭಗಳ ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದುರಂತಕ್ಕೆ ಕಾರಣವೇನಾಗಿರಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಪೊಲೀಸರು ಎರಡೂ ಕುಟುಂಬಗಳನ್ನು ಪ್ರಶ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!